AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ದೇವಸ್ಥಾನ ಬಳಿಯ ನಲ್ಲಿ ನೀರು ತರಲು ಹೋದ ದಲಿತ ಬಾಲಕಿಗೆ ನಿಂದಿಸಿದ ಪೂಜಾರಿ: ಕೇಸ್​ ಬುಕ್

ರಾಮನಗರದಲ್ಲಿ 13 ವರ್ಷದ ದಲಿತ ಬಾಲಕಿ ತನ್ನ ಮನೆಯ ಸಮೀಪವೇ ಇದ್ದ ಮಾರಮ್ಮ ದೇವಸ್ಥಾನದ ಆವರಣದಲ್ಲಿರುವ ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರನ್ನು ತರಲು ಹೋಗಿದ್ದಳು. ಈ ವೇಳೆ ದೇವಸ್ಥಾನದ ಆರ್ಚಕ ಮತ್ತು ಆತನ ಸಹೋದರಿ ಜಾತಿ ಹೆಸರಿನಲ್ಲಿ ನಿಂದಿಸಿದ್ದಾರೆ.

ರಾಮನಗರ: ದೇವಸ್ಥಾನ ಬಳಿಯ ನಲ್ಲಿ ನೀರು ತರಲು ಹೋದ ದಲಿತ ಬಾಲಕಿಗೆ ನಿಂದಿಸಿದ ಪೂಜಾರಿ: ಕೇಸ್​ ಬುಕ್
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Oct 12, 2023 | 7:56 AM

ರಾಮನಗರ, ಅ.12: ದೇವಸ್ಥಾನದ (Temple) ಬಳಿಯಿದ್ದ ಸಾರ್ವಜನಿಕ ನಲ್ಲಿಯಿಂದ ನೀರು ತರಲು ಬಂದಿದ್ದ 13 ವರ್ಷದ ದಲಿತ (Dalit) ಬಾಲಕಿಗೆ ಆಕೆಯ ಜಾತಿ (Caste Abuse) ಹೆಸರಿಡಿದು ಪೂಜಾರಿ ಮತ್ತು ಆತನ ಸಹೋದರಿ ನಿಂದಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಘಟನೆ ಸಂಬಂಧ ಅರ್ಚಕ ಹಾಗೂ ಆತನ ಸಹೋದರಿಯ ಮೇಲೆ ದೂರು ದಾಖಲಾಗಿದ್ದು ಐಜೂರು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಮಾನಹಳ್ಳಿ ಗ್ರಾಮದಲ್ಲಿ ಅಕ್ಟೋಬರ್ 9 ರಂದು ಬಾಲಕಿ ಭಾವನಾ ತನ್ನ ಮನೆಯ ಸಮೀಪವೇ ಇದ್ದ ಮಾರಮ್ಮ ದೇವಸ್ಥಾನದ ಆವರಣದಲ್ಲಿರುವ ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರನ್ನು ತರಲು ಬಿಂದಿಗೆ ಹಿಡಿದು ಹೋಗಿದ್ದಳು. ಈ ವೇಳೆ ದೇವಸ್ಥಾನದ ಆರ್ಚಕ ಕುಮಾರ್ ಮತ್ತು ಆತನ ಸಹೋದರಿ ಯಶೋಧಾ ಇಬ್ಬರೂ ಬಾಲಕಿಗೆ ಜಾತಿ ಹೆಸರಿನಲ್ಲಿ ನಿಂದಿಸಿದ್ದಾರೆ.

ಅಳುತ್ತಾ ಮನೆಗೆ ತೆರಳಿದ ಬಾಲಕಿ ತನ್ನ ಮನೆಯವರಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಆಗ ಬಾಲಕಿ ಚಿಕ್ಕಪ್ಪ ಪ್ರಸನ್ನಕುಮಾರ್ ಮತ್ತು ಅವರ ಸ್ನೇಹಿತ ಜಯಕುಮಾರ್ ಸ್ಥಳಕ್ಕೆ ಬಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಪೂಜಾರಿ ಮತ್ತು ಆತನ ಸಹೋದರಿ ಮತ್ತೆ ಜಾತಿ ನಿಂದನೆ ಮಾಡಿದ್ದು ದೇವಸ್ಥಾನದಿಂದ ದೂರ ಇರುವಂತೆ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದ್ದು ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೂಜಾರಿ ಮತ್ತು ಆತನ ಸಹೋದರಿ ನನ್ನ ಕೆನ್ನೆಗೆ ಹೊಡೆದು, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ಪ್ರಸನ್ನ ಕುಮಾರ್ ಅವರು ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ, ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಆಗುತ್ತಾ?

ದೂರು ಆಧರಿಸಿ ಐಜೂರು ಪೊಲೀಸರು ಅರ್ಚಕ ಮತ್ತು ಆತನ ಸಹೋದರಿ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ 323, 324, 504, 506 ಹಾಗೂ 34ರ ಅಡಿ ಪ್ರಕರಣ ದಾಖಲಾಗಿದೆ.

ಇನ್ನು ಅರ್ಚಕ ಕುಮಾರ್ ಮತ್ತು ಅವರ ಸಹೋದರಿ ಯಶೋಧ ಅವರು ದೇವಸ್ಥಾನದ ಆವರಣಕ್ಕೆ ಬಾಲಕಿ ಪ್ರವೇಶಿಸುವುದನ್ನು ವಿರೋಧಿಸಿ ಆಕ್ರೋಶ ಹೊರ ಹಾಕಿದ್ದರು. ಬಾಲಕಿ ನಲ್ಲಿ ಮುಟ್ಟಿ ಅಪವಿತ್ರಗೊಳಿಸಿದ್ದಾಳೆ ಎಂದು ಜಾತಿ ನಿಂದನೆ ಮಾಡಿ ಬಾಲಕಿಯ ಬಳಿಯಿದ್ದ ಕೊಡವನ್ನು ಕಿತ್ತು ಎಸೆದು ದೇವಸ್ಥಾನದಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಪ್ರಸನ್ನ ಕುಮಾರ್ ಮತ್ತು ಜಯಕುಮಾರ್ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಅರ್ಚಕ ಮತ್ತು ಅವರ ಸಹೋದರಿ ನಾಪತ್ತೆಯಾಗಿದ್ದು ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ