AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ

ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್(CP Yogeshwar) ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ(Channapatana) ಗ್ರಾಮಾಂತರ ಪೊಲೀಸರು ಕೇಸ್​ನ ಮೂರನೇ ಆರೋಪಿಯಾದ ತಮಿಳುನಾಡಿನ ಧರ್ಮಪುರಿ ಮೂಲದ ಮಧನ್ ಕುಮಾರ್(33) ಎಂಬಾತನನ್ನು ಬಂಧಿಸಿದ್ದಾರೆ.

ಸಿಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣ; ಆರೋಪಿ ಬಂಧನ
ಸಿಪಿ ಯೋಗೇಶ್ವರ್​ ಭಾವ ಕೊಲೆ ಪ್ರಕರಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 27, 2023 | 7:33 PM

Share

ರಾಮನಗರ, ಡಿ.27: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್(CP Yogeshwar) ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ(Channapatana) ಗ್ರಾಮಾಂತರ ಪೊಲೀಸರು ಕೇಸ್​ನ ಮೂರನೇ ಆರೋಪಿಯಾದ ತಮಿಳುನಾಡಿನ ಧರ್ಮಪುರಿ ಮೂಲದ ಮಧನ್ ಕುಮಾರ್(33) ಎಂಬಾತನನ್ನು ಬಂಧಿಸಿದ್ದಾರೆ. ಇನ್ನು ಈ ಬಂಧಿತ ಮಧನ್ ಕುಮಾರ್, 2 ನೇ ಆರೋಪಿ ಆಗಿರುವ ಪ್ರಭಾಕರ್ ಸ್ನೇಹಿತನಾಗಿದ್ದು, ಕೊಲೆ ಪ್ರಕರಣದಲ್ಲಿ‌ ಭಾಗಿ‌‌ಯಾದ ಆರೋಪ ಕೇಳಿಬಂದಿತ್ತು.

ಘಟನೆ ವಿವರ

ಇದೇ ಡಿಸೆಂಬರ್ 2ನೇ ತಾರೀಖು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಏಕಾಏಕಿ ನಾಪತ್ತೆಯಾಗಿದ್ದರು. ಈ ಹಿನ್ನಲೆ ಮಹದೇವಯ್ಯ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಬಳಿಕ ಡಿಸೆಂಬರ್ 3 ರಂದು ಆತನ ಕಾರು ಹನೂರು ತಾಲೂಕಿನ ರಾಮಾಪುರದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಶೋಧಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದರು. ನಂತರ ಚಾಮರಾಜನಗರ  ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯನವರ ಮೃತದೇಹ ಪತ್ತೆಯಾಗಿತ್ತು.

ಇದನ್ನೂ ಓದಿ:ಸಿಪಿ ಯೋಗೇಶ್ವರ್ ಸಂಬಂಧಿ ರಿಯಲ್ಟರ್ ಮಹದೇವಯ್ಯ ಹತ್ಯೆಗೆ ಸುಪಾರಿ ನೀಡಲಾಗಿತ್ತೇ?

ಅಕ್ರಮ ಸಂಬಂಧದ ಆಯಾಮದಲ್ಲಿ ತೀವ್ರಗೊಂಡಿದ್ದ ಪೊಲೀಸರ ತನಿಖೆ

ಇನ್ನು ಈ ಕೇಸ್​ಗೆ ಸಂಬಂಧಪಟ್ಟಂತೆ ಬೆಂಗಳೂರಿನ ದೀಪಾಂಜಲಿ ನಗರದ ಓರ್ವ ಮಹಿಳೆ‌ಯ ಲಿಂಕ್ ಇರುವ ಬಗ್ಗೆ ಅನುಮಾನ ಬಂದಿತ್ತು. ಆ ನಿಟ್ಟಿನಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಮಹಾದೇವಯ್ಯ ಹಾಗೂ ಆ ಮಹಿಳೆ ಹಲವು ಬಾರಿ ಭೇಟಿಯಾಗಿದ್ದು, ಆಗಾಗ ಚನ್ನಪಟ್ಟಣದ ಫಾರ್ಮ್ ಹೌಸ್​ಗೆ ಬರುತ್ತಿದ್ದರು ಎಂಬುದಾಗಿ ಮಾಹಿತಿ ದೊರೆತಿದೆ. ಮೃತ ಮಹಾದೇವಯ್ಯ, ಚನ್ನಪಟ್ಟಣ ಬಸ್ ನಿಲ್ದಾಣದಿಂದ ತೋಟದಲ್ಲಿ ಕೆಲಸ ಮಾಡುವವರನ್ನು ಕರೆದುಕೊಂಡು ಬರುತ್ತಿದ್ದರಂತೆ. ಈ ಹಿನ್ನಲೆ ಆ ಮಹಿಳೆ ಜೊತೆ ಅಕ್ರಮ ಸಂಬಂಧ ಏನಾದರೂ ಇದೆಯಾ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ