AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ

ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್(CP Yogeshwar) ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ(Channapatana) ಗ್ರಾಮಾಂತರ ಪೊಲೀಸರು ಕೇಸ್​ನ ಮೂರನೇ ಆರೋಪಿಯಾದ ತಮಿಳುನಾಡಿನ ಧರ್ಮಪುರಿ ಮೂಲದ ಮಧನ್ ಕುಮಾರ್(33) ಎಂಬಾತನನ್ನು ಬಂಧಿಸಿದ್ದಾರೆ.

ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ
ಸಿಪಿ ಯೋಗೇಶ್ವರ್​ ಭಾವ ಕೊಲೆ ಪ್ರಕರಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 27, 2023 | 7:33 PM

Share

ರಾಮನಗರ, ಡಿ.27: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್(CP Yogeshwar) ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ(Channapatana) ಗ್ರಾಮಾಂತರ ಪೊಲೀಸರು ಕೇಸ್​ನ ಮೂರನೇ ಆರೋಪಿಯಾದ ತಮಿಳುನಾಡಿನ ಧರ್ಮಪುರಿ ಮೂಲದ ಮಧನ್ ಕುಮಾರ್(33) ಎಂಬಾತನನ್ನು ಬಂಧಿಸಿದ್ದಾರೆ. ಇನ್ನು ಈ ಬಂಧಿತ ಮಧನ್ ಕುಮಾರ್, 2 ನೇ ಆರೋಪಿ ಆಗಿರುವ ಪ್ರಭಾಕರ್ ಸ್ನೇಹಿತನಾಗಿದ್ದು, ಕೊಲೆ ಪ್ರಕರಣದಲ್ಲಿ‌ ಭಾಗಿ‌‌ಯಾದ ಆರೋಪ ಕೇಳಿಬಂದಿತ್ತು.

ಘಟನೆ ವಿವರ

ಇದೇ ಡಿಸೆಂಬರ್ 2ನೇ ತಾರೀಖು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಏಕಾಏಕಿ ನಾಪತ್ತೆಯಾಗಿದ್ದರು. ಈ ಹಿನ್ನಲೆ ಮಹದೇವಯ್ಯ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಬಳಿಕ ಡಿಸೆಂಬರ್ 3 ರಂದು ಆತನ ಕಾರು ಹನೂರು ತಾಲೂಕಿನ ರಾಮಾಪುರದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಶೋಧಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದರು. ನಂತರ ಚಾಮರಾಜನಗರ  ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯನವರ ಮೃತದೇಹ ಪತ್ತೆಯಾಗಿತ್ತು.

ಇದನ್ನೂ ಓದಿ:ಸಿಪಿ ಯೋಗೇಶ್ವರ್ ಸಂಬಂಧಿ ರಿಯಲ್ಟರ್ ಮಹದೇವಯ್ಯ ಹತ್ಯೆಗೆ ಸುಪಾರಿ ನೀಡಲಾಗಿತ್ತೇ?

ಅಕ್ರಮ ಸಂಬಂಧದ ಆಯಾಮದಲ್ಲಿ ತೀವ್ರಗೊಂಡಿದ್ದ ಪೊಲೀಸರ ತನಿಖೆ

ಇನ್ನು ಈ ಕೇಸ್​ಗೆ ಸಂಬಂಧಪಟ್ಟಂತೆ ಬೆಂಗಳೂರಿನ ದೀಪಾಂಜಲಿ ನಗರದ ಓರ್ವ ಮಹಿಳೆ‌ಯ ಲಿಂಕ್ ಇರುವ ಬಗ್ಗೆ ಅನುಮಾನ ಬಂದಿತ್ತು. ಆ ನಿಟ್ಟಿನಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಮಹಾದೇವಯ್ಯ ಹಾಗೂ ಆ ಮಹಿಳೆ ಹಲವು ಬಾರಿ ಭೇಟಿಯಾಗಿದ್ದು, ಆಗಾಗ ಚನ್ನಪಟ್ಟಣದ ಫಾರ್ಮ್ ಹೌಸ್​ಗೆ ಬರುತ್ತಿದ್ದರು ಎಂಬುದಾಗಿ ಮಾಹಿತಿ ದೊರೆತಿದೆ. ಮೃತ ಮಹಾದೇವಯ್ಯ, ಚನ್ನಪಟ್ಟಣ ಬಸ್ ನಿಲ್ದಾಣದಿಂದ ತೋಟದಲ್ಲಿ ಕೆಲಸ ಮಾಡುವವರನ್ನು ಕರೆದುಕೊಂಡು ಬರುತ್ತಿದ್ದರಂತೆ. ಈ ಹಿನ್ನಲೆ ಆ ಮಹಿಳೆ ಜೊತೆ ಅಕ್ರಮ ಸಂಬಂಧ ಏನಾದರೂ ಇದೆಯಾ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ