Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಕನ್ಯಾಕುಮಾರಿ ಟು ಕಾಶ್ಮೀರಕ್ಕೆ ಯುವತಿಯ ಬೈಕ್ ರೈಡ್! ವಯಸ್ಸಾದ ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸದಿರಲು ಮನವಿ

ವೃದ್ಧಾಶ್ರಮ ಸಂಖ್ಯೆ ಹೆಚ್ಚಾಗಬಾರದು ಎನ್ನುವ ಆಶಯದೊಂದಿಗೆ ರಾಮನಗರದ ಚೈತ್ರ ರಾವ್ ಎಂಬುವವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಬರೊಬ್ಬರಿ 3590 ಕಿ.ಮೀ ಬೈಕ್​ ರೈಡ್​ ಕೈಗೊಂಡಿದ್ದಾರೆ. ಇದಕ್ಕೆ ಅವರ ಪೋಷಕರು ಸಪೋರ್ಟ್​ ಮಾಡಿದ್ದು, ಅವರು ಕೂಡ ರಾಮನಗರದಲ್ಲಿ ವೃದ್ಧಾಶ್ರಮ ನಡೆಸುತ್ತಿದ್ದಾರೆ.

ರಾಮನಗರ: ಕನ್ಯಾಕುಮಾರಿ ಟು ಕಾಶ್ಮೀರಕ್ಕೆ ಯುವತಿಯ ಬೈಕ್ ರೈಡ್! ವಯಸ್ಸಾದ ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸದಿರಲು ಮನವಿ
ರಾಮನಗರ ಯವತಿ ಚೈತ್ರಾ ರಾವ್​
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 25, 2023 | 3:08 PM

ರಾಮನಗರ, ಆ.25: ಇವತ್ತೀನ ಬ್ಯುಸಿ ಜೀವನದಲ್ಲಿ ನಮ್ಮನ್ನು ಹೆತ್ತು ಹೊತ್ತು ಸಾಕಿದ ತಂದೆ-ತಾಯಿಗಳಿಗೆ (Parents)ಸಮಯ ಕೊಡಲು ಆಗುತ್ತಿಲ್ಲ. ಕೆಲವರಂತು ನಮಗೂ ಕೂಡ ವಯಸ್ಸಾಗುತ್ತದೆ ಎಂಬುದನ್ನು ಮರೆತು, ನೋಡಿಕೊಳ್ಳಲು ಆಗದೇ ವೃದ್ಧಾಶ್ರಮಕ್ಕೆ (Old Age Home) ಸೇರಿಸುತ್ತಿದ್ದಾರೆ. ಹೀಗಿರುವಾಗ ಇಲ್ಲೊರ್ವ 24 ವರ್ಷದ ಯುವತಿ ರಾಮನಗರದ (Ramanagara)  ಚೈತ್ರ ರಾವ್ ಎಂಬುವವರು ‘ಮುಪ್ಪಾದ ತಂದೆ ತಾಯಿಯನ್ನು ಅನಾಥಾಶ್ರಮಕ್ಕೆ ಸೇರಿಸಬಾರದು ಎನ್ನುವ ಆಶಯದಿಂದ ಕನ್ಯಾಕುಮಾರಿ ಟು ಕಾಶ್ಮೀರಕ್ಕೆ ಬೈಕ್ ರೈಡ್ ಕೈಗೊಂಡಿದ್ದಾರೆ. ಬರೊಬ್ಬರಿ 3590 ಕಿ.ಮೀ ಏಕಾಂಗಿಯಾಗಿ ಬೈಕ್ ಚಲಾಯಿಸಲಿದ್ದಾರೆ.

ರಾಮನಗರದಲ್ಲಿ ವೃದ್ಧಾಶ್ರಮ ನಡೆಸುತ್ತಿರುವ ಚೈತ್ರಾ ರಾವ್ ಪೋಷಕರು

ಹೌದು, ಚೈತ್ರಾ ರಾವ್ ಪೋಷಕರು ರಾಮನಗರದಲ್ಲಿ ವೃದ್ಧಾಶ್ರಮ ನಡೆಸುತ್ತಿದ್ದಾರೆ. ಹೀಗಾಗಿ ತಂದೆ ತಾಯಿಯ ಆಶಯವನ್ನು ಎತ್ತಿ ಹಿಡಿಯಲು ಕನ್ಯಕುಮಾರಿಯಿಂದ ಕಾಶ್ಮೀರದ ವರೆಗೆ ಬೈಕ್ ರೈಡ್ ಮಾಡಲು ಸಜ್ಜಾಗಿದ್ದಾರೆ. ಅವರು ಸಂಚರಿಸುವ ಮಾರ್ಗ ಹೀಗಿದೆ. ಕನ್ಯಾಕುಮಾರಿಯಿಂದ ಸೇಲಂ(460km),‌ ಸೇಲಂ ನಿಂದ ಚಿತ್ರದುರ್ಗ(409km), ಚಿತ್ರದುರ್ಗ ಸೋಲಾಪುರ(420), ಸೋಲಾಪುರದಿಂದ ಧುಲೆ(460km), ಧುಲೆ- ಟು‌ಧೋನ್ಸಾವಸ್ (340km), ಧೋನ್ಸಾವಾಸ್ – ಕಿಶನಗಡ(412km), ಕಿಶನಗಡ ಟು ಖನೌರಿ(473km), ಖನೌರಿ ಟು ಉಧಮಪುರ(441), ಉಧಮ್ ಪುರ – ಶ್ರೀನಗರ(182) ತಲುಪಲಿದ್ದಾರೆ.

ಇದನ್ನೂ ಓದಿ:Old Man’s Story: ಒಬ್ಬ ಮಗ ಐಎಎಸ್, ಇನ್ನೊಬ್ಬ ಬ್ಯುಸಿನೆಸ್; ವೃದ್ಧಾಶ್ರಮಕ್ಕೆ ಬಂದು ಕಣ್ಣೀರಿಟ್ಟ ವೃದ್ಧ; ಕರುಳುಹಿಂಡುತ್ತದೆ ಇವರ ಕಥೆ

ನಾಳೆ ಬೆಳಿಗ್ಗೆಯಿಂದಲೇ ಕನ್ಯಾಕುಮಾರಿಯಿಂದ ಬಿಡಲಿರೋ ಚೈತ್ರಾ ರಾವ್​

ಇನ್ನು ತಂದೆ-ತಾಯಿಗಳ ಆಶಯವನ್ನು ಸಾಕಾರಗೊಳಿಸಲು ಚೈತ್ರಾ ರಾವ್​ ಅವರು ರಾಯಲ್ ಎನ್​ಫೀಲ್ಡ್ ಜೊತೆ ನಾಳೆ ಬೆಳಿಗ್ಗೆಯಿಂದಲೇ ಕನ್ಯಾಕುಮಾರಿಯಿಂದ ಸವಾರಿ ಮಾಡುವುದಕ್ಕೆ ರೆಡಿಯಾಗಿದ್ದಾರೆ. ಇನ್ನು ಕರ್ನಾಟಕದಿಂದ ಕನ್ಯಾಕುಮಾರಿ ವರೆಗೂ ರೈಲಿನಲ್ಲಿ‌ ಪ್ರಯಾಣ ಬೆಳಸಿದ್ದು, ನಾಳೆ(ಆ.26) ಅಲ್ಲಿಂದ ಕಾಶ್ಮೀರ ಕಡೆ ಏಕಾಂಗಿಯಾಗಿ ಬೈಕ್ ಸವಾರಿ ಆರಂಭಿಸಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು