ಡಿಕೆ ಶಿವಕುಮಾರ್​​ ಕ್ಷೇತ್ರದಲ್ಲೇ ಇದೆಂಥಾ ದುಸ್ಥಿತಿ; ಮೈ ಮೇಲೆ ಮಲ ಸುರಿದುಕೊಂಡ ಪೌರ ಕಾರ್ಮಿಕರು

ಬಾಕಿ ವೇತನಕ್ಕಾಗಿ ಪೌರ ಕಾರ್ಮಿಕ ಮೈ ಮೇಲೆ ಮಲ ಸುರಿದುಕೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ‌ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪೌರ ಕಾರ್ಮಿಕರಿಗೆ ಕಳೆದ 15 ತಿಂಗಳ ವೇತನವನ್ನು ನೀಡದೇ ಸತಾಯಿಸುತ್ತಿದ್ದ ಆರೋಪ ಕೇಳಿಬಂದಿದೆ.

ರಾಮನಗರ: ಬಾಕಿ ವೇತನಕ್ಕಾಗಿ ಪೌರ ಕಾರ್ಮಿಕರು (Civic workers) ಮೈ ಮೇಲೆ ಮಲ ಸುರಿದುಕೊಂಡ ಘಟನೆ ಜಿಲ್ಲೆಯ ಕನಕಪುರ (Kankpur) ತಾಲೂಕಿನ‌ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಹಳ್ಳಿ ಗ್ರಾಮ ಪಂಚಾಯಿತಿ (Gram Panchayati) ಅಧಿಕಾರಿಗಳು ಪೌರ ಕಾರ್ಮಿಕರಿಗೆ ಕಳೆದ 15 ತಿಂಗಳ ವೇತನವನ್ನು ನೀಡದೇ ಸತಾಯಿಸುತ್ತಿದ್ದ ಆರೋಪ ಕೇಳಿಬಂದಿದೆ. ಪೌರ ಕಾರ್ಮಿಕರು ತಮ್ಮ ವೇತನ ಕೇಳಿದರೂ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆ.22) ರಂಗಯ್ಯ, ಸುರೇಶ್ ಪೌರ ಕಾರ್ಮಿಕರು ಗ್ರಾಮ ಪಂಚಾಯಿತಿ ಬಳಿ ಬಂದು ಮೈ ಮೇಲೆ ಮಲ‌ ಸುರಿದುಕೊಂಡು ಪ್ರತಿಭಟನೆ ಮಾಡಿದ್ದಾರೆ.

ನಂತರ ಅಧಿಕಾರಿಗಳು ಕೂಡಲೇ ಒಟ್ಟು 3‌ ಲಕ್ಷ 20 ಸಾವಿರದ 800 ಬಾಕಿ ಹಣವನ್ನು ಪಾವತಿ ಮಾಡಿದ್ದಾರೆ. ಈ ಬಕ್ಕೆ ಪಿಡಿಓ ಶ್ರೀನಿವಾಸ್ ಮಾತನಾಡಿ ನಮ್ಮ ಅವಧಿಯಲ್ಲಿ ವೇತನ ಬಾಕಿ ಇರಲಿಲ್ಲ. ಈ ಹಿಂದೆ ಇದ್ದ ಅಧಿಕಾರಿಗಳು ಬಾಕಿ ಉಳಿಸಿಕೊಂಡಿದ್ದರು ಎಂದು ಹೇಳಿದರು. ಇದೇ ವೇಳೆ ಇನ್ಮುಂದೆ ಪ್ರತಿ ತಿಂಗಳು ಸರಿಯಾಗಿ ವೇತನ ಪಾವತಿ ಮಾಡುವಂತೆ ಪೌರ ಕಾರ್ಮಿಕರು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Tue, 22 August 23

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us