AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Padayatra: ಹೈಕೋರ್ಟ್‌ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ: ಸಿದ್ದರಾಮಯ್ಯ ಹೇಳಿಕೆ

ಬಿಜೆಪಿಯವರೇ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ. ಕೊವಿಡ್ ಹೆಚ್ಚಾಗಲು ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರ ಕಾರಣ. ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಧಾನಿ ರಾಲಿ ನಡೆಸಿದ್ರು ಎಂದು ಟಿವಿ9ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Mekedatu Padayatra: ಹೈಕೋರ್ಟ್‌ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ: ಸಿದ್ದರಾಮಯ್ಯ ಹೇಳಿಕೆ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Jan 12, 2022 | 3:43 PM

Share

ರಾಮನಗರ: ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್‌ ಸೂಚಿಸಿದ್ರೆ ಪಾಲಿಸ್ತೇವೆ. ಹೈಕೋರ್ಟ್‌ ಆದೇಶದ ವಿರುದ್ಧವಾಗಿ ನಾವು ನಡೆದುಕೊಳ್ಳಲ್ಲ. ಹೈಕೋರ್ಟ್‌ ಆದೇಶ ನೀಡಿದ್ರೆ ಪಾದಯಾತ್ರೆ (Mekedatu Padayatre) ನಿಲ್ಲಿಸುತ್ತೇವೆ ಎಂದು ಟಿವಿ9ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ  (Siddaramaiah) ಬುಧವಾರ ಹೇಳಿಕೆ ನೀಡಿದ್ದಾರೆ. ನೆಲದ ಕಾನೂನು ಬಗ್ಗೆ ನಮಗೆ ಗೌರವವಿದೆ. ನೆಲದ ಕಾನೂನು ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ಕೊವಿಡ್ (Covid19) ನಿಯಮ ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಿಯಮ ಪಾಲಿಸುವ ವಿಚಾರದಲ್ಲಿ ಸರ್ಕಾರ ದ್ವಂದ್ವ ನೀತಿ ವಹಿಸಿದೆ. ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲೇ ಜಾತ್ರೆ ನಡೆಸಲಾಗಿದೆ. ಬಿಜೆಪಿಯವರೇ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ. ಕೊವಿಡ್ ಹೆಚ್ಚಾಗಲು ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರ ಕಾರಣ. ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಧಾನಿ ರಾಲಿ ನಡೆಸಿದ್ರು ಎಂದು ಟಿವಿ9ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಲೀಗಲ್ ಸೆಲ್ ಅಧ್ಯಕ್ಷಗೆ ಬುಲಾವ್ ಹೋಗಿದೆ. ಲೀಗಲ್ ಸೆಲ್ ಅಧ್ಯಕ್ಷ ವಕೀಲ ಎ.ಎಸ್ ಪೊನ್ನಣ್ಣಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಕರೆ ಹೋಗಿದ್ದು ರಾಮನಗರಕ್ಕೆ ಕರೆಸಿಕೊಂಡಿದ್ದಾರೆ. ಹೈಕೋರ್ಟ್​ನಿಂದ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ವರದಿ ಕೇಳಿದೆ. ಸಂಕ್ಷಿಪ್ತ ವರದಿ ಕೇಳಿದೆ. ಕೋರ್ಟ್ ಕೇಳಿರೋ ಮಾಹಿತಿ ಬಗ್ಗೆ ಚರ್ಚೆ ನಡೆಸಲು ಲೀಗಲ್ ಸೆಲ್ ಅಧ್ಯಕ್ಷ ವಕೀಲ ಎ.ಎಸ್ ಪೊನ್ನಣ್ಣ ಕರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್​ಗೆ ಪಿಐಎಲ್! ತುರ್ತು ವಿಚಾರಣೆಗೆ ಮನವಿ

ಇದನ್ನೂ ಓದಿ: ‘ಸರ್ಕಾರವೇ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿಕೆ ಶಿವಕುಮಾರ್ ಬಳಿ ಸೋಂಕಿತನನ್ನು ಕಳಿಸಲಾಗಿದೆ’

Published On - 3:30 pm, Wed, 12 January 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್