AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಯಡಿಯೂರಪ್ಪ ಮುಂದಿನ 2 ವರ್ಷ ಸಿಎಂ ಆಗಿ ಮುಂದುವರೆಯಲಿ: ಕುಮಾರಸ್ವಾಮಿ ಹಾರೈಕೆ

ಬಿಜೆಪಿಯಲ್ಲಿ ಹಲವು ನುರಿತ ರಾಜಕಾರಣಿಗಳು ಇದ್ದಾರೆ. ಅಂತಿಮವಾಗಿ ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಚರ್ಚೆ ಮಾಡುವುದು ನನಗೆ ಶೋಭೆ ತರುವುದಿಲ್ಲ. ಈ ಪರಿಸ್ಥಿತಿ ತಂದು ಜನರ ಜತೆ ಚೆಲ್ಲಾಟವಾಡಬಾರದು. ನಾನೂ ಎಲ್ಲರ ಜೊತೆ ಅನ್ಯೋನ್ಯವಾಗಿ ಇದ್ದೇನೆ. ಯಾರ ಜೊತೆ ಅಸಮಾಧಾನವಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Karnataka Politics: ಯಡಿಯೂರಪ್ಪ ಮುಂದಿನ 2 ವರ್ಷ ಸಿಎಂ ಆಗಿ ಮುಂದುವರೆಯಲಿ: ಕುಮಾರಸ್ವಾಮಿ ಹಾರೈಕೆ
ಎಚ್​.ಡಿ.ಕುಮಾರಸ್ವಾಮಿ, ಬಿ.ಎಸ್​.ಯಡಿಯೂರಪ್ಪ
TV9 Web
| Edited By: |

Updated on:Jul 22, 2021 | 5:09 PM

Share

ಹಾಸನ: ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮುಂದಿನ 2 ವರ್ಷ ಪೂರೈಸಲಿ ಎಂದು ಹಾರೈಸುತ್ತೇನೆ. ಯಡಿಯೂರಪ್ಪ (CM BS Yediyurappa)  ಮುಂದುವರೆಯುವರೋ ಅಥವಾ ಮುಂದೆ ಬೇರೆ ಯಾರು ಮುಖ್ಯಮಂತ್ರಿ ಆಗುತ್ತಾರೋ ಗೊತ್ತಿಲ್ಲ. ಏನೇ ಆದರೂ ಮುಂದಿನ 2 ವರ್ಷ ಉತ್ತಮ ಆಡಳಿತ ನೀಡಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ (JDS) ವರಿಷ್ಠ ಎಚ್. ಡಿ.ಕುಮಾರಸ್ವಾಮಿ (HD Kumaraswamy) ರಾಮನಗರದಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. 

ಬಿಜೆಪಿಯಲ್ಲಿ ಹಲವು ನುರಿತ ರಾಜಕಾರಣಿಗಳು ಇದ್ದಾರೆ. ಅಂತಿಮವಾಗಿ ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಚರ್ಚೆ ಮಾಡುವುದು ನನಗೆ ಶೋಭೆ ತರುವುದಿಲ್ಲ. ಈ ಪರಿಸ್ಥಿತಿ ತಂದು ಜನರ ಜತೆ ಚೆಲ್ಲಾಟವಾಡಬಾರದು. ನಾನೂ ಎಲ್ಲರ ಜೊತೆ ಅನ್ಯೋನ್ಯವಾಗಿ ಇದ್ದೇನೆ. ಯಾರ ಜೊತೆ ಅಸಮಾಧಾನವಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಜೆಡಿಎಸ್​ ಪಕ್ಷಕ್ಕೆ ಪರೋಕ್ಷ ಆಹ್ವಾನ; ಪ್ರಾದೇಶಿಕ ಪಕ್ಷ ಕಟ್ಟಲು ಸಲಹೆ ನೀಡಿದ ಶಾಸಕ ಲಿಂಗೇಶ್ ಅವಧಿ ಮುಗಿಯುವವರೆಗೂ ಬಿ.ಎಸ್.ಯಡಿಯೂರಪ್ಪ (CM BS Yediyurappa) ಮುಖ್ಯಮಂತ್ರಿಯಾಗಿ ಮುಂದುವರೆಯಲಿ. ಸಿಎಂ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ಬಿ.ಎಸ್.ಯಡಿಯೂರಪ್ಪ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ (HD Devegowda) ಅವರ ಜತೆ ಸೇರಿ ಪ್ರಬಲ ಪ್ರಾದೇಶಿಕ ಪಕ್ಷ ಕಟ್ಟಲಿ (Karnataka Politics) ಎಂದು ಬೇಲೂರಿನಲ್ಲಿ ಜೆಡಿಎಸ್ ಶಾಸಕ ಲಿಂಗೇಶ್ ಸಲಹೆ ನೀಡಿದ್ದಾರೆ.

ಇತ್ತೀಚಿನ ರಾಜಕೀಯ ಬೆಳವಣಿಗೆ ಬೇಸರ ತರುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸುತ್ತಿವೆ. ಸಂಪೂರ್ಣ ಅಧಿಕಾರವಿದ್ದರೆ ಯಾರಾದರೂ ಸಾಧನೆ ಮಾಡಬಹುದು. ಕೇಂದ್ರ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಾಯಕತ್ವ ಬದಲಾವಣೆ ತಂದು ರಾಜಕೀಯ ದೊಂಬರಾಟ ಸೃಷ್ಟಿಸಿದ್ದಾರೆ. ಸೈದ್ಧಾಂತಿಕವಾಗಿ ನಾವು ಬಿಜೆಪಿಯನ್ನು ವಿರೋಧಿಸುತ್ತೇವೆ. ಆದರೆ ವೈಯುಕ್ತಿಕವಾಗಿ ಅಧಿಕಾರ ಮುಗಿಯುವವರೆಗೂ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ದೇವೇಗೌಡರು, ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು. ಪಕ್ಷಗಳಿಂದ ಹೊರಬರುವ ಎಲ್ಲಾ ಶಾಸಕರನ್ನು ಪ್ರಾದೇಶಿಕ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಪಕ್ಷ ಅಧಿಕಾರಿಗಳ ತಂದು ಉತ್ತಮ ಆಡಳಿತ ನೀಡಬೇಕು ಎಂದು ಹೇಳಿರುವ ಜೆಡಿಎಸ್ ಶಾಸಕ ಲಿಂಗೇಶ್ ಸಿಎಂ ಯಡಿಯೂರಪ್ಪರನ್ನ ಪರೋಕ್ಷವಾಗಿ ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ; 

2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಕೈಗೊಂಡ ನಿರ್ಧಾರ ಮತ್ತು ಹೇಳಿಕೆ ನನಗೆ ಸಮಾಧಾನ, ಖುಷಿ ತಂದಿದೆ: ಸಚಿವ ಈಶ್ವರಪ್ಪ

(CM BS Yeddyurappa to be CM for next 2 years wishes Former CM HD Kumaraswamy)

Published On - 4:40 pm, Thu, 22 July 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ