AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಡಿ.ಕೆ ಶಿವಕುಮಾರ್ ಮನೆಗೆ ಸಿಬಿಐ ತಂಡ ಭೇಟಿ​ ; ಅಧಿಕಾರಿಗಳಿಂದ ಆಸ್ತಿ ಪರಿಶೀಲನೆ

ಎಂಟು ಸಿಬಿಐ ಅಧಿಕಾರಿಗಳ ತಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಕನಕಪುರ, ದೊಡ್ಡ ಆಲಹಳ್ಳಿ, ಸಂತೆ ಕೋಡಿಹಳ್ಳಿ ನಿವಾಸಗಳಿಗೆ ಭೇಟಿ ನೀಡಿದೆ.

ರಾಮನಗರ ಡಿ.ಕೆ ಶಿವಕುಮಾರ್ ಮನೆಗೆ ಸಿಬಿಐ ತಂಡ ಭೇಟಿ​ ; ಅಧಿಕಾರಿಗಳಿಂದ ಆಸ್ತಿ ಪರಿಶೀಲನೆ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ
TV9 Web
| Edited By: |

Updated on:Sep 28, 2022 | 9:59 PM

Share

ರಾಮನಗರ: ಎಂಟು ಸಿಬಿಐ ಅಧಿಕಾರಿಗಳ ತಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಕನಕಪುರ, ದೊಡ್ಡ ಆಲಹಳ್ಳಿ, ಸಂತೆ ಕೋಡಿಹಳ್ಳಿ ನಿವಾಸಗಳಿಗೆ ಭೇಟಿ ನೀಡಿದೆ. ಅಧಿಕಾರಿಗಳು ಕೆಲವು ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸುಮಾರು 1 ಗಂಟೆ ಕಾಲ ಡಿಕೆಶಿ ನಿವಾಸದಲ್ಲಿದ್ದು, ನಂತರ ಮನೆ, ಜಮೀನು ಮತ್ತಿತರ ಸ್ಥಳಗಳಿಗೆ ತೆರಳಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಭೇಟಿಯ ವೇಳೆ ಕನಕಪುರ ತಹಶೀಲ್ದಾರ್‌ ವಿಶ್ವನಾಥ್, ಪೊಲೀಸರು ಸ್ಥಳದಲ್ಲಿದ್ದರು.

ನನ್ನ ವಿರುದ್ಧದ ಕೇಸ್‌ನ ತನಿಕೆಯಿಂದ ಹಿಂಸೆ ಆಗುತ್ತಿದೆ

ನನ್ನ ವಿರುದ್ಧದ ಕೇಸ್‌ನ ತನಿಖೆಗೆ ಸ್ಪೀಕರ್‌ ಅನುಮತಿ ನೀಡಿದ್ದಾರೆ. ಇದು ನನಗೆ ಹಿಂಸೆ ಆಗುತ್ತಿದೆ. ನನಗೆ ಬೇರೆ ಏನೋ ಮಾಹಿತಿಯಿದೆ, ಮತ್ತೆ ಮಾತನಾಡುತ್ತೇನೆ. ಮನೆ ಯಿಂದ ಪೋನ್ ಬಂದಿತ್ತು. ಕನಕಪುರದ ಮನೆ, ತೋಟದ ಮನೆ ಸೇರಿದಂತೆ ಕೆಲವೆಡೆ ದಾಳಿ ಮಾಡಿದ್ದಾರೆ.  ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮನ್ನು ಬಳಹ ಪ್ರೀತಿಸುತ್ತಿವೆ. ನಮ್ಮ ಮನೆಯಲ್ಲಿ CPWD ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ ಎಂದು  ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

ಎರಡು ವರ್ಷಗಳ ಹಿಂದೆ, ಅಂದರೆ ಅಕ್ಟೋಬರ್ 2020ರಲ್ಲಿ ಡಿಕೆಶಿ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಿಸಿತ್ತು. ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು ₹ 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎನ್ನುವುದು ಸಿಬಿಐ ಆರೋಪವಾಗಿತ್ತು. ಮಾರ್ಚ್ 2020ರಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಕ್ಟೋಬರ್ 5, 2020ರಲ್ಲಿ ದೆಹಲಿ, ಮುಂಬೈ ಸೇರಿದಂತೆ 14 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಕಂಪ್ಯೂಟರ್ ಹಾರ್ಡ್​ಡಿಸ್ಕ್, ₹ 57 ಲಕ್ಷ ನಗದು​ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

ನಂತರದ ದಿನಗಳಲ್ಲಿ ಜಾರಿ ನಿರ್ದೇಶನಾಲಯವು (Enforcement Directorate – ED) ಡಿ.ಕೆ.ಶಿವಕುಮಾರ್ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ವಿಚಾರಣೆ ಎದುರಿಸಿದ್ದರು. ಜೈಲಿಗೂ ಹೋಗಿದ್ದರು. ಪ್ರಸ್ತುತ ದೆಹಲಿಯ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ನಾಳೆ (ಸೆ 27) ಮತ್ತೆ ವಿಚಾರಣೆಗೆ ಸಮಯ ನಿಗದಿಯಾಗಿದೆ.

ಏಪ್ರಿಲ್‌ 2013ರಿಂದ ಏಪ್ರಿಲ್‌ 2018ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಡಿ.ಕೆ.ಶಿವಕುಮಾರ್‌ ಮತ್ತು ಕುಟುಂಬ ಸದಸ್ಯರು ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿದ್ದಾರೆ. ಸಿಬಿಐ ದಾಖಲಿಸಿರುವ ಎಫ್​ಐಆರ್ ಆಧಾರದಲ್ಲಿಯೇ ಇಡಿ ಸಹ ತನಿಖೆ ನಡೆಸುತ್ತಿದೆ. ಏಕಕಾಲಕ್ಕೆ ಎರಡು ತನಿಖಾ ಸಂಸ್ಥೆಗಳು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇಂಥದ್ದೇ ಬೆಳವಣಿಗೆ ನಡೆಯಬಹುದು ಎಂದು ಹೇಳಲು ಸಾಧ್ಯವಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:21 pm, Wed, 28 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್