AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಿಸಿದೆ: ರಾಹುಲ್​ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು

ದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೇಳ ಹೆಸರು ಇಲ್ಲದಂತಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನಬಂದಂತೆ ಮಾತಾಡಿದರೆ ಪ್ರಯೋಜನವಾಗಲ್ಲ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ಬಿ ಎಸ್​ ಯಡಿಯೂರಪ್ಪ ತಿರುಗೇಟು

ಭಾರತ್​ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಿಸಿದೆ: ರಾಹುಲ್​ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
TV9 Web
| Edited By: |

Updated on: Oct 09, 2022 | 4:16 PM

Share

ರಾಮನಗರ: ಆ ಮನುಷ್ಯನಿಗೆ (ರಾಹುಲ್​ ಗಾಂಧಿ) (Rahul Gandhi)  ಗೆ ನಾನು ಪ್ರಶ್ನೆ ಮಾಡುತ್ತೇನೆ, ಉತ್ತರ ಪ್ರದೇಶದಲ್ಲಿ ನಿಮ್ಮ ತಂಗಿ (ಪ್ರಿಯಾಂಕಾ ಗಾಂಧಿ), ಮಹಿಳೆಯರನ್ನು ಸೇರಿಸಿ ಪ್ರಚಾರ ಮಾಡಿದರಲ್ಲಾ ಏನಾಯ್ತು? ಹಾಗೇ  ಭಾರತ್ ಜೋಡೋ (Bharat Jodo Yatra)  ದಿಂದ ಏನೂ ಆಗಲ್ಲ ಎಂದು ಕಾಂಗ್ರೇಸ್​ನ ಭಾರತ್ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಳ ಮಾಡಿದೆ ಎಂಬ ರಾಹಲ್​ ಗಾಂಧಿ ಹೇಳಿಕೆಗೆ ರಾಮನಗರದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಬಿ ಎಸ್​ ಯಡಿಯೂರಪ್ಪ (BS Yadiyurappa) , ರಾಹುಲ್​ ಗಾಂಧಿ ವಿರುದ್ಧ  ತಿರುಗೇಟು ನೀಡಿದ್ದಾರೆ ಮಾಡಿದ್ದಾರೆ.

ದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೇಳ ಹೆಸರು ಇಲ್ಲದಂತಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನಬಂದಂತೆ ಮಾತಾಡಿದರೆ ಪ್ರಯೋಜನವಾಗಲ್ಲ. ಕರ್ನಾಟಕದಲ್ಲೂ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಟಿಪ್ಪು ಎಕ್ಸ್​ಪ್ರೆಸ್ ರೈಲಿಗೆ, ಒಡೆಯರ್​ ಎಕ್ಸ್​ಪ್ರೆಸ್ ಎಂದು ಮರುನಾಮಕರಣ ಮಾಡಿರುವುದಕ್ಕೆ ವಿರೋಧ ಪಕ್ಷಗಳು ವಿರೋಧಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಅವರಿಗೆ ಅಲ್ಪ ಸಂಖ್ಯಾತರನ್ನು ಒಲೈಸುವ ಚಟ ಇದೆ. ಹೀಗಾಗಿ ಈ ರೀತಿಯ ಮಾತುಗಳನ್ನು ಆಡುತ್ತಾರೆ. ಇಡೀ ದೇಶ ಹಾಗೂ ರಾಜ್ಯದ ಜನರು ಇದನ್ನು ಸ್ವಾಗತಿಸಿದ್ದಾರೆ. ಎಲ್ಲರೂ ಸ್ವಾಗತ ಮಾಡುವ ಈ ಸಂಧರ್ಭದಲ್ಲಿ ಕೆಲವರಿಗೆ ಬೇಜಾರಾಗೋದು ಸಹಜ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು ಅದನ್ನು ನನ್ನ ಹತ್ತಿರ ಕೇಳಬೇಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕೇಳಿ. ರಾಜ್ಯದಲ್ಲಿ 140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಯಾರೇ ಎಷ್ಟೇ ಬೊಬ್ಬೆ ಹೊಡೆದರೂ ನಾವೇ ಅಧಿಕಾರಕ್ಕೆ ಬರುತ್ತೇವೆ. 2 ದಿನದ ಬಳಿಕ 2 ತಂಡವಾಗಿ ರಾಜ್ಯ ಪ್ರವಾಸ ಆರಂಭ ಮಾಡುತ್ತೇವೆ. ಸುಮಾರು 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ