Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ

ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್(CP Yogeshwar) ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ(Channapatana) ಗ್ರಾಮಾಂತರ ಪೊಲೀಸರು ಕೇಸ್​ನ ಮೂರನೇ ಆರೋಪಿಯಾದ ತಮಿಳುನಾಡಿನ ಧರ್ಮಪುರಿ ಮೂಲದ ಮಧನ್ ಕುಮಾರ್(33) ಎಂಬಾತನನ್ನು ಬಂಧಿಸಿದ್ದಾರೆ.

ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ
ಸಿಪಿ ಯೋಗೇಶ್ವರ್​ ಭಾವ ಕೊಲೆ ಪ್ರಕರಣ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 27, 2023 | 7:33 PM

ರಾಮನಗರ, ಡಿ.27: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್(CP Yogeshwar) ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ(Channapatana) ಗ್ರಾಮಾಂತರ ಪೊಲೀಸರು ಕೇಸ್​ನ ಮೂರನೇ ಆರೋಪಿಯಾದ ತಮಿಳುನಾಡಿನ ಧರ್ಮಪುರಿ ಮೂಲದ ಮಧನ್ ಕುಮಾರ್(33) ಎಂಬಾತನನ್ನು ಬಂಧಿಸಿದ್ದಾರೆ. ಇನ್ನು ಈ ಬಂಧಿತ ಮಧನ್ ಕುಮಾರ್, 2 ನೇ ಆರೋಪಿ ಆಗಿರುವ ಪ್ರಭಾಕರ್ ಸ್ನೇಹಿತನಾಗಿದ್ದು, ಕೊಲೆ ಪ್ರಕರಣದಲ್ಲಿ‌ ಭಾಗಿ‌‌ಯಾದ ಆರೋಪ ಕೇಳಿಬಂದಿತ್ತು.

ಘಟನೆ ವಿವರ

ಇದೇ ಡಿಸೆಂಬರ್ 2ನೇ ತಾರೀಖು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಏಕಾಏಕಿ ನಾಪತ್ತೆಯಾಗಿದ್ದರು. ಈ ಹಿನ್ನಲೆ ಮಹದೇವಯ್ಯ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಬಳಿಕ ಡಿಸೆಂಬರ್ 3 ರಂದು ಆತನ ಕಾರು ಹನೂರು ತಾಲೂಕಿನ ರಾಮಾಪುರದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಶೋಧಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದರು. ನಂತರ ಚಾಮರಾಜನಗರ  ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯನವರ ಮೃತದೇಹ ಪತ್ತೆಯಾಗಿತ್ತು.

ಇದನ್ನೂ ಓದಿ:ಸಿಪಿ ಯೋಗೇಶ್ವರ್ ಸಂಬಂಧಿ ರಿಯಲ್ಟರ್ ಮಹದೇವಯ್ಯ ಹತ್ಯೆಗೆ ಸುಪಾರಿ ನೀಡಲಾಗಿತ್ತೇ?

ಅಕ್ರಮ ಸಂಬಂಧದ ಆಯಾಮದಲ್ಲಿ ತೀವ್ರಗೊಂಡಿದ್ದ ಪೊಲೀಸರ ತನಿಖೆ

ಇನ್ನು ಈ ಕೇಸ್​ಗೆ ಸಂಬಂಧಪಟ್ಟಂತೆ ಬೆಂಗಳೂರಿನ ದೀಪಾಂಜಲಿ ನಗರದ ಓರ್ವ ಮಹಿಳೆ‌ಯ ಲಿಂಕ್ ಇರುವ ಬಗ್ಗೆ ಅನುಮಾನ ಬಂದಿತ್ತು. ಆ ನಿಟ್ಟಿನಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಮಹಾದೇವಯ್ಯ ಹಾಗೂ ಆ ಮಹಿಳೆ ಹಲವು ಬಾರಿ ಭೇಟಿಯಾಗಿದ್ದು, ಆಗಾಗ ಚನ್ನಪಟ್ಟಣದ ಫಾರ್ಮ್ ಹೌಸ್​ಗೆ ಬರುತ್ತಿದ್ದರು ಎಂಬುದಾಗಿ ಮಾಹಿತಿ ದೊರೆತಿದೆ. ಮೃತ ಮಹಾದೇವಯ್ಯ, ಚನ್ನಪಟ್ಟಣ ಬಸ್ ನಿಲ್ದಾಣದಿಂದ ತೋಟದಲ್ಲಿ ಕೆಲಸ ಮಾಡುವವರನ್ನು ಕರೆದುಕೊಂಡು ಬರುತ್ತಿದ್ದರಂತೆ. ಈ ಹಿನ್ನಲೆ ಆ ಮಹಿಳೆ ಜೊತೆ ಅಕ್ರಮ ಸಂಬಂಧ ಏನಾದರೂ ಇದೆಯಾ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ