AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದರೆ ಮೋದಿ ಸಂಪುಟ ಸೇರ್ತಾರಾ ಡಾ. ಮಂಜುನಾಥ್? ಶಾಸಕ ಮುನಿರತ್ನ ಹೇಳಿದ್ದಿಷ್ಟು

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ. ಸಿಎನ್​ ಮಂಜುನಾಥ್ ಮುಂದೆ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಊಹಾಪೋಹಗಳೂ ಹೆಚ್ಚಾಗಿವೆ. ಈ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಏನಂದರು? ಮುಂದೆ ಓದಿ.

ಗೆದ್ದರೆ ಮೋದಿ ಸಂಪುಟ ಸೇರ್ತಾರಾ ಡಾ. ಮಂಜುನಾಥ್? ಶಾಸಕ ಮುನಿರತ್ನ ಹೇಳಿದ್ದಿಷ್ಟು
ಮುನಿರತ್ನ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on:Mar 25, 2024 | 2:18 PM

Share

ರಾಮನಗರ, ಮಾರ್ಚ್​ 25: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್ (Dr CN Manjunath) ಕಣಕ್ಕಿಳಿದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಮಧ್ಯೆ, ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮುನಿರತ್ನ (Munirathna), ಬಿಜೆಪಿ (BJP) ಅಭ್ಯರ್ಥಿ ಮಂಜುನಾಥ್ ಪರ ಬ್ಯಾಟ್ ಬೀಸಿದ್ದಾರೆ. ಮಂಜುನಾಥ್ ಪರ ಮತ ಚಲಾಯಿಸುವಂತೆ ಮನವಿ ಮಾಡಿದ ಅವರು, ಬೇರೆಯವರಿಗೆ ಮತ ಹಾಕಿದರೆ ಸ್ವಾರ್ಥಕ್ಕೆ ಹಾಕಿದಂತೆ ಎಂದು ಸುರೇಶ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಡಾ. ಸಿಎನ್ ಮಂಜುನಾಥ್ ರಾಜಕಾರಣಕ್ಕೆ ಬಂದಿದ್ದು ಸ್ವಾರ್ಥಕ್ಕಲ್ಲ, ಜನಸೇವೆಗೆ. ಬೇರೆಯವರಿಗೆ ವೋಟ್ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತದೆ. ದೇಶದ 140 ಕೋಟಿ ಜನರಿಗೂ ಡಾ. ಮಂಜುನಾಥ್​ ಸೇವೆ ಬೇಕು. ಮುಂದೆ ರಚನೆಯಾಗುವ ಕೇಂದ್ರ ಸರ್ಕಾರದಲ್ಲಿ ಮೈತ್ರಿಯಿಂದ ಸಚಿವರು ಎಂದು ಯಾರಾದರೂ ಆದರೆ ಅದು ಡಾ. ಮಂಜುನಾಥ್ ಎಂದು ಮುನಿರತ್ನ ಹೇಳಿದ್ದಾರೆ.

ಸ್ವರ್ಗಕ್ಕೆ ಹೋಗಬೇಕೇ? ಮಂಜುನಾಥ್​ಗೆ ಮತ ನೀಡಿ ಎಂದ ಮುನಿರತ್ನ!

ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿನ ಸಚಿವ ಸಂಪುಟದಲ್ಲಿ ಡಾ. ಮಂಜುನಾಥ್​​ ಸಚಿವರಾಗುವುದು ಸತ್ಯ. ಸ್ವರ್ಗಕ್ಕೆ ಹೋಗಬೇಕೆಂಬ ಆಸೆ ಇದ್ದರೆ ಮಂಜುನಾಥ್​ಗೆ ಮತ ನೀಡಿ. ಒಂದು ತಪ್ಪು ಮತ ಹಾಕಿದರೆ ನಿಮಗೆ ಯಮ ಕಾಣಿಸುತ್ತಾನೆ. ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ ನೋಡಬಹುದು. ನಾನು ‘ಕಠಾರಿವೀರ ಸುರಸುಂದರಾಂಗಿ’ ಎಂಬ ಸಿನಿಮಾ ಮಾಡಿದ್ದೇನೆ. ಅದರಲ್ಲಿ ಸ್ವರ್ಗ, ನರಕ ಹೇಗಿರುತ್ತದೆ ಎಂದು ನೋಡಿದ್ದೇನೆ. ನಿಮಗೆ ರಾಮ ಬೇಕಾ, ರಾವಣ ಬೇಕಾ ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾರ್ಯಕರ್ತರ ಉತ್ಸಾಹ ನೋಡಿದರೆ ಗೆಲುವು ನಮ್ಮದೇ: ರಾಮನಗರದಲ್ಲಿ ಇನ್ನೂ ಏನೇನೆಂದರು ನೋಡಿ ಡಾ ಮಂಜುನಾಥ್

ಮತದಾನ ಮಾಡುವಾಗ ಜೆಡಿಎಸ್ ಇಲ್ಲ ಎಂದು ಗೊಂದಲಕ್ಕೆ ಒಳಗಾಗಬೇಡಿ. ಬಿಜೆಪಿ ಹೃದಯದಲ್ಲಿ ಜೆಡಿಎಸ್ ಇದೆ. ಮಂಜುನಾಥ್ ಹೃದಯದಲ್ಲಿ ಜೆಡಿಎಸ್ ಇದೆ, ಹಾಗಾಗಿ ಬಿಜೆಪಿಗೆ ಮತ ನೀಡಿ ಎಂದು ಮುನಿರತ್ನ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Mon, 25 March 24

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್