ಚನ್ನಪಟ್ಟಣ ಉಪಚುನಾವಣೆಗೆ ಕ್ಷಣಗಣನೆ: ಅಖಾಡದಲ್ಲಿ ಹೆಚ್​​ಡಿಕೆ ಕುಮಾರಸ್ವಾಮಿ ಅಬ್ಬರ

ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರುತ್ತಿದೆ. ದಿನೇ ದಿನೇ ರಾಜಕೀಯ ನಾಯಕರ ಸುತ್ತಾಟವೂ ಜೋರಾಗುತ್ತಿದೆ. ಮತದಾರರನ್ನು ಸೆಳೆಯಲು ತೆರೆಮರೆಯಲ್ಲೇ ರಣತಂತ್ರ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ರಾಮನಗರದಲ್ಲಿ 500 ಕೋಟಿ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ಕೊಟ್ಟಿದ್ದರು. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ, ಚನ್ನಪಟ್ಟಣದ ಅಖಾಡಕ್ಕಿಳಿದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ಕ್ಷಣಗಣನೆ: ಅಖಾಡದಲ್ಲಿ ಹೆಚ್​​ಡಿಕೆ ಕುಮಾರಸ್ವಾಮಿ ಅಬ್ಬರ
ಹೆಚ್​ಡಿ ಕುಮಾರಸ್ವಾಮಿ
Edited By:

Updated on: Oct 06, 2024 | 5:51 PM

ರಾಮನಗರ, ಅಕ್ಟೋಬರ್ 6: ಚನ್ನಪಟ್ಟಣ ಬೈಎಲೆಕ್ಷನ್​ಗೆ ಕೌಂಟ್​ಡೌನ್​ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗಲು ಡಿಕೆ ಸಹೋದರರು​, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೆಯುತ್ತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರುವ ಇಬ್ಬರು ಕೂಡ ನಾನಾ ತಂತ್ರಗಾರಿಕೆ ಮಾಡುತ್ತಿದ್ದಾರೆ. ಕಳೆದ ತಿಂಗಳಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಯೋಚನೆಗೆ ಚಾಲನೆ ಕೊಟ್ಟಿದ್ದರು. ಹೈಟೆಕ್​ ಕ್ರೀಡಾಂಗಣವನ್ನೂ ಉದ್ಘಾಟನೆ ಮಾಡಿದ್ದರು. ಇದೀಗ ಚನ್ನಪಟ್ಟಣ ಅಖಾಡಕ್ಕೆ ಎಂಟ್ರಿ ಕೊಟ್ಟಿರುವ ಹೆಚ್​ಡಿ ಕುಮಾರಸ್ವಾಮಿ, ಡಿಕೆ ಬ್ರದರ್ಸ್​ ವಿರುದ್ಧ ಬೆಂಕಿಯುಗುಳಿದ್ದಾರೆ.

ಕೈ ಮುಗಿಯುತ್ತೇನೆ, ಕಾಂಗ್ರೆಸ್​​ನವರನ್ನ ನಂಬಬೇಡಿ: ಹೆಚ್​ಡಿಕೆ

ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಸಭೆ ಮಾಡಿದ ಹೆಚ್​ಡಿಕೆ, ದಲಿತಾಸ್ತ್ರವನ್ನೂ ಪ್ರಯೋಗಿಸಿದರು. ದಲಿತ ಸಮುದಾಯದವರೇ ಕಾಂಗ್ರೆಸ್​ನವರನ್ನು ನಂಬಬೇಡಿ, ಅವರು ಮೋಸಗಾರರು ಎಂದರು.

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಗುಟ್ಟು ಬಿಟ್ಟುಕೊಡದ ಹೆಚ್​ಡಿಕೆ

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆಯನ್ನೇ ಕೊಟ್ಟಿದ್ದಾರೆ. ಎನ್​ಡಿಎ ಅಭ್ಯರ್ಥಿ ಇರುತ್ತಾರೆ. ನಿಖಿಲ್​ ಕುಮಾರಸ್ವಾಮಿನೋ? ಯಾರೋ? ಅಂತಾ ಹೇಳ್ತೀನಿ ಅಂದಿದ್ದಾರೆ.

ಇಷ್ಟೆಲ್ಲದರ ಮಧ್ಯೆ ನೂರಾರು ಜೆಡಿಎಸ್​ ಕಾರ್ಯಕರ್ತರು ಸೇರಿದ್ದ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಆಭ್ಯರ್ಥಿ ಮಾಡಲು ಒತ್ತಾಯಿಸಿದರು. ಚನ್ನಪಟ್ಟಣ ಉಪಚುನಾವಣೆಗೆ ಎನ್​​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡುವ ಉದ್ದೇಶ ಇದೆ: ಹೆಚ್​ಡಿ ಕುಮಾರಸ್ವಾಮಿ

ಸದ್ಯ ಚನ್ನಪಟ್ಟಣದಲ್ಲಿ ನಿಖಿಲ್​ರನ್ನು ಕಣಕ್ಕಿಳಿಸಿದರೆ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ನ್ನು ಕುಮಾರಸ್ವಾಮಿ ಹೇಗೆ ನಿಭಾಯಿಸುತ್ತಾರೆ ಎಂಬ ಪ್ರಶ್ನೆಯೂ ಮೂಡಿದೆ. ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us