AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಬಾಲಕಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: FSL ವರದಿಯಲ್ಲಿ ಸ್ಫೋಟಕ ಅಂಶ ಬಯಲು

ಕರ್ನಾಟಕದಲ್ಲಿ ಸಾಕಷ್ಟು ಚರ್ಚೆ ಮತ್ತು ಆತಂಕಕ್ಕೆ ಕಾರಣವಾಗಿದ್ದ ರಾಮನಗರದಲ್ಲಿ 14 ವರ್ಷದ ದಿವ್ಯಾಂಗ ಬಾಲಕಿ ಸಾವು ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಎಫ್‌ಎಸ್‌ಎಲ್ ವರದಿಯಲ್ಲಿ ಅತ್ಯಾಚಾರ ನಡೆದಿಲ್ಲ ಎಂದು ದೃಢಪಟ್ಟಿದೆ. ಆದರೆ ಪ್ರಕರಣದ ತನಿಖೆ ಬಗ್ಗೆ ಅಲೆಮಾರಿ ಹಕ್ಕಿಪಿಕ್ಕಿ ಬುಡುಕಟ್ಟು ಸಮುದಾಯದ ರಾಜ್ಯಾಧ್ಯಕ್ಷ ಜಗ್ಗು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಮನಗರ ಬಾಲಕಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: FSL ವರದಿಯಲ್ಲಿ ಸ್ಫೋಟಕ ಅಂಶ ಬಯಲು
ಬಾಲಕಿ ಸಾವು ಪ್ರಕರಣ
ಪ್ರಶಾಂತ್​ ಬಿ.
| Edited By: |

Updated on: May 18, 2025 | 12:08 PM

Share

ರಾಮನಗರ, ಮೇ 18: ನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ (girl) ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾಚಾರ ನಡೆದಿಲ್ಲವೆಂಬುದು ಎಫ್​ಎಸ್​ಎಲ್ (FSL)​ ವರದಿಯಲ್ಲಿ ಧೃಡಪಟ್ಟಿದೆ. ಜೊತೆಗೆ ಪ್ರಕರಣದ ತನಿಖೆ ಬಗ್ಗೆ ಅಲೆಮಾರಿ ಹಕ್ಕಿಪಿಕ್ಕಿ ಬುಡುಕಟ್ಟು ಸಮುದಾಯದ ರಾಜ್ಯಾಧ್ಯಕ್ಷ ಜಗ್ಗು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಮನಗರ ತಾಲೂಕಿನ ಭದ್ರಾಪುರ ‌ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದ್ದ 14 ವರ್ಷದ ದಿವ್ಯಾಂಗ ಬಾಲಕಿಯ ಕೊಲೆ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದ್ದು, ಮೇಲ್ನೋಟಕ್ಕೆ ಬಾಲಕಿಯದ್ದು ಕೊಲೆ ಅಲ್ಲ, ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾಳೆ. ಜೊತೆಗೆ ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲವೆಂಬುವುದು ಎಫ್​​ಎಸ್​ಎಲ್​​ ವರದಿಯಲ್ಲಿ ಧೃಡವಾಗಿದೆ.

ಇದನ್ನೂ ಓದಿ: ರಾಮನಗರದಲ್ಲಿ ಅಮಾನುಷ ಕೃತ್ಯ: ಅತ್ಯಾಚಾರ ಎಸಗಿ ಮೂಕ ಬಾಲಕಿ ಕೊಲೆ ಆರೋಪ

ಇದನ್ನೂ ಓದಿ
Image
ಪಂಜಾಬ್​​ನಲ್ಲಿ ಧರ್ಮಸ್ಥಳ ಯುವತಿ ನಿಗೂಢ ಸಾವು
Image
ಕನ್ನಡಿಗರಿಗೆ ಅಪಮಾನ ಕೇಸ್​​: ಮ್ಯಾನೇಜರ್ ಬಂಧನ, Gs​ ಸೂಟ್​ ಹೋಟೆಲ್​ ಸೀಜ್
Image
160 ಮೆಟ್ರೋ ಪಿಲ್ಲರ್​ಗಳಿಗೆ ಕಲರ್ ಲೈಟಿಂಗ್ಸ್: ಪ್ರಯಾಣಿಕರು ಆಕ್ರೋಶ
Image
ಅಜೆರ್ಬೈಜಾನ್ ಬಾಯ್ಕಾಟ್ಗೆ ಮುಂದಾದ ಕನ್ನಡಿಗರು: ಟ್ರಿಪ್​ ಕ್ಯಾನ್ಸಲ್

ಅಂದಹಾಗೆ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ 14 ವರ್ಷದ ದಿವ್ಯಾಂಗ ಬಾಲಕಿ ಮೇ 11 ರ ಸಂಜೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ಆನಂತರ ಮೇ 12 ರಂದು ಹಕ್ಕಿಪಿಕ್ಕಿ ಕಾಲೋನಿ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಬಾಲಕಿಯ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದರು. ಈ ನಿಟ್ಟಿನಲ್ಲಿ ಬಿಡದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ವಿಶೇಷ ತಂಡಗಳನ್ನ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದ ಬಿಡದಿ ಪೊಲೀಸರು,  ಮರಣೋತ್ತರ ಪರೀಕ್ಷೆ ಜೊತೆಗೆ ಎಫ್​ಎಸ್​ಎಲ್​ಗೂ ಕಳುಹಿಸಿದ್ದರು. ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿರುವುದು ಧೃಡವಾಗಿಲ್ಲ. ಜೊತೆ ಬಾಲಕಿಯ ಮೇಲೆ ಯಾವುದೇ ಸುಟ್ಟ ಗುರುತುಗಳು ಪತ್ತೆಯಾಗಿಲ್ಲ. ಅಲ್ಲದೆ ಸಿಸಿ ಟಿವಿ ಆಧಾರದ ಮೇಲೆ ಮೇಲ್ನೋಟಕ್ಕೆ ರೈಲು ಡಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ನಾನು ಮಾಜಿ ಸಂಸದ ಡಿಕೆ ಸುರೇಶ್​ ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಮಹಿಳೆ ಅರೆಸ್ಟ್​!

ಇನ್ನು ಪೊಲೀಸರ ಕೈ ಸೇರಿರುವ FSL ವರದಿಯಿಂದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲದಿರುವುದು ಗೊತ್ತಾಗಿದೆ. ಆದರೆ ಮರಣೋತ್ತರ ಪರೀಕ್ಷೆ ವರದಿಯಿಂದ ಇದು ಆತ್ಮಹತ್ಯೆಯಾ ಅಥವಾ ಕೊಲೆಯಾ ಎಂಬುವುದು ತಿಳಿಯಲಿದೆ. ಮರಣೋತ್ತರ ವರದಿ ಸೋಮವಾರ ಪೊಲೀಸರ ಕೈ ಸೇರಲಿದೆ. ಆ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಇನ್ನು ಬಾಲಕಿಯ ಸಾವಿನ ಸುದ್ದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ

ಈ ಬಗ್ಗೆ ಅಲೆಮಾರಿ ಹಕ್ಕಿಪಿಕ್ಕಿ ಬುಡುಕಟ್ಟು ಸಮುದಾಯದ ರಾಜ್ಯಾಧ್ಯಕ್ಷ ಜಗ್ಗು ಟಿವಿ9 ಜೊತೆ ಮಾತನಾಡಿದ್ದು, ಪ್ರಕರಣದ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಲಕಿ ಸಾವಿನ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ. ಕೆಲವು ಪ್ರಶ್ನೆಗಳನ್ನ ಪೊಲೀಸರಿಗೆ ಕೇಳಿದ್ದೇವೆ. ಆಕ್ಸಿಂಡೆಟ್ ಆಗಿದೆ ಎಂದು ಬಾಲಕಿಗೆ ಅನ್ಯಾಯ ಮಾಡಬೇಡಿ. ತನಿಖೆಯ ಉದ್ದೇಶ ಬೇರೆ ರೀತಿ ಇದೆ. ರೈಲು ಆಕ್ಸಿಂಡೆಟ್ ಆಗಿದೆ ಎಂಬುದು ಬೇರೆ ದಿಕ್ಕಿನಲ್ಲಿ ಇದೆ. ಕೆಲವು ವರದಿಗಳ ಮೇಲೆ ನಮಗೆ ನಂಬಿಕೆ ಬರುತ್ತಿಲ್ಲ. ಸಿಬಿಐ ತನಿಖೆಯಿಂದ ಮಾತ್ರ ನಮಗೆ ನಂಬಿಕೆ ಬರುತ್ತದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ