AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಿಸಿದೆ: ರಾಹುಲ್​ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು

ದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೇಳ ಹೆಸರು ಇಲ್ಲದಂತಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನಬಂದಂತೆ ಮಾತಾಡಿದರೆ ಪ್ರಯೋಜನವಾಗಲ್ಲ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ಬಿ ಎಸ್​ ಯಡಿಯೂರಪ್ಪ ತಿರುಗೇಟು

ಭಾರತ್​ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಿಸಿದೆ: ರಾಹುಲ್​ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
TV9 Web
| Edited By: ವಿವೇಕ ಬಿರಾದಾರ|

Updated on: Oct 09, 2022 | 4:16 PM

Share

ರಾಮನಗರ: ಆ ಮನುಷ್ಯನಿಗೆ (ರಾಹುಲ್​ ಗಾಂಧಿ) (Rahul Gandhi)  ಗೆ ನಾನು ಪ್ರಶ್ನೆ ಮಾಡುತ್ತೇನೆ, ಉತ್ತರ ಪ್ರದೇಶದಲ್ಲಿ ನಿಮ್ಮ ತಂಗಿ (ಪ್ರಿಯಾಂಕಾ ಗಾಂಧಿ), ಮಹಿಳೆಯರನ್ನು ಸೇರಿಸಿ ಪ್ರಚಾರ ಮಾಡಿದರಲ್ಲಾ ಏನಾಯ್ತು? ಹಾಗೇ  ಭಾರತ್ ಜೋಡೋ (Bharat Jodo Yatra)  ದಿಂದ ಏನೂ ಆಗಲ್ಲ ಎಂದು ಕಾಂಗ್ರೇಸ್​ನ ಭಾರತ್ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಳ ಮಾಡಿದೆ ಎಂಬ ರಾಹಲ್​ ಗಾಂಧಿ ಹೇಳಿಕೆಗೆ ರಾಮನಗರದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಬಿ ಎಸ್​ ಯಡಿಯೂರಪ್ಪ (BS Yadiyurappa) , ರಾಹುಲ್​ ಗಾಂಧಿ ವಿರುದ್ಧ  ತಿರುಗೇಟು ನೀಡಿದ್ದಾರೆ ಮಾಡಿದ್ದಾರೆ.

ದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೇಳ ಹೆಸರು ಇಲ್ಲದಂತಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನಬಂದಂತೆ ಮಾತಾಡಿದರೆ ಪ್ರಯೋಜನವಾಗಲ್ಲ. ಕರ್ನಾಟಕದಲ್ಲೂ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಟಿಪ್ಪು ಎಕ್ಸ್​ಪ್ರೆಸ್ ರೈಲಿಗೆ, ಒಡೆಯರ್​ ಎಕ್ಸ್​ಪ್ರೆಸ್ ಎಂದು ಮರುನಾಮಕರಣ ಮಾಡಿರುವುದಕ್ಕೆ ವಿರೋಧ ಪಕ್ಷಗಳು ವಿರೋಧಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಅವರಿಗೆ ಅಲ್ಪ ಸಂಖ್ಯಾತರನ್ನು ಒಲೈಸುವ ಚಟ ಇದೆ. ಹೀಗಾಗಿ ಈ ರೀತಿಯ ಮಾತುಗಳನ್ನು ಆಡುತ್ತಾರೆ. ಇಡೀ ದೇಶ ಹಾಗೂ ರಾಜ್ಯದ ಜನರು ಇದನ್ನು ಸ್ವಾಗತಿಸಿದ್ದಾರೆ. ಎಲ್ಲರೂ ಸ್ವಾಗತ ಮಾಡುವ ಈ ಸಂಧರ್ಭದಲ್ಲಿ ಕೆಲವರಿಗೆ ಬೇಜಾರಾಗೋದು ಸಹಜ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು ಅದನ್ನು ನನ್ನ ಹತ್ತಿರ ಕೇಳಬೇಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕೇಳಿ. ರಾಜ್ಯದಲ್ಲಿ 140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಯಾರೇ ಎಷ್ಟೇ ಬೊಬ್ಬೆ ಹೊಡೆದರೂ ನಾವೇ ಅಧಿಕಾರಕ್ಕೆ ಬರುತ್ತೇವೆ. 2 ದಿನದ ಬಳಿಕ 2 ತಂಡವಾಗಿ ರಾಜ್ಯ ಪ್ರವಾಸ ಆರಂಭ ಮಾಡುತ್ತೇವೆ. ಸುಮಾರು 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ