ವರಿಷ್ಠರ ಸೂಚನೆಗೂ ಬಗ್ಗದ ಕಾಂಗ್ರೆಸ್ಸಿಗರು: ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಇಕ್ಬಾಲ್ ಹುಸೇನ್

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅನ್ನೋದು ನಮ್ಮ ಆಸೆ. ಅವರು ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ರಾಜ್ಯದಲ್ಲಿ ಶಕ್ತಿಮೀರಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರಿಗೆ ಅವಕಾಶ ಸಿಗಲೇಬೇಕು, ಜನರು ಕೂಡ ಅದನ್ನೇ ಬಯಸಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ವರಿಷ್ಠರ ಸೂಚನೆಗೂ ಬಗ್ಗದ ಕಾಂಗ್ರೆಸ್ಸಿಗರು: ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಇಕ್ಬಾಲ್ ಹುಸೇನ್
ಇಕ್ಬಾಲ್ ಹುಸೇನ್Image Credit source: Facebook
Follow us
| Updated By: ಗಣಪತಿ ಶರ್ಮ

Updated on:Nov 02, 2023 | 8:15 PM

ರಾಮನಗರ, ನವೆಂಬರ್ 2: ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯ (Siddaramaiah) ಅವರು ನೀಡಿರುವ ಹೇಳಿಕೆ ಕಾಂಗ್ರೆಸ್​​ನ ಭಿನ್ನಮತವನ್ನು ಮತ್ತೆ ಹೆಚ್ಚಿಸುವಂತೆ ಭಾಸವಾಗುತ್ತಿದೆ. ಸಿಎಂ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪರ ವಹಿಸಿ ಹೇಳಿಕೆ ನೀಡಿದ್ದಾರೆ. ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅನ್ನೋದು ನಮ್ಮ ಆಸೆ. ಅವರು ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ರಾಜ್ಯದಲ್ಲಿ ಶಕ್ತಿಮೀರಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರಿಗೆ ಅವಕಾಶ ಸಿಗಲೇಬೇಕು, ಜನರು ಕೂಡ ಅದನ್ನೇ ಬಯಸಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಇದರೊಂದಿಗೆ, ರಾಜ್ಯದಲ್ಲಿ ಮತ್ತೊಂದು ಹಂತದ ಅಧಿಕಾರ ಹಂಚಿಕೆ ಚರ್ಚೆ ಆರಂಭವಾದಂತಾಗಿದೆ. ಪಕ್ಷದ ಚೌಕಟ್ಟು ಮೀರಿ ಹಾಗೂ ನಾಯಕತ್ವದ ವಿಚಾರವಾಗಿ ಸಚಿವರು, ಶಾಸಕರು ಯಾರೂ ಮಾತನಾಡುವಂತಿಲ್ಲ ಎಂಬ ಕಾಂಗ್ರೆಸ್ ಹೈಕಮಾಂಡ್ ಕಠಿಣ ಎಚ್ಚರಿಕೆಯ ನಂತರವೂ ಇದೀಗ ಶಾಸಕರು, ನಾಯಕರು ನಾಯಕತ್ವ ವಿಚಾರವಾಗಿ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನೇ ನೆಪವಾಗಿಟ್ಟುಕೊಂಡು ಮತ್ತೆ ಸಿಎಂ ಹುದ್ದೆ ಹಂಚಿಕೆಯ ಚರ್ಚೆ ಆರಂಭವಾಗಿದೆ.

ಇದನ್ನೂ ಓದಿ: ಹೊಸಪೇಟೆ: ಗೊಂದಲವಿಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ

ಹೈಕಮಾಂಡ್ ನೀಡಿರುವ ಸೂಚನೆ ಚಿಕ್ಕವರಿಂದ ಹಿಡಿದು ದೊಡ್ಡ ನಾಯಕರವರೆಗೆ ಅನ್ವಯವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಂಪಿಯಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಯ ಬೆನ್ನಲ್ಲೇ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಬಾರದು. ಏನಿದ್ದರೂ ಸಿಎಂ, ಡಿಸಿಎಂ ಬಳಿ ಅಥವಾ ನಮ್ಮ ಬಳಿ ಚರ್ಚಿಸಿ ಎಂದು ನಾಯಕರಿಗೆ ಹೈಕಮಾಂಡ್ ಸೂಚಿಸಿತ್ತು. ಗುರುವಾರ ಕೂಡ ಮತ್ತೊಮ್ಮೆ ಎಚ್ಚರಿಕೆ ನೀಡಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ‘ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ’ ಎಂದು ಹೇಳಿರುವುದು ಮತ್ತೆ ಸಮಸ್ಯೆ ಸೃಷ್ಟಿಸಿದೆ.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Thu, 2 November 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ