AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದಲ್ಲಿ ಅಚ್ಚರಿಯ ಘಟನೆ: ವಿಚಿತ್ರವಾಗಿ ವರ್ತಿಸುತ್ತಿದ್ದ ಮಹಿಳೆ ಕಾಲಿಗೆ ಬೀಳುತ್ತಿದ್ದಂತೆ ಕುಸಿದು ಬಿದ್ದು ಅರ್ಚಕ ಸಾವು

ರಾಮನಗರದ ಕನಕಪುರದಲ್ಲೊಂದು ಅಚ್ಚರಿಯ ಘಟನೆ ಇಂದು ನಡೆದಿದೆ. ಅಗ್ನಿಕೊಂಡೋತ್ಸವದ ಅಂಗವಾಗಿ ಮಾವತ್ತೂರು ಗ್ರಾಮದಲ್ಲಿ ದೇವರ ಮೆರವಣಿಗೆ ನಡೆಯುತ್ತಿದ್ದಾಗ ಅರ್ಚಕರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಅಚ್ಚರಿ ಏನು ಗೊತ್ತಾ? ಇಲ್ಲಿದೆ ನೋಡಿ.

ಕನಕಪುರದಲ್ಲಿ ಅಚ್ಚರಿಯ ಘಟನೆ: ವಿಚಿತ್ರವಾಗಿ ವರ್ತಿಸುತ್ತಿದ್ದ ಮಹಿಳೆ ಕಾಲಿಗೆ ಬೀಳುತ್ತಿದ್ದಂತೆ ಕುಸಿದು ಬಿದ್ದು ಅರ್ಚಕ ಸಾವು
ಕನಕಪುರದ ಮಾವತ್ತೂರು ಗ್ರಾಮದಲ್ಲಿ ಅರ್ಚಕ ಕುಸಿದು ಬಿದ್ದು ಸಾವು
Rakesh Nayak Manchi
|

Updated on:Apr 03, 2023 | 4:05 PM

Share

ರಾಮನಗರ: ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಮಾವತ್ತೂರು ಗ್ರಾಮದ ಜನರು ಭಯ ಭಕ್ತಿ, ಶ್ರದ್ಧೆಯಿಂದ ಮಾವತ್ತೂರಮ್ಮ ದೇವಿಯನ್ನು (Mavatturamma Devi) ಪೂಜಿಸುತ್ತಾ ಬರುತ್ತಿದ್ದಾರೆ. ಆದರೆ ಇಂದು ಬೆಳಗ್ಗೆ ನಡೆಯಬಾರದ ಘಟನೆಯೊಂದು ನಡೆದೇ ಹೋಗಿದೆ. ದೇವಿಯ ಮೆರವಣಿಗೆ ಅರ್ಧಕ್ಕೆ ಸ್ಥಗಿತಗೊಳ್ಳುವಂತಾಗಿದೆ. ಹೌದು, ಮಾವತ್ತೂರಮ್ಮ ದೇವಿಯ ಮೆರವಣಿಗೆ ವೇಳೆ ದೇವಿಯ ಅರ್ಚಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಇದಕ್ಕೂ ಮುನ್ನ ಅಚ್ಚರಿಯ ಘಟನೆಯೊಂದು ಅಲ್ಲಿ ನಡೆದಿದೆ. ಅದೇನೆಂದರೆ, ಮಾವತ್ತೂರಮ್ಮ ದೇವಿಯ ಮೆರವಣಿಗೆ ನಡೆಯುತ್ತಿದ್ದಾಗ ಮಹಿಳೆಯ ವಿಚಿತ್ರ ಕುಣಿತ.

ಮಾವತ್ತೂರಮ್ಮ ದೇವಿಯ ಮೆರವಣಿಗೆ ರಸ್ತೆಯಲ್ಲಿ ಸಾಗುತ್ತಿದ್ದಾಗ ಮೆರವಣಿಯಲ್ಲಿ ಪಾಲ್ಗೊಂಡಿದ್ದ ಮಹಿಳೆ ವಿಚಿತ್ರವಾಗಿ ಕುಣಿಯಲು ಆರಂಭಿಸಿದ್ದಾಳೆ. ಇದನ್ನ ನೋಡಿದ ಮಾವತ್ತೂರಮ್ಮ ದೇವಿಯ ಅರ್ಚಕ ನಾಗರಾಜು (55) ಮಹಿಳೆಗೆ ಬೆತ್ತದಿಂದ ಹೊಡೆಯುತ್ತಾರೆ. ಈ ವೇಳೆ ಮಹಿಳೆ ಅರ್ಚಕನ ಕಾಲಿಗೆ ಬೀಳುತ್ತಿದ್ದಂತೆ ಅರ್ಚಕ ಸ್ಥಳದಲ್ಲೇ ಕುಸಿದು ಬೀಳುತ್ತಾರೆ. ತಕ್ಷಣ ಅರ್ಚಕರನ್ನು ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೂ ಮಾರ್ಗ ಮಧ್ಯೆ ನಾಗರಾಜು ಕೊನೆಯುಸಿರೆಳೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Mon, 3 April 23

Follow Us
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!