AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಲ್ಲಿ ಕುರ್ಚಿ ಗಲಾಟೆ: ಕುಳಿತುಕೊಳ್ಳೂ ವಿಚಾರಕ್ಕೆ ಜೆಡಿಎಸ್​​-ಬಿಜೆಪಿ ಕಾರ್ಯಕರ್ತರ ನಡುವೆ ಫೈಟ್

ಬೊಂಬೆ ನಗರಿ ಚನ್ನಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಜಟಾಪಟಿ ಮುಂದುವರಿದಿದ್ದು, ಕುರ್ಚಿಗಾಗಿ ಗಲಾಟೆ ಎರಡು ಪಕ್ಷದ ನಡುವೆ ಗಲಾಟೆಯಾಗಿದೆ.

ಚನ್ನಪಟ್ಟಣದಲ್ಲಿ ಕುರ್ಚಿ ಗಲಾಟೆ: ಕುಳಿತುಕೊಳ್ಳೂ ವಿಚಾರಕ್ಕೆ ಜೆಡಿಎಸ್​​-ಬಿಜೆಪಿ ಕಾರ್ಯಕರ್ತರ ನಡುವೆ ಫೈಟ್
ಚನ್ನಪಟ್ಟಣ ಬಮೂಲ್ ಕಚೇರಿಯಲ್ಲಿ ಬಿಜೆಪಿ, ಜೆಡಿಎಸ್​ ಕಾರ್ಯಕರ್ತರ ಗಲಾಟೆ
TV9 Web
| Edited By: |

Updated on: Jan 27, 2023 | 12:17 PM

Share

ರಾಮನಗರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಬ್ಬರ ಮೇಲೊಬ್ಬರು ಕಿಡಿಕಾರುತ್ತಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ಬಮೂಲ್ ಕಚೇರಿಯಲ್ಲಿ ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಸರ್ಕಾರದ ನಾಮನಿರ್ದೇಶಿತ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್ ಹಾಗೂ ಬಮೂಲ್ ನಿರ್ದೇಶಕ ಜಯಮುತ್ತು ಮಧ್ಯೆ ಗಲಾಟೆಯಾಗಿದೆ. ಕುರ್ಚಿ ಮೇಲೆ ಕುಳಿತುಕೊಳ್ಳಲು ಮುಂದಾದ ಉಪ ವ್ಯವಸ್ಥಾಪಕ ಹೇಮಂತ್​ನನ್ನ ಜೆಡಿಎಸ್​​ನ ಜಯಮುತ್ತು ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಜೆಡಿಎಸ್​ ಬೆಂಬಲಿಗರ ಈ ನಡೆಗೆ ಬಿಜೆಪಿಯ ಲಿಂಗೇಶ್​ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಉಭಯ ನಾಯಕರ ಬೆಂಬಲಿಗರ ನಡುವೆ ವಾಗ್ವಾದ ಉಂಟಾಗಿದ್ದು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋಗಿದೆ.

ಜಿಲ್ಲೆಯಲ್ಲಿ ಪ್ರಬಲ ಜೆಡಿಎಸ್‌ ಮಣಿಸಲು ಅಶೋಕ್‌ಗೆ ಸಾಧ್ಯವಿಲ್ಲ; ಸ್ಥಳೀಯ ಬಿಜೆಪಿ ಮುಖಂಡರು

ಮಂಡ್ಯ: ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳು ಬಾಕಿ ಇದ್ದು, ಉಭಯ ಪಕ್ಷಗಳು ರಾಜಕೀಯ ತಂತ್ರಗಾರಿಕೆ ಶುರು ಮಾಡಿವೆ. ಜಿಲ್ಲೆಯಲ್ಲಿ ಪ್ರಬಲ ಜೆಡಿಎಸ್‌ ಮಣಿಸಲು ಅಶೋಕ್‌ಗೆ ಸಾಧ್ಯವಿಲ್ಲ. ಮಂಡ್ಯ ರಾಜಕಾರಣದ ಬಗ್ಗೆ ಅಶೋಕ್‌ಗೆ ಸಂಪೂರ್ಣ ಮಾಹಿತಿ ಇಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇರುವ 7 ಕ್ಷೇತ್ರಗಳಲ್ಲಿಯೂ ಜೆಡಿಎಸ್​ ವಿಜಯ ಶಾಲಿಯಾಗಿತ್ತು. ಮಂಡ್ಯ ಜೆಡಿಎಸ್‌ನ ಭದ್ರ ಕೋಟೆಯಾಗಿದೆ. ಇಲ್ಲಿ ಅಶೋಕ್ ಗೆಲ್ಲುವುದು ಕಷ್ಟ ಎಂದು ಸ್ಥಳೀಯ ಬಿಜೆಪಿಗರು ಹೇಳುತ್ತಿದ್ದಾರೆ.

ಹಿಂದೆ ಅಪರೇಷನ್ ಕಮಲದಿಂದ ನಾರಾಯಣಗೌಡರು ಬಿಜೆಪಿಗೆ ಬಂದಿದ್ದರು. ಇದರಿಂದ ಉಪಚುನಾವಣೆಯಲ್ಲಿ ನಾರಾಯಣಗೌಡರಿಂದ 1 ಕ್ಷೇತ್ರದಲ್ಲಿ ಜಯಸಾಧಿಸಿದ್ದರು. ಈ ಭಾರಿ ಕನಿಷ್ಠ 4 ಸ್ಥಾನವಾದ್ರು ಮಂಡ್ಯದಲ್ಲಿ ಗೆಲುವು ಸಾಧಿಸಬೇಕೆಂಬ ಗುರಿಯಿದ್ದು, ಅಶೋಕ್‌ ಉಸ್ತುವಾರಿಯಾದ್ರೆ ಜೆಡಿಎಸ್‌ ಮಣಿಸಲು ಕಷ್ಟವಾಗುತ್ತೆ. ದೇವೇಗೌಡರ ಫ್ಯಾಮಿಲಿ ಜೊತೆ ಚೆನ್ನಾಗಿರುವ ಕಾರಣ ಇದು ನಡೆಯಲ್ಲ. ಅಲ್ಲದೆ ಗೋಪಾಲಯ್ಯ ಜೆಡಿಎಸ್‌ನಲ್ಲಿ ಇದ್ದು ಬಂದವರು ಅವರು ಜೆಡಿಎಸ್‌ ಬಗ್ಗೆ ಚೆನ್ನಾಗಿ ಬಲ್ಲವರು. ಜೆಡಿಎಸ್ ಪಕ್ಷದ ಹಾಗೂ ನಾಯಕರ ಜೊತೆ ಹೊಂದಾಣಿಕೆ ರಾಜಕಾರಣ ಮಾಡ್ತಾರೆಂಬ ಮಾತುಗಳು ಕೇಳಿಬಂದಿತ್ತಾದರೂ ಗೋಪಾಲಯ್ಯ ಬಿಜೆಪಿಯಲ್ಲಿ ಆಕ್ಟೀವ್ ಆಗಿದ್ರು ಹೀಗಾಗಿ ಜೆಡಿಎಸ್ ನಾಯಕರ ತಂತ್ರಗಾರಿಕೆ ಒಳ ಮರ್ಮವನ್ನ ಗೋಪಾಲಯ್ಯ ಬಲ್ಲವರಾಗಿದ್ದಾರೆ. ಇದರಿಂದ ಅಶೋಕ್‌ ಬೇಡ ಎಂದು ಸ್ಥಳೀಯ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!