AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಯಡಿಯೂರಪ್ಪ ಮುಂದಿನ 2 ವರ್ಷ ಸಿಎಂ ಆಗಿ ಮುಂದುವರೆಯಲಿ: ಕುಮಾರಸ್ವಾಮಿ ಹಾರೈಕೆ

ಬಿಜೆಪಿಯಲ್ಲಿ ಹಲವು ನುರಿತ ರಾಜಕಾರಣಿಗಳು ಇದ್ದಾರೆ. ಅಂತಿಮವಾಗಿ ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಚರ್ಚೆ ಮಾಡುವುದು ನನಗೆ ಶೋಭೆ ತರುವುದಿಲ್ಲ. ಈ ಪರಿಸ್ಥಿತಿ ತಂದು ಜನರ ಜತೆ ಚೆಲ್ಲಾಟವಾಡಬಾರದು. ನಾನೂ ಎಲ್ಲರ ಜೊತೆ ಅನ್ಯೋನ್ಯವಾಗಿ ಇದ್ದೇನೆ. ಯಾರ ಜೊತೆ ಅಸಮಾಧಾನವಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Karnataka Politics: ಯಡಿಯೂರಪ್ಪ ಮುಂದಿನ 2 ವರ್ಷ ಸಿಎಂ ಆಗಿ ಮುಂದುವರೆಯಲಿ: ಕುಮಾರಸ್ವಾಮಿ ಹಾರೈಕೆ
ಎಚ್​.ಡಿ.ಕುಮಾರಸ್ವಾಮಿ, ಬಿ.ಎಸ್​.ಯಡಿಯೂರಪ್ಪ
TV9 Web
| Edited By: |

Updated on:Jul 22, 2021 | 5:09 PM

Share

ಹಾಸನ: ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮುಂದಿನ 2 ವರ್ಷ ಪೂರೈಸಲಿ ಎಂದು ಹಾರೈಸುತ್ತೇನೆ. ಯಡಿಯೂರಪ್ಪ (CM BS Yediyurappa)  ಮುಂದುವರೆಯುವರೋ ಅಥವಾ ಮುಂದೆ ಬೇರೆ ಯಾರು ಮುಖ್ಯಮಂತ್ರಿ ಆಗುತ್ತಾರೋ ಗೊತ್ತಿಲ್ಲ. ಏನೇ ಆದರೂ ಮುಂದಿನ 2 ವರ್ಷ ಉತ್ತಮ ಆಡಳಿತ ನೀಡಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ (JDS) ವರಿಷ್ಠ ಎಚ್. ಡಿ.ಕುಮಾರಸ್ವಾಮಿ (HD Kumaraswamy) ರಾಮನಗರದಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. 

ಬಿಜೆಪಿಯಲ್ಲಿ ಹಲವು ನುರಿತ ರಾಜಕಾರಣಿಗಳು ಇದ್ದಾರೆ. ಅಂತಿಮವಾಗಿ ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಚರ್ಚೆ ಮಾಡುವುದು ನನಗೆ ಶೋಭೆ ತರುವುದಿಲ್ಲ. ಈ ಪರಿಸ್ಥಿತಿ ತಂದು ಜನರ ಜತೆ ಚೆಲ್ಲಾಟವಾಡಬಾರದು. ನಾನೂ ಎಲ್ಲರ ಜೊತೆ ಅನ್ಯೋನ್ಯವಾಗಿ ಇದ್ದೇನೆ. ಯಾರ ಜೊತೆ ಅಸಮಾಧಾನವಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಜೆಡಿಎಸ್​ ಪಕ್ಷಕ್ಕೆ ಪರೋಕ್ಷ ಆಹ್ವಾನ; ಪ್ರಾದೇಶಿಕ ಪಕ್ಷ ಕಟ್ಟಲು ಸಲಹೆ ನೀಡಿದ ಶಾಸಕ ಲಿಂಗೇಶ್ ಅವಧಿ ಮುಗಿಯುವವರೆಗೂ ಬಿ.ಎಸ್.ಯಡಿಯೂರಪ್ಪ (CM BS Yediyurappa) ಮುಖ್ಯಮಂತ್ರಿಯಾಗಿ ಮುಂದುವರೆಯಲಿ. ಸಿಎಂ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ಬಿ.ಎಸ್.ಯಡಿಯೂರಪ್ಪ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ (HD Devegowda) ಅವರ ಜತೆ ಸೇರಿ ಪ್ರಬಲ ಪ್ರಾದೇಶಿಕ ಪಕ್ಷ ಕಟ್ಟಲಿ (Karnataka Politics) ಎಂದು ಬೇಲೂರಿನಲ್ಲಿ ಜೆಡಿಎಸ್ ಶಾಸಕ ಲಿಂಗೇಶ್ ಸಲಹೆ ನೀಡಿದ್ದಾರೆ.

ಇತ್ತೀಚಿನ ರಾಜಕೀಯ ಬೆಳವಣಿಗೆ ಬೇಸರ ತರುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸುತ್ತಿವೆ. ಸಂಪೂರ್ಣ ಅಧಿಕಾರವಿದ್ದರೆ ಯಾರಾದರೂ ಸಾಧನೆ ಮಾಡಬಹುದು. ಕೇಂದ್ರ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಾಯಕತ್ವ ಬದಲಾವಣೆ ತಂದು ರಾಜಕೀಯ ದೊಂಬರಾಟ ಸೃಷ್ಟಿಸಿದ್ದಾರೆ. ಸೈದ್ಧಾಂತಿಕವಾಗಿ ನಾವು ಬಿಜೆಪಿಯನ್ನು ವಿರೋಧಿಸುತ್ತೇವೆ. ಆದರೆ ವೈಯುಕ್ತಿಕವಾಗಿ ಅಧಿಕಾರ ಮುಗಿಯುವವರೆಗೂ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ದೇವೇಗೌಡರು, ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು. ಪಕ್ಷಗಳಿಂದ ಹೊರಬರುವ ಎಲ್ಲಾ ಶಾಸಕರನ್ನು ಪ್ರಾದೇಶಿಕ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಪಕ್ಷ ಅಧಿಕಾರಿಗಳ ತಂದು ಉತ್ತಮ ಆಡಳಿತ ನೀಡಬೇಕು ಎಂದು ಹೇಳಿರುವ ಜೆಡಿಎಸ್ ಶಾಸಕ ಲಿಂಗೇಶ್ ಸಿಎಂ ಯಡಿಯೂರಪ್ಪರನ್ನ ಪರೋಕ್ಷವಾಗಿ ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ; 

2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಕೈಗೊಂಡ ನಿರ್ಧಾರ ಮತ್ತು ಹೇಳಿಕೆ ನನಗೆ ಸಮಾಧಾನ, ಖುಷಿ ತಂದಿದೆ: ಸಚಿವ ಈಶ್ವರಪ್ಪ

(CM BS Yeddyurappa to be CM for next 2 years wishes Former CM HD Kumaraswamy)

Published On - 4:40 pm, Thu, 22 July 21

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್