ಗೆದ್ದರೆ ಮೋದಿ ಸಂಪುಟ ಸೇರ್ತಾರಾ ಡಾ. ಮಂಜುನಾಥ್? ಶಾಸಕ ಮುನಿರತ್ನ ಹೇಳಿದ್ದಿಷ್ಟು

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ. ಸಿಎನ್​ ಮಂಜುನಾಥ್ ಮುಂದೆ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಊಹಾಪೋಹಗಳೂ ಹೆಚ್ಚಾಗಿವೆ. ಈ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಏನಂದರು? ಮುಂದೆ ಓದಿ.

ಗೆದ್ದರೆ ಮೋದಿ ಸಂಪುಟ ಸೇರ್ತಾರಾ ಡಾ. ಮಂಜುನಾಥ್? ಶಾಸಕ ಮುನಿರತ್ನ ಹೇಳಿದ್ದಿಷ್ಟು
ಮುನಿರತ್ನ
Edited By:

Updated on: Mar 25, 2024 | 2:18 PM

ರಾಮನಗರ, ಮಾರ್ಚ್​ 25: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್ (Dr CN Manjunath) ಕಣಕ್ಕಿಳಿದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಮಧ್ಯೆ, ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮುನಿರತ್ನ (Munirathna), ಬಿಜೆಪಿ (BJP) ಅಭ್ಯರ್ಥಿ ಮಂಜುನಾಥ್ ಪರ ಬ್ಯಾಟ್ ಬೀಸಿದ್ದಾರೆ. ಮಂಜುನಾಥ್ ಪರ ಮತ ಚಲಾಯಿಸುವಂತೆ ಮನವಿ ಮಾಡಿದ ಅವರು, ಬೇರೆಯವರಿಗೆ ಮತ ಹಾಕಿದರೆ ಸ್ವಾರ್ಥಕ್ಕೆ ಹಾಕಿದಂತೆ ಎಂದು ಸುರೇಶ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಡಾ. ಸಿಎನ್ ಮಂಜುನಾಥ್ ರಾಜಕಾರಣಕ್ಕೆ ಬಂದಿದ್ದು ಸ್ವಾರ್ಥಕ್ಕಲ್ಲ, ಜನಸೇವೆಗೆ. ಬೇರೆಯವರಿಗೆ ವೋಟ್ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತದೆ. ದೇಶದ 140 ಕೋಟಿ ಜನರಿಗೂ ಡಾ. ಮಂಜುನಾಥ್​ ಸೇವೆ ಬೇಕು. ಮುಂದೆ ರಚನೆಯಾಗುವ ಕೇಂದ್ರ ಸರ್ಕಾರದಲ್ಲಿ ಮೈತ್ರಿಯಿಂದ ಸಚಿವರು ಎಂದು ಯಾರಾದರೂ ಆದರೆ ಅದು ಡಾ. ಮಂಜುನಾಥ್ ಎಂದು ಮುನಿರತ್ನ ಹೇಳಿದ್ದಾರೆ.

ಸ್ವರ್ಗಕ್ಕೆ ಹೋಗಬೇಕೇ? ಮಂಜುನಾಥ್​ಗೆ ಮತ ನೀಡಿ ಎಂದ ಮುನಿರತ್ನ!

ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿನ ಸಚಿವ ಸಂಪುಟದಲ್ಲಿ ಡಾ. ಮಂಜುನಾಥ್​​ ಸಚಿವರಾಗುವುದು ಸತ್ಯ. ಸ್ವರ್ಗಕ್ಕೆ ಹೋಗಬೇಕೆಂಬ ಆಸೆ ಇದ್ದರೆ ಮಂಜುನಾಥ್​ಗೆ ಮತ ನೀಡಿ. ಒಂದು ತಪ್ಪು ಮತ ಹಾಕಿದರೆ ನಿಮಗೆ ಯಮ ಕಾಣಿಸುತ್ತಾನೆ. ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ ನೋಡಬಹುದು. ನಾನು ‘ಕಠಾರಿವೀರ ಸುರಸುಂದರಾಂಗಿ’ ಎಂಬ ಸಿನಿಮಾ ಮಾಡಿದ್ದೇನೆ. ಅದರಲ್ಲಿ ಸ್ವರ್ಗ, ನರಕ ಹೇಗಿರುತ್ತದೆ ಎಂದು ನೋಡಿದ್ದೇನೆ. ನಿಮಗೆ ರಾಮ ಬೇಕಾ, ರಾವಣ ಬೇಕಾ ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾರ್ಯಕರ್ತರ ಉತ್ಸಾಹ ನೋಡಿದರೆ ಗೆಲುವು ನಮ್ಮದೇ: ರಾಮನಗರದಲ್ಲಿ ಇನ್ನೂ ಏನೇನೆಂದರು ನೋಡಿ ಡಾ ಮಂಜುನಾಥ್

ಮತದಾನ ಮಾಡುವಾಗ ಜೆಡಿಎಸ್ ಇಲ್ಲ ಎಂದು ಗೊಂದಲಕ್ಕೆ ಒಳಗಾಗಬೇಡಿ. ಬಿಜೆಪಿ ಹೃದಯದಲ್ಲಿ ಜೆಡಿಎಸ್ ಇದೆ. ಮಂಜುನಾಥ್ ಹೃದಯದಲ್ಲಿ ಜೆಡಿಎಸ್ ಇದೆ, ಹಾಗಾಗಿ ಬಿಜೆಪಿಗೆ ಮತ ನೀಡಿ ಎಂದು ಮುನಿರತ್ನ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Mon, 25 March 24

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us