AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದಲ್ಲಿ ಅಚ್ಚರಿಯ ಘಟನೆ: ವಿಚಿತ್ರವಾಗಿ ವರ್ತಿಸುತ್ತಿದ್ದ ಮಹಿಳೆ ಕಾಲಿಗೆ ಬೀಳುತ್ತಿದ್ದಂತೆ ಕುಸಿದು ಬಿದ್ದು ಅರ್ಚಕ ಸಾವು

ರಾಮನಗರದ ಕನಕಪುರದಲ್ಲೊಂದು ಅಚ್ಚರಿಯ ಘಟನೆ ಇಂದು ನಡೆದಿದೆ. ಅಗ್ನಿಕೊಂಡೋತ್ಸವದ ಅಂಗವಾಗಿ ಮಾವತ್ತೂರು ಗ್ರಾಮದಲ್ಲಿ ದೇವರ ಮೆರವಣಿಗೆ ನಡೆಯುತ್ತಿದ್ದಾಗ ಅರ್ಚಕರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಅಚ್ಚರಿ ಏನು ಗೊತ್ತಾ? ಇಲ್ಲಿದೆ ನೋಡಿ.

ಕನಕಪುರದಲ್ಲಿ ಅಚ್ಚರಿಯ ಘಟನೆ: ವಿಚಿತ್ರವಾಗಿ ವರ್ತಿಸುತ್ತಿದ್ದ ಮಹಿಳೆ ಕಾಲಿಗೆ ಬೀಳುತ್ತಿದ್ದಂತೆ ಕುಸಿದು ಬಿದ್ದು ಅರ್ಚಕ ಸಾವು
ಕನಕಪುರದ ಮಾವತ್ತೂರು ಗ್ರಾಮದಲ್ಲಿ ಅರ್ಚಕ ಕುಸಿದು ಬಿದ್ದು ಸಾವು
Rakesh Nayak Manchi
|

Updated on:Apr 03, 2023 | 4:05 PM

Share

ರಾಮನಗರ: ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಮಾವತ್ತೂರು ಗ್ರಾಮದ ಜನರು ಭಯ ಭಕ್ತಿ, ಶ್ರದ್ಧೆಯಿಂದ ಮಾವತ್ತೂರಮ್ಮ ದೇವಿಯನ್ನು (Mavatturamma Devi) ಪೂಜಿಸುತ್ತಾ ಬರುತ್ತಿದ್ದಾರೆ. ಆದರೆ ಇಂದು ಬೆಳಗ್ಗೆ ನಡೆಯಬಾರದ ಘಟನೆಯೊಂದು ನಡೆದೇ ಹೋಗಿದೆ. ದೇವಿಯ ಮೆರವಣಿಗೆ ಅರ್ಧಕ್ಕೆ ಸ್ಥಗಿತಗೊಳ್ಳುವಂತಾಗಿದೆ. ಹೌದು, ಮಾವತ್ತೂರಮ್ಮ ದೇವಿಯ ಮೆರವಣಿಗೆ ವೇಳೆ ದೇವಿಯ ಅರ್ಚಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಇದಕ್ಕೂ ಮುನ್ನ ಅಚ್ಚರಿಯ ಘಟನೆಯೊಂದು ಅಲ್ಲಿ ನಡೆದಿದೆ. ಅದೇನೆಂದರೆ, ಮಾವತ್ತೂರಮ್ಮ ದೇವಿಯ ಮೆರವಣಿಗೆ ನಡೆಯುತ್ತಿದ್ದಾಗ ಮಹಿಳೆಯ ವಿಚಿತ್ರ ಕುಣಿತ.

ಮಾವತ್ತೂರಮ್ಮ ದೇವಿಯ ಮೆರವಣಿಗೆ ರಸ್ತೆಯಲ್ಲಿ ಸಾಗುತ್ತಿದ್ದಾಗ ಮೆರವಣಿಯಲ್ಲಿ ಪಾಲ್ಗೊಂಡಿದ್ದ ಮಹಿಳೆ ವಿಚಿತ್ರವಾಗಿ ಕುಣಿಯಲು ಆರಂಭಿಸಿದ್ದಾಳೆ. ಇದನ್ನ ನೋಡಿದ ಮಾವತ್ತೂರಮ್ಮ ದೇವಿಯ ಅರ್ಚಕ ನಾಗರಾಜು (55) ಮಹಿಳೆಗೆ ಬೆತ್ತದಿಂದ ಹೊಡೆಯುತ್ತಾರೆ. ಈ ವೇಳೆ ಮಹಿಳೆ ಅರ್ಚಕನ ಕಾಲಿಗೆ ಬೀಳುತ್ತಿದ್ದಂತೆ ಅರ್ಚಕ ಸ್ಥಳದಲ್ಲೇ ಕುಸಿದು ಬೀಳುತ್ತಾರೆ. ತಕ್ಷಣ ಅರ್ಚಕರನ್ನು ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೂ ಮಾರ್ಗ ಮಧ್ಯೆ ನಾಗರಾಜು ಕೊನೆಯುಸಿರೆಳೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Mon, 3 April 23

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ