AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದರೆ ಮೋದಿ ಸಂಪುಟ ಸೇರ್ತಾರಾ ಡಾ. ಮಂಜುನಾಥ್? ಶಾಸಕ ಮುನಿರತ್ನ ಹೇಳಿದ್ದಿಷ್ಟು

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ. ಸಿಎನ್​ ಮಂಜುನಾಥ್ ಮುಂದೆ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಊಹಾಪೋಹಗಳೂ ಹೆಚ್ಚಾಗಿವೆ. ಈ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಏನಂದರು? ಮುಂದೆ ಓದಿ.

ಗೆದ್ದರೆ ಮೋದಿ ಸಂಪುಟ ಸೇರ್ತಾರಾ ಡಾ. ಮಂಜುನಾಥ್? ಶಾಸಕ ಮುನಿರತ್ನ ಹೇಳಿದ್ದಿಷ್ಟು
ಮುನಿರತ್ನ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Mar 25, 2024 | 2:18 PM

Share

ರಾಮನಗರ, ಮಾರ್ಚ್​ 25: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್ (Dr CN Manjunath) ಕಣಕ್ಕಿಳಿದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಮಧ್ಯೆ, ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮುನಿರತ್ನ (Munirathna), ಬಿಜೆಪಿ (BJP) ಅಭ್ಯರ್ಥಿ ಮಂಜುನಾಥ್ ಪರ ಬ್ಯಾಟ್ ಬೀಸಿದ್ದಾರೆ. ಮಂಜುನಾಥ್ ಪರ ಮತ ಚಲಾಯಿಸುವಂತೆ ಮನವಿ ಮಾಡಿದ ಅವರು, ಬೇರೆಯವರಿಗೆ ಮತ ಹಾಕಿದರೆ ಸ್ವಾರ್ಥಕ್ಕೆ ಹಾಕಿದಂತೆ ಎಂದು ಸುರೇಶ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಡಾ. ಸಿಎನ್ ಮಂಜುನಾಥ್ ರಾಜಕಾರಣಕ್ಕೆ ಬಂದಿದ್ದು ಸ್ವಾರ್ಥಕ್ಕಲ್ಲ, ಜನಸೇವೆಗೆ. ಬೇರೆಯವರಿಗೆ ವೋಟ್ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತದೆ. ದೇಶದ 140 ಕೋಟಿ ಜನರಿಗೂ ಡಾ. ಮಂಜುನಾಥ್​ ಸೇವೆ ಬೇಕು. ಮುಂದೆ ರಚನೆಯಾಗುವ ಕೇಂದ್ರ ಸರ್ಕಾರದಲ್ಲಿ ಮೈತ್ರಿಯಿಂದ ಸಚಿವರು ಎಂದು ಯಾರಾದರೂ ಆದರೆ ಅದು ಡಾ. ಮಂಜುನಾಥ್ ಎಂದು ಮುನಿರತ್ನ ಹೇಳಿದ್ದಾರೆ.

ಸ್ವರ್ಗಕ್ಕೆ ಹೋಗಬೇಕೇ? ಮಂಜುನಾಥ್​ಗೆ ಮತ ನೀಡಿ ಎಂದ ಮುನಿರತ್ನ!

ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿನ ಸಚಿವ ಸಂಪುಟದಲ್ಲಿ ಡಾ. ಮಂಜುನಾಥ್​​ ಸಚಿವರಾಗುವುದು ಸತ್ಯ. ಸ್ವರ್ಗಕ್ಕೆ ಹೋಗಬೇಕೆಂಬ ಆಸೆ ಇದ್ದರೆ ಮಂಜುನಾಥ್​ಗೆ ಮತ ನೀಡಿ. ಒಂದು ತಪ್ಪು ಮತ ಹಾಕಿದರೆ ನಿಮಗೆ ಯಮ ಕಾಣಿಸುತ್ತಾನೆ. ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ ನೋಡಬಹುದು. ನಾನು ‘ಕಠಾರಿವೀರ ಸುರಸುಂದರಾಂಗಿ’ ಎಂಬ ಸಿನಿಮಾ ಮಾಡಿದ್ದೇನೆ. ಅದರಲ್ಲಿ ಸ್ವರ್ಗ, ನರಕ ಹೇಗಿರುತ್ತದೆ ಎಂದು ನೋಡಿದ್ದೇನೆ. ನಿಮಗೆ ರಾಮ ಬೇಕಾ, ರಾವಣ ಬೇಕಾ ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾರ್ಯಕರ್ತರ ಉತ್ಸಾಹ ನೋಡಿದರೆ ಗೆಲುವು ನಮ್ಮದೇ: ರಾಮನಗರದಲ್ಲಿ ಇನ್ನೂ ಏನೇನೆಂದರು ನೋಡಿ ಡಾ ಮಂಜುನಾಥ್

ಮತದಾನ ಮಾಡುವಾಗ ಜೆಡಿಎಸ್ ಇಲ್ಲ ಎಂದು ಗೊಂದಲಕ್ಕೆ ಒಳಗಾಗಬೇಡಿ. ಬಿಜೆಪಿ ಹೃದಯದಲ್ಲಿ ಜೆಡಿಎಸ್ ಇದೆ. ಮಂಜುನಾಥ್ ಹೃದಯದಲ್ಲಿ ಜೆಡಿಎಸ್ ಇದೆ, ಹಾಗಾಗಿ ಬಿಜೆಪಿಗೆ ಮತ ನೀಡಿ ಎಂದು ಮುನಿರತ್ನ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Mon, 25 March 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು