AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದರೆ ಮೋದಿ ಸಂಪುಟ ಸೇರ್ತಾರಾ ಡಾ. ಮಂಜುನಾಥ್? ಶಾಸಕ ಮುನಿರತ್ನ ಹೇಳಿದ್ದಿಷ್ಟು

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ. ಸಿಎನ್​ ಮಂಜುನಾಥ್ ಮುಂದೆ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಊಹಾಪೋಹಗಳೂ ಹೆಚ್ಚಾಗಿವೆ. ಈ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಏನಂದರು? ಮುಂದೆ ಓದಿ.

ಗೆದ್ದರೆ ಮೋದಿ ಸಂಪುಟ ಸೇರ್ತಾರಾ ಡಾ. ಮಂಜುನಾಥ್? ಶಾಸಕ ಮುನಿರತ್ನ ಹೇಳಿದ್ದಿಷ್ಟು
ಮುನಿರತ್ನ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Mar 25, 2024 | 2:18 PM

Share

ರಾಮನಗರ, ಮಾರ್ಚ್​ 25: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್ (Dr CN Manjunath) ಕಣಕ್ಕಿಳಿದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಮಧ್ಯೆ, ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮುನಿರತ್ನ (Munirathna), ಬಿಜೆಪಿ (BJP) ಅಭ್ಯರ್ಥಿ ಮಂಜುನಾಥ್ ಪರ ಬ್ಯಾಟ್ ಬೀಸಿದ್ದಾರೆ. ಮಂಜುನಾಥ್ ಪರ ಮತ ಚಲಾಯಿಸುವಂತೆ ಮನವಿ ಮಾಡಿದ ಅವರು, ಬೇರೆಯವರಿಗೆ ಮತ ಹಾಕಿದರೆ ಸ್ವಾರ್ಥಕ್ಕೆ ಹಾಕಿದಂತೆ ಎಂದು ಸುರೇಶ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಡಾ. ಸಿಎನ್ ಮಂಜುನಾಥ್ ರಾಜಕಾರಣಕ್ಕೆ ಬಂದಿದ್ದು ಸ್ವಾರ್ಥಕ್ಕಲ್ಲ, ಜನಸೇವೆಗೆ. ಬೇರೆಯವರಿಗೆ ವೋಟ್ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತದೆ. ದೇಶದ 140 ಕೋಟಿ ಜನರಿಗೂ ಡಾ. ಮಂಜುನಾಥ್​ ಸೇವೆ ಬೇಕು. ಮುಂದೆ ರಚನೆಯಾಗುವ ಕೇಂದ್ರ ಸರ್ಕಾರದಲ್ಲಿ ಮೈತ್ರಿಯಿಂದ ಸಚಿವರು ಎಂದು ಯಾರಾದರೂ ಆದರೆ ಅದು ಡಾ. ಮಂಜುನಾಥ್ ಎಂದು ಮುನಿರತ್ನ ಹೇಳಿದ್ದಾರೆ.

ಸ್ವರ್ಗಕ್ಕೆ ಹೋಗಬೇಕೇ? ಮಂಜುನಾಥ್​ಗೆ ಮತ ನೀಡಿ ಎಂದ ಮುನಿರತ್ನ!

ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿನ ಸಚಿವ ಸಂಪುಟದಲ್ಲಿ ಡಾ. ಮಂಜುನಾಥ್​​ ಸಚಿವರಾಗುವುದು ಸತ್ಯ. ಸ್ವರ್ಗಕ್ಕೆ ಹೋಗಬೇಕೆಂಬ ಆಸೆ ಇದ್ದರೆ ಮಂಜುನಾಥ್​ಗೆ ಮತ ನೀಡಿ. ಒಂದು ತಪ್ಪು ಮತ ಹಾಕಿದರೆ ನಿಮಗೆ ಯಮ ಕಾಣಿಸುತ್ತಾನೆ. ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ ನೋಡಬಹುದು. ನಾನು ‘ಕಠಾರಿವೀರ ಸುರಸುಂದರಾಂಗಿ’ ಎಂಬ ಸಿನಿಮಾ ಮಾಡಿದ್ದೇನೆ. ಅದರಲ್ಲಿ ಸ್ವರ್ಗ, ನರಕ ಹೇಗಿರುತ್ತದೆ ಎಂದು ನೋಡಿದ್ದೇನೆ. ನಿಮಗೆ ರಾಮ ಬೇಕಾ, ರಾವಣ ಬೇಕಾ ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾರ್ಯಕರ್ತರ ಉತ್ಸಾಹ ನೋಡಿದರೆ ಗೆಲುವು ನಮ್ಮದೇ: ರಾಮನಗರದಲ್ಲಿ ಇನ್ನೂ ಏನೇನೆಂದರು ನೋಡಿ ಡಾ ಮಂಜುನಾಥ್

ಮತದಾನ ಮಾಡುವಾಗ ಜೆಡಿಎಸ್ ಇಲ್ಲ ಎಂದು ಗೊಂದಲಕ್ಕೆ ಒಳಗಾಗಬೇಡಿ. ಬಿಜೆಪಿ ಹೃದಯದಲ್ಲಿ ಜೆಡಿಎಸ್ ಇದೆ. ಮಂಜುನಾಥ್ ಹೃದಯದಲ್ಲಿ ಜೆಡಿಎಸ್ ಇದೆ, ಹಾಗಾಗಿ ಬಿಜೆಪಿಗೆ ಮತ ನೀಡಿ ಎಂದು ಮುನಿರತ್ನ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Mon, 25 March 24

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು