AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!

ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್​​ನಿಂದ ಸಿಪಿ ಯೋಗೇಶ್ವರ್ ಪ್ರಚಾರ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್​ನ ಘಟಾನುಘಟಿ ನಾಯಕರು ಪ್ರಚಾರ ನಡೆಸುತ್ತಿದ್ದರೆ, ಅತ್ತ ಜೆಡಿಎಸ್​​ನಿಂದ ಕೇಂದ್ರ ಸಚಿವ ಕುಮಾರಸ್ವಾಮಿಯೇ ಖುದ್ದು ಪ್ರಚಾರದ ಅಖಾಡದಲ್ಲಿದ್ದಾರೆ. ಆದಾಗ್ಯೂ, ‘ಕೈ’ ನಾಯಕರು ನಿಖಿಲ್ ವಿರುದ್ಧ ನೇರ ವಾಗ್ದಾಳಿ ನಡೆಸುತ್ತಿಲ್ಲ. ಇದಕ್ಕೆ ಬಲವಾದ ಕಾರಣ ಇದೆಯಂತೆ!

ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!
ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Nov 05, 2024 | 11:07 AM

Share

ರಾಮನಗರ, ನವೆಂಬರ್ 5: ಚನ್ನಪಟ್ಟಣ ಉಪಚುನಾವಣೆಯಲ್ಲಿ ಹೇಗಾದರೂ ಗೆಲುವು ಸಾಧಿಸಬೇಕೆಂದು ಒಂದೆಡೆ ಕಾಂಗ್ರೆಸ್ ನಾಯಕರು ಪಣತೊಟ್ಟಿದ್ದರೆ, ಮೈತ್ರಿ ನಾಯಕರೂ ಸಹ ನಿಖಿಲ್​ ಕುಮಾರಸ್ವಾಮಿಯನ್ನು ಈ ಬಾರಿ ಗೆಲ್ಲಿಸಬೇಕೆಂದು ಓಡಾಡುತ್ತಿದ್ದಾರೆ. ಆದರೆ, ಚುನಾವಣಾ ಪ್ರಚಾರದ ಕಣದಲ್ಲಿ ಎಲ್ಲೂ ಯೋಗೇಶ್ವರ್ ವಿರುದ್ಧ ನಿಖಿಲ್ ಆಗಲೀ, ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರಾಗಲೀ ವೈಯಕ್ತಿಕ ವಾಗ್ದಾಳಿ ನಡೆಸಿಲ್ಲ! ಕಾಂಗ್ರೆಸ್ ನಾಯಕರಂತೂ ನಿಖಿಲ್ ವಿಚಾರದಲ್ಲಿ ಮಾತನಾಡಲು ಬಹಳ ಎಚ್ಚರಿಕೆ ವಹಿಸುತ್ತಿದ್ದಾರೆ. ಇದಕ್ಕೆ ಬಲವಾದ ಕಾರಣ ಇದೆಯಂತೆ.

ರಾಜಕೀಯ ತಂತ್ರಗಾರಿಕೆಯ ಭಾಗವಾಗಿಯೇ ನಿಖಿಲ್ ಕುಮಾರಸ್ವಾಮಿ ವಿರುದ್ಧ ಯಾವುದೇ ಟೀಕೆ ಮಾಡದಿರಲು, ಮಾತನಾಡದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಿಖಿಲ್ ಎರಡು ಬಾರಿ ಈಗಾಗಲೇ ಸೋತಿದ್ದಾರೆ. ರಾಮನಗರ ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದಾರೆ. ಒಂದು ವೇಳೆ ನಿಖಿಲ್ ಕುಮಾರಸ್ವಾಮಿ ವಿರುದ್ಧ ಮಾತನಾಡಿದರೆ ಅವರ ಬಗ್ಗೆ ಜನರಲ್ಲಿ ಅನುಕಂಪ ಹೆಚ್ಚಾಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ ಲೆಕ್ಕಾಚಾರ.

ನಿಖಿಲ್ ತಂತ್ರಕ್ಕೆ ಕಾಂಗ್ರೆಸ್ ಪ್ರತಿ ತಂತ್ರ

ಮತ್ತೊಂದೆಡೆ, ಪ್ರಚಾರದ ವೇಳೆ ರಾಜಕೀಯವಾಗಿ ನಿಖಿಲ್ ಈವರೆಗೆ ಯಾರನ್ನೂ ಗುರಿಯಾಗಿಸಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದಲೂ ಹಿರಿಯ ನಾಯಕರ ಬಗ್ಗೆ ಗೌರವ ಇಟ್ಟುಕೊಂಡೇ ಮಾತನಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರಿಗೆ ಗೌರವಯುತವಾಗಿ ಸಂಬೋಧಿಸುತ್ತಾರೆ. ಯಾವುದೇ ಟೀಕೆ ಟಿಪ್ಪಣಿಗಳಿದ್ದರೂ ವಿರೋಧ ಪಕ್ಷದ ಯೋಜನೆ, ಕಾರ್ಯಗಳಿಗೆ ಮಾತ್ರ ಸೀಮಿತವಾಗಿರಿಸಿ ಮಾತನಾಡುತ್ತಾರೆ. ವೈಯಕ್ತಿಗವಾಗಿ ನಿಖಿಲ್ ಕುಮಾರಸ್ವಾಮಿ ವಯಕ್ತಿವಾಗಿ‌ ಯಾರನ್ನೂ ಟೀಕಿಸಿಲ್ಲ.

ಇದನ್ನೂ ಓದಿ: ಡಿಕೆ ಸುರೇಶ್ ಅಂಬ್ಯುಲೆನ್ಸ್ ಹೇಳಿಕೆಗೆ ಇಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕೌಂಟರ್

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ಮೊದಲ ದಿನದಿಂದಲೂ ನಿಖಿಲ್ ಬಹಳ ಪರಿಪಕ್ವವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿಯೇ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪಾಳಯ ಮೌನವಾಗಿದೆ. ಜನರ ಅನುಕಂಪ ಯಾವುದೇ ಕಾರಣಕ್ಕೂ ನಿಖಿಲ್ ಪರವಾಗದಂತೆ ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:44 am, Tue, 5 November 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ