AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ

ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್(CP Yogeshwar) ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ(Channapatana) ಗ್ರಾಮಾಂತರ ಪೊಲೀಸರು ಕೇಸ್​ನ ಮೂರನೇ ಆರೋಪಿಯಾದ ತಮಿಳುನಾಡಿನ ಧರ್ಮಪುರಿ ಮೂಲದ ಮಧನ್ ಕುಮಾರ್(33) ಎಂಬಾತನನ್ನು ಬಂಧಿಸಿದ್ದಾರೆ.

ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ
ಸಿಪಿ ಯೋಗೇಶ್ವರ್​ ಭಾವ ಕೊಲೆ ಪ್ರಕರಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Dec 27, 2023 | 7:33 PM

Share

ರಾಮನಗರ, ಡಿ.27: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್(CP Yogeshwar) ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ(Channapatana) ಗ್ರಾಮಾಂತರ ಪೊಲೀಸರು ಕೇಸ್​ನ ಮೂರನೇ ಆರೋಪಿಯಾದ ತಮಿಳುನಾಡಿನ ಧರ್ಮಪುರಿ ಮೂಲದ ಮಧನ್ ಕುಮಾರ್(33) ಎಂಬಾತನನ್ನು ಬಂಧಿಸಿದ್ದಾರೆ. ಇನ್ನು ಈ ಬಂಧಿತ ಮಧನ್ ಕುಮಾರ್, 2 ನೇ ಆರೋಪಿ ಆಗಿರುವ ಪ್ರಭಾಕರ್ ಸ್ನೇಹಿತನಾಗಿದ್ದು, ಕೊಲೆ ಪ್ರಕರಣದಲ್ಲಿ‌ ಭಾಗಿ‌‌ಯಾದ ಆರೋಪ ಕೇಳಿಬಂದಿತ್ತು.

ಘಟನೆ ವಿವರ

ಇದೇ ಡಿಸೆಂಬರ್ 2ನೇ ತಾರೀಖು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಏಕಾಏಕಿ ನಾಪತ್ತೆಯಾಗಿದ್ದರು. ಈ ಹಿನ್ನಲೆ ಮಹದೇವಯ್ಯ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಬಳಿಕ ಡಿಸೆಂಬರ್ 3 ರಂದು ಆತನ ಕಾರು ಹನೂರು ತಾಲೂಕಿನ ರಾಮಾಪುರದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಶೋಧಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದರು. ನಂತರ ಚಾಮರಾಜನಗರ  ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯನವರ ಮೃತದೇಹ ಪತ್ತೆಯಾಗಿತ್ತು.

ಇದನ್ನೂ ಓದಿ:ಸಿಪಿ ಯೋಗೇಶ್ವರ್ ಸಂಬಂಧಿ ರಿಯಲ್ಟರ್ ಮಹದೇವಯ್ಯ ಹತ್ಯೆಗೆ ಸುಪಾರಿ ನೀಡಲಾಗಿತ್ತೇ?

ಅಕ್ರಮ ಸಂಬಂಧದ ಆಯಾಮದಲ್ಲಿ ತೀವ್ರಗೊಂಡಿದ್ದ ಪೊಲೀಸರ ತನಿಖೆ

ಇನ್ನು ಈ ಕೇಸ್​ಗೆ ಸಂಬಂಧಪಟ್ಟಂತೆ ಬೆಂಗಳೂರಿನ ದೀಪಾಂಜಲಿ ನಗರದ ಓರ್ವ ಮಹಿಳೆ‌ಯ ಲಿಂಕ್ ಇರುವ ಬಗ್ಗೆ ಅನುಮಾನ ಬಂದಿತ್ತು. ಆ ನಿಟ್ಟಿನಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಮಹಾದೇವಯ್ಯ ಹಾಗೂ ಆ ಮಹಿಳೆ ಹಲವು ಬಾರಿ ಭೇಟಿಯಾಗಿದ್ದು, ಆಗಾಗ ಚನ್ನಪಟ್ಟಣದ ಫಾರ್ಮ್ ಹೌಸ್​ಗೆ ಬರುತ್ತಿದ್ದರು ಎಂಬುದಾಗಿ ಮಾಹಿತಿ ದೊರೆತಿದೆ. ಮೃತ ಮಹಾದೇವಯ್ಯ, ಚನ್ನಪಟ್ಟಣ ಬಸ್ ನಿಲ್ದಾಣದಿಂದ ತೋಟದಲ್ಲಿ ಕೆಲಸ ಮಾಡುವವರನ್ನು ಕರೆದುಕೊಂಡು ಬರುತ್ತಿದ್ದರಂತೆ. ಈ ಹಿನ್ನಲೆ ಆ ಮಹಿಳೆ ಜೊತೆ ಅಕ್ರಮ ಸಂಬಂಧ ಏನಾದರೂ ಇದೆಯಾ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ