AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋತಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುವ ಮೂಲಕ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ದಾಖಲಿಸಿದ್ದಾರೆ. ಇದು ಅವರ ಕುಟುಂಬದವರಿಗೆ, ಪಕ್ಷದವರಿಗೆ ಮಾತ್ರವಲ್ಲದೆ ಅವರ ಅಭಿಮಾನಿಗಳಿಗೂ ಆಘಾತ ತಂದಿದೆ. ಪರಿಣಾಮವಾಗಿ ನಿಖಿಲ್ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋತಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ
ನಿಖಿಲ್ ಕುಮಾರಸ್ವಾಮಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Ganapathi Sharma

Updated on: Nov 24, 2024 | 8:00 AM

ರಾಮನಗರ, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ವ್ಯಕ್ತಿಗೆ ಮಂಡ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದವರು.

‘ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್’ ಎಂದು ಪತ್ರ ಬರೆದಿಟ್ಟು ಅವರು ವಿಷ ಸೇವನೆ ಮಾಡಿಕೊಂಡಿದ್ದಾರೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮಂಜುನಾಥ್ ಅವರನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂದು ಮೈತ್ರಿ ನಾಯಕರು ಭಾವಿಸಿದ್ದರೂ ನಿಖಿಲ್ ಸೋಲನುಭವಿಸಿದ್ದಾರೆ. ಇದರೊಂದಿಗೆ, ನಿಖಿಲ್ ಸತತ ಮೂರು ಚುನಾವಣೆಗಳಲ್ಲಿ ಸೋಲನುಭವಿಸಿದ್ದಾರೆ. ಇದರಿಂದ ಅವರ ಅಭಿಮಾನಿ ಮನನೊಂದಿದ್ದರು.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಅಂಕಿಅಂಶಗಳನ್ನು ನೋಡುವುದಾದರೆ, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್​ಗೆ 1,12,642 ಮತ ದೊರೆತರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ಗೆ 87,229 ಮತಗಳು ದೊರೆತಿವೆ. ಪಕ್ಷೇತರ ಅಭ್ಯರ್ಥಿಗಳಾದ ನಿಂಗರಾಜುಗೆ 2352, ಜೆ.ಟಿ.ಪ್ರಕಾಶ್‌ಗೆ 1649 ಮತಗಳು ದೊರೆತಿವೆ.

ಇದನ್ನೂ ಓದಿ: ಚನ್ನಪಟ್ಟಣ ಫಲಿತಾಂಶ; ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು

ಕೊನೇ ಕ್ಷಣದಲ್ಲಿ ಸ್ಪರ್ಧೆ ಮಾಡಿದ್ದು, ಮತ್ತು ಕುಟುಂಬ ರಾಜಕಾರಣ ಆರೋಪಗಳು ನಿಖಿಲ್​ಗೆ ಹಿನ್ನಡೆಯಾಗಲು ಪ್ರಮುಖ ಕಾರಣಗಳು ಎಂದು ವಿಶ್ಲೇಷಿಸಲಾಗುತ್ತಿದೆ.

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು