AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!

ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್​​ನಿಂದ ಸಿಪಿ ಯೋಗೇಶ್ವರ್ ಪ್ರಚಾರ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್​ನ ಘಟಾನುಘಟಿ ನಾಯಕರು ಪ್ರಚಾರ ನಡೆಸುತ್ತಿದ್ದರೆ, ಅತ್ತ ಜೆಡಿಎಸ್​​ನಿಂದ ಕೇಂದ್ರ ಸಚಿವ ಕುಮಾರಸ್ವಾಮಿಯೇ ಖುದ್ದು ಪ್ರಚಾರದ ಅಖಾಡದಲ್ಲಿದ್ದಾರೆ. ಆದಾಗ್ಯೂ, ‘ಕೈ’ ನಾಯಕರು ನಿಖಿಲ್ ವಿರುದ್ಧ ನೇರ ವಾಗ್ದಾಳಿ ನಡೆಸುತ್ತಿಲ್ಲ. ಇದಕ್ಕೆ ಬಲವಾದ ಕಾರಣ ಇದೆಯಂತೆ!

ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!
ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Nov 05, 2024 | 11:07 AM

Share

ರಾಮನಗರ, ನವೆಂಬರ್ 5: ಚನ್ನಪಟ್ಟಣ ಉಪಚುನಾವಣೆಯಲ್ಲಿ ಹೇಗಾದರೂ ಗೆಲುವು ಸಾಧಿಸಬೇಕೆಂದು ಒಂದೆಡೆ ಕಾಂಗ್ರೆಸ್ ನಾಯಕರು ಪಣತೊಟ್ಟಿದ್ದರೆ, ಮೈತ್ರಿ ನಾಯಕರೂ ಸಹ ನಿಖಿಲ್​ ಕುಮಾರಸ್ವಾಮಿಯನ್ನು ಈ ಬಾರಿ ಗೆಲ್ಲಿಸಬೇಕೆಂದು ಓಡಾಡುತ್ತಿದ್ದಾರೆ. ಆದರೆ, ಚುನಾವಣಾ ಪ್ರಚಾರದ ಕಣದಲ್ಲಿ ಎಲ್ಲೂ ಯೋಗೇಶ್ವರ್ ವಿರುದ್ಧ ನಿಖಿಲ್ ಆಗಲೀ, ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರಾಗಲೀ ವೈಯಕ್ತಿಕ ವಾಗ್ದಾಳಿ ನಡೆಸಿಲ್ಲ! ಕಾಂಗ್ರೆಸ್ ನಾಯಕರಂತೂ ನಿಖಿಲ್ ವಿಚಾರದಲ್ಲಿ ಮಾತನಾಡಲು ಬಹಳ ಎಚ್ಚರಿಕೆ ವಹಿಸುತ್ತಿದ್ದಾರೆ. ಇದಕ್ಕೆ ಬಲವಾದ ಕಾರಣ ಇದೆಯಂತೆ.

ರಾಜಕೀಯ ತಂತ್ರಗಾರಿಕೆಯ ಭಾಗವಾಗಿಯೇ ನಿಖಿಲ್ ಕುಮಾರಸ್ವಾಮಿ ವಿರುದ್ಧ ಯಾವುದೇ ಟೀಕೆ ಮಾಡದಿರಲು, ಮಾತನಾಡದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಿಖಿಲ್ ಎರಡು ಬಾರಿ ಈಗಾಗಲೇ ಸೋತಿದ್ದಾರೆ. ರಾಮನಗರ ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದಾರೆ. ಒಂದು ವೇಳೆ ನಿಖಿಲ್ ಕುಮಾರಸ್ವಾಮಿ ವಿರುದ್ಧ ಮಾತನಾಡಿದರೆ ಅವರ ಬಗ್ಗೆ ಜನರಲ್ಲಿ ಅನುಕಂಪ ಹೆಚ್ಚಾಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ ಲೆಕ್ಕಾಚಾರ.

ನಿಖಿಲ್ ತಂತ್ರಕ್ಕೆ ಕಾಂಗ್ರೆಸ್ ಪ್ರತಿ ತಂತ್ರ

ಮತ್ತೊಂದೆಡೆ, ಪ್ರಚಾರದ ವೇಳೆ ರಾಜಕೀಯವಾಗಿ ನಿಖಿಲ್ ಈವರೆಗೆ ಯಾರನ್ನೂ ಗುರಿಯಾಗಿಸಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದಲೂ ಹಿರಿಯ ನಾಯಕರ ಬಗ್ಗೆ ಗೌರವ ಇಟ್ಟುಕೊಂಡೇ ಮಾತನಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರಿಗೆ ಗೌರವಯುತವಾಗಿ ಸಂಬೋಧಿಸುತ್ತಾರೆ. ಯಾವುದೇ ಟೀಕೆ ಟಿಪ್ಪಣಿಗಳಿದ್ದರೂ ವಿರೋಧ ಪಕ್ಷದ ಯೋಜನೆ, ಕಾರ್ಯಗಳಿಗೆ ಮಾತ್ರ ಸೀಮಿತವಾಗಿರಿಸಿ ಮಾತನಾಡುತ್ತಾರೆ. ವೈಯಕ್ತಿಗವಾಗಿ ನಿಖಿಲ್ ಕುಮಾರಸ್ವಾಮಿ ವಯಕ್ತಿವಾಗಿ‌ ಯಾರನ್ನೂ ಟೀಕಿಸಿಲ್ಲ.

ಇದನ್ನೂ ಓದಿ: ಡಿಕೆ ಸುರೇಶ್ ಅಂಬ್ಯುಲೆನ್ಸ್ ಹೇಳಿಕೆಗೆ ಇಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕೌಂಟರ್

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ಮೊದಲ ದಿನದಿಂದಲೂ ನಿಖಿಲ್ ಬಹಳ ಪರಿಪಕ್ವವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿಯೇ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪಾಳಯ ಮೌನವಾಗಿದೆ. ಜನರ ಅನುಕಂಪ ಯಾವುದೇ ಕಾರಣಕ್ಕೂ ನಿಖಿಲ್ ಪರವಾಗದಂತೆ ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:44 am, Tue, 5 November 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ