AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಿಸಿದೆ: ರಾಹುಲ್​ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು

ದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೇಳ ಹೆಸರು ಇಲ್ಲದಂತಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನಬಂದಂತೆ ಮಾತಾಡಿದರೆ ಪ್ರಯೋಜನವಾಗಲ್ಲ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ಬಿ ಎಸ್​ ಯಡಿಯೂರಪ್ಪ ತಿರುಗೇಟು

ಭಾರತ್​ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಿಸಿದೆ: ರಾಹುಲ್​ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
TV9 Web
| Updated By: ವಿವೇಕ ಬಿರಾದಾರ|

Updated on: Oct 09, 2022 | 4:16 PM

Share

ರಾಮನಗರ: ಆ ಮನುಷ್ಯನಿಗೆ (ರಾಹುಲ್​ ಗಾಂಧಿ) (Rahul Gandhi)  ಗೆ ನಾನು ಪ್ರಶ್ನೆ ಮಾಡುತ್ತೇನೆ, ಉತ್ತರ ಪ್ರದೇಶದಲ್ಲಿ ನಿಮ್ಮ ತಂಗಿ (ಪ್ರಿಯಾಂಕಾ ಗಾಂಧಿ), ಮಹಿಳೆಯರನ್ನು ಸೇರಿಸಿ ಪ್ರಚಾರ ಮಾಡಿದರಲ್ಲಾ ಏನಾಯ್ತು? ಹಾಗೇ  ಭಾರತ್ ಜೋಡೋ (Bharat Jodo Yatra)  ದಿಂದ ಏನೂ ಆಗಲ್ಲ ಎಂದು ಕಾಂಗ್ರೇಸ್​ನ ಭಾರತ್ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಳ ಮಾಡಿದೆ ಎಂಬ ರಾಹಲ್​ ಗಾಂಧಿ ಹೇಳಿಕೆಗೆ ರಾಮನಗರದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಬಿ ಎಸ್​ ಯಡಿಯೂರಪ್ಪ (BS Yadiyurappa) , ರಾಹುಲ್​ ಗಾಂಧಿ ವಿರುದ್ಧ  ತಿರುಗೇಟು ನೀಡಿದ್ದಾರೆ ಮಾಡಿದ್ದಾರೆ.

ದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೇಳ ಹೆಸರು ಇಲ್ಲದಂತಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನಬಂದಂತೆ ಮಾತಾಡಿದರೆ ಪ್ರಯೋಜನವಾಗಲ್ಲ. ಕರ್ನಾಟಕದಲ್ಲೂ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಟಿಪ್ಪು ಎಕ್ಸ್​ಪ್ರೆಸ್ ರೈಲಿಗೆ, ಒಡೆಯರ್​ ಎಕ್ಸ್​ಪ್ರೆಸ್ ಎಂದು ಮರುನಾಮಕರಣ ಮಾಡಿರುವುದಕ್ಕೆ ವಿರೋಧ ಪಕ್ಷಗಳು ವಿರೋಧಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಅವರಿಗೆ ಅಲ್ಪ ಸಂಖ್ಯಾತರನ್ನು ಒಲೈಸುವ ಚಟ ಇದೆ. ಹೀಗಾಗಿ ಈ ರೀತಿಯ ಮಾತುಗಳನ್ನು ಆಡುತ್ತಾರೆ. ಇಡೀ ದೇಶ ಹಾಗೂ ರಾಜ್ಯದ ಜನರು ಇದನ್ನು ಸ್ವಾಗತಿಸಿದ್ದಾರೆ. ಎಲ್ಲರೂ ಸ್ವಾಗತ ಮಾಡುವ ಈ ಸಂಧರ್ಭದಲ್ಲಿ ಕೆಲವರಿಗೆ ಬೇಜಾರಾಗೋದು ಸಹಜ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು ಅದನ್ನು ನನ್ನ ಹತ್ತಿರ ಕೇಳಬೇಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕೇಳಿ. ರಾಜ್ಯದಲ್ಲಿ 140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಯಾರೇ ಎಷ್ಟೇ ಬೊಬ್ಬೆ ಹೊಡೆದರೂ ನಾವೇ ಅಧಿಕಾರಕ್ಕೆ ಬರುತ್ತೇವೆ. 2 ದಿನದ ಬಳಿಕ 2 ತಂಡವಾಗಿ ರಾಜ್ಯ ಪ್ರವಾಸ ಆರಂಭ ಮಾಡುತ್ತೇವೆ. ಸುಮಾರು 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?