AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಚನ್ನಪಟ್ಟಣದಲ್ಲಿ ಬಿಹಾರ್ ಮೂಲದ ಯುವಕನ ಹತ್ಯೆ, ಗೋಕರ್ಣಕ್ಕೆ ಬಂದಿದ್ದ ಜಪಾನ್ ಮಹಿಳೆ ನಾಪತ್ತೆ

ರಾಜ್ಯದಲ್ಲಿ ಅಪರಾಧ ಸಂಖ್ಯೆಗಳು ಹೆಚ್ಚಳವಾಗುತ್ತಿದೆ. ಕ್ಷುಲ್ಲಕ ಕಾರಣಗಳಿಗೆ ಕೊಲೆಗಳು ನಡೆಯುತ್ತಿದ್ದು, ಅದರಂತೆ ಇದೀಗ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ಭೀಕರ ಹತ್ಯೆ ನಡೆದಿದೆ. ಇತ್ತ ಯಾದಗಿರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದರೆ, ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದಿದ್ದ ಜಪಾನ್​ ಮಹಿಳೆ ಕಾಣೆಯಾಗಿದ್ದಾರೆ.

ಪ್ರತ್ಯೇಕ ಘಟನೆ: ಚನ್ನಪಟ್ಟಣದಲ್ಲಿ ಬಿಹಾರ್ ಮೂಲದ ಯುವಕನ ಹತ್ಯೆ, ಗೋಕರ್ಣಕ್ಕೆ ಬಂದಿದ್ದ ಜಪಾನ್ ಮಹಿಳೆ ನಾಪತ್ತೆ
ಗೋಕರ್ಣದಲ್ಲಿ ಜಪಾನ್​ ಮಹಿಳೆ ನಾಪತ್ತೆ, ಚನ್ನಪಟ್ಟಣದಲ್ಲಿ ಯುವಕನ ಹತ್ಯೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 07, 2024 | 4:22 PM

Share

ರಾಮನಗರ, ಫೆ.07: ತಲೆ ಮೇಲೆ‌ ಕಲ್ಲು ಹಾಕಿ‌ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚನ್ನಪಟ್ಟಣ (Channapatana) ನಗರದ ಸಾತನೂರು ವೃತ್ತದ ಬಳಿ ನಡೆದಿದೆ. ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಮೃತ ಯುವಕ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚನ್ನಪಟ್ಟಣಪುರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ  ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಚನ್ನಪಟ್ಟಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಗೋಕರ್ಣಕ್ಕೆ ಆಗಮಿಸಿದ್ದ ಜಪಾನ್ ಮಹಿಳೆ ನಾಪತ್ತೆ

ಉತ್ತರ ಕನ್ನಡ: ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿದ್ದಾರೆ. ಎಮಿ ಯಮಾಝಕಿ(40) ಕಾಣೆಯಾದ ಮಹಿಳೆ. ಫೆ.5ರಂದು ಗೋಕರ್ಣದ ಬಂಗ್ಲೆಗುಡ್ಡದ ನೇಚರ್ ಕ್ಯಾಂಪಸ್​ನಲ್ಲಿ ತನ್ನ ಪತಿಯ ಜೊತೆ ಮಹಿಳೆ ತಂಗಿದ್ದರು. ಮುಂಜಾನೆ 10.30 ರ ಸಮಯಕ್ಕೆ ನೇಚರ್ ಕ್ಯಾಂಪಸ್ ನಿಂದ ಹೊರ ಹೋಗಿದ್ದ ಮಹಿಳೆ ನಾಪತ್ತೆಯಾಗಿದ್ದಾರೆ. ಈ ಕುರಿತು ಮಹಿಳೆಯ ಪತಿ ದೈ ಯಮಾಝಕಿ ಎಂಬುವವರು ಕೂಡಲೇ ಪತ್ನಿಯನ್ನು ಹುಡುಕಿಕೊಡುವಂತೆ ಗೋಕರ್ಣ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಡ್ರೈ ಫ್ರೂಟ್ಸ್​​ ಕೆಲಸ ಮಾಡಿಕೊಂಡಿದ್ದ ಯುವಕ, ರಂಜಾನ್​ಗೆ ಊರಿಗೆ ಹೋದ ಎರಡನೇ ದಿನವೇ ಬರ್ಬರವಾಗಿ ಹತ್ಯೆಗೀಡಾದ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಯಾದಗಿರಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಹೊರ ಭಾಗದಲ್ಲಿ ಪತ್ತೆಯಾಗಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೃತ ವ್ಯಕ್ತಿಯು 50 ವರ್ಷ ವಯಸ್ಸಿನ ಆಸುಪಾಸಿನವನು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಯಾದಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Wed, 7 February 24