AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!

ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್​​ನಿಂದ ಸಿಪಿ ಯೋಗೇಶ್ವರ್ ಪ್ರಚಾರ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್​ನ ಘಟಾನುಘಟಿ ನಾಯಕರು ಪ್ರಚಾರ ನಡೆಸುತ್ತಿದ್ದರೆ, ಅತ್ತ ಜೆಡಿಎಸ್​​ನಿಂದ ಕೇಂದ್ರ ಸಚಿವ ಕುಮಾರಸ್ವಾಮಿಯೇ ಖುದ್ದು ಪ್ರಚಾರದ ಅಖಾಡದಲ್ಲಿದ್ದಾರೆ. ಆದಾಗ್ಯೂ, ‘ಕೈ’ ನಾಯಕರು ನಿಖಿಲ್ ವಿರುದ್ಧ ನೇರ ವಾಗ್ದಾಳಿ ನಡೆಸುತ್ತಿಲ್ಲ. ಇದಕ್ಕೆ ಬಲವಾದ ಕಾರಣ ಇದೆಯಂತೆ!

ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!
ಚನ್ನಪಟ್ಟಣ: ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರು ಮೌನವಾಗಿದ್ದರ ಹಿಂದಿದೆ ಹೀಗೊಂದು ತಂತ್ರ!
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Nov 05, 2024 | 11:07 AM

Share

ರಾಮನಗರ, ನವೆಂಬರ್ 5: ಚನ್ನಪಟ್ಟಣ ಉಪಚುನಾವಣೆಯಲ್ಲಿ ಹೇಗಾದರೂ ಗೆಲುವು ಸಾಧಿಸಬೇಕೆಂದು ಒಂದೆಡೆ ಕಾಂಗ್ರೆಸ್ ನಾಯಕರು ಪಣತೊಟ್ಟಿದ್ದರೆ, ಮೈತ್ರಿ ನಾಯಕರೂ ಸಹ ನಿಖಿಲ್​ ಕುಮಾರಸ್ವಾಮಿಯನ್ನು ಈ ಬಾರಿ ಗೆಲ್ಲಿಸಬೇಕೆಂದು ಓಡಾಡುತ್ತಿದ್ದಾರೆ. ಆದರೆ, ಚುನಾವಣಾ ಪ್ರಚಾರದ ಕಣದಲ್ಲಿ ಎಲ್ಲೂ ಯೋಗೇಶ್ವರ್ ವಿರುದ್ಧ ನಿಖಿಲ್ ಆಗಲೀ, ನಿಖಿಲ್ ವಿರುದ್ಧ ಕಾಂಗ್ರೆಸ್ ನಾಯಕರಾಗಲೀ ವೈಯಕ್ತಿಕ ವಾಗ್ದಾಳಿ ನಡೆಸಿಲ್ಲ! ಕಾಂಗ್ರೆಸ್ ನಾಯಕರಂತೂ ನಿಖಿಲ್ ವಿಚಾರದಲ್ಲಿ ಮಾತನಾಡಲು ಬಹಳ ಎಚ್ಚರಿಕೆ ವಹಿಸುತ್ತಿದ್ದಾರೆ. ಇದಕ್ಕೆ ಬಲವಾದ ಕಾರಣ ಇದೆಯಂತೆ.

ರಾಜಕೀಯ ತಂತ್ರಗಾರಿಕೆಯ ಭಾಗವಾಗಿಯೇ ನಿಖಿಲ್ ಕುಮಾರಸ್ವಾಮಿ ವಿರುದ್ಧ ಯಾವುದೇ ಟೀಕೆ ಮಾಡದಿರಲು, ಮಾತನಾಡದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಿಖಿಲ್ ಎರಡು ಬಾರಿ ಈಗಾಗಲೇ ಸೋತಿದ್ದಾರೆ. ರಾಮನಗರ ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದಾರೆ. ಒಂದು ವೇಳೆ ನಿಖಿಲ್ ಕುಮಾರಸ್ವಾಮಿ ವಿರುದ್ಧ ಮಾತನಾಡಿದರೆ ಅವರ ಬಗ್ಗೆ ಜನರಲ್ಲಿ ಅನುಕಂಪ ಹೆಚ್ಚಾಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ ಲೆಕ್ಕಾಚಾರ.

ನಿಖಿಲ್ ತಂತ್ರಕ್ಕೆ ಕಾಂಗ್ರೆಸ್ ಪ್ರತಿ ತಂತ್ರ

ಮತ್ತೊಂದೆಡೆ, ಪ್ರಚಾರದ ವೇಳೆ ರಾಜಕೀಯವಾಗಿ ನಿಖಿಲ್ ಈವರೆಗೆ ಯಾರನ್ನೂ ಗುರಿಯಾಗಿಸಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದಲೂ ಹಿರಿಯ ನಾಯಕರ ಬಗ್ಗೆ ಗೌರವ ಇಟ್ಟುಕೊಂಡೇ ಮಾತನಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರಿಗೆ ಗೌರವಯುತವಾಗಿ ಸಂಬೋಧಿಸುತ್ತಾರೆ. ಯಾವುದೇ ಟೀಕೆ ಟಿಪ್ಪಣಿಗಳಿದ್ದರೂ ವಿರೋಧ ಪಕ್ಷದ ಯೋಜನೆ, ಕಾರ್ಯಗಳಿಗೆ ಮಾತ್ರ ಸೀಮಿತವಾಗಿರಿಸಿ ಮಾತನಾಡುತ್ತಾರೆ. ವೈಯಕ್ತಿಗವಾಗಿ ನಿಖಿಲ್ ಕುಮಾರಸ್ವಾಮಿ ವಯಕ್ತಿವಾಗಿ‌ ಯಾರನ್ನೂ ಟೀಕಿಸಿಲ್ಲ.

ಇದನ್ನೂ ಓದಿ: ಡಿಕೆ ಸುರೇಶ್ ಅಂಬ್ಯುಲೆನ್ಸ್ ಹೇಳಿಕೆಗೆ ಇಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕೌಂಟರ್

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ಮೊದಲ ದಿನದಿಂದಲೂ ನಿಖಿಲ್ ಬಹಳ ಪರಿಪಕ್ವವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿಯೇ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪಾಳಯ ಮೌನವಾಗಿದೆ. ಜನರ ಅನುಕಂಪ ಯಾವುದೇ ಕಾರಣಕ್ಕೂ ನಿಖಿಲ್ ಪರವಾಗದಂತೆ ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:44 am, Tue, 5 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್