AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಾಂತರ ರೂ. ಬೆಲೆ ಬಾಳುವ ಜಮೀನಿಗಾಗಿ ಜಗಳ: ಬೆಂಕಿಗಾಹುತಿಯಾದ ಕಾರು, ಬೈಕ್​ಗಳು

ಅದು ಬೆಂಗಳೂರು ಹೊರವಲಯದಲ್ಲಿರುವ ಜಮೀನು. ಕೋಟ್ಯಾಂತರ ರೂ ಬೆಲೆ ಬಾಳುತ್ತದೆ. ಅದೇ ಜಮೀನು ವಿಚಾರವಾಗಿ ಅದೊಂದು ಗ್ರಾಮದ ಗ್ರಾಮಸ್ಥರು ಹಾಗೂ ಆರ್ಟ್ ಆಫ್ ಲಿವಿಂಗ್​ನ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದೆ. ಅದು ವಿಕೋಪಕ್ಕೆ ತಿರುಗಿ ಬೈಕ್​ಗಳು ಸುಟ್ಟು ಹೋಗಿದ್ರೆ, ಕಾರುಗಳು ಜಖಂ ಆಗಿವೆ. ಏನಿದು ಅಂತೀರಾ? ಇಲ್ಲಿದೆ ನೋಡಿ.

ಕೋಟ್ಯಾಂತರ ರೂ. ಬೆಲೆ ಬಾಳುವ ಜಮೀನಿಗಾಗಿ ಜಗಳ: ಬೆಂಕಿಗಾಹುತಿಯಾದ ಕಾರು,  ಬೈಕ್​ಗಳು
ಜಮೀನಿಗಾಗಿ ಗಲಾಟೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:May 02, 2023 | 1:10 PM

Share

ರಾಮನಗರ: ಸುಟ್ಟು ಕರಕಲಾಗಿರುವ ಬೈಕ್​ಗಳು, ಜಖಂ ಆಗಿರುವ ಕಾರುಗಳು. ನೆಲಕ್ಕೆ ಉರಳಿರುವ ಕಂಪೌಂಡ್. ಇಂತಹ ದೃಶ್ಯ ಕಂಡು ಬಂದಿದ್ದು, ಬೆಂಗಳೂರು ದಕ್ಷಿಣ(Bengaluru South) ತಾಲೂಕಿನ ವಡೇರಹಳ್ಳಿ ಗ್ರಾಮದ ಬಳಿ. ಹೌದು‌ ಜಮೀನು ವಿಚಾರವಾಗಿ ಆರ್ಟ್ ಆಫ್ ಲಿವಿಂಗ್​ನ ಸಿಬ್ಬಂದಿಗಳು ಹಾಗೂ ವಡೇರಹಳ್ಳಿ‌ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ‌ ನಡೆದು, ಅದು‌ ವಿಕೋಪಕ್ಕೆ ತಿರುಗಿದೆ. ಅಂದಹಾಗೆ ವಡೇರಹಳ್ಳಿ ಗ್ರಾಮದ ಸರ್ವೆ ನಂಬರ್ 137 ರಲ್ಲಿ ಒಟ್ಟು 36 ಎಕರೆ ಜಮೀನು ಇದ್ದು, ಆ ಪೈಕಿ ಕೆಲವರ ಜಮೀನಿಗೆ ಆರ್ಟ್ ಆಫ್ ಲಿವಿಂಗ್​ನ ಕಡೆಯವರು ರಾತ್ರೋರಾತ್ರಿ ಕಪೌಂಡ್ ಹಾಕಲು ಮುಂದಾಗಿದ್ದಾರೆ. ಆದರೆ ಆ ಜಾಗದಲ್ಲಿ ವಡೇರಹಳ್ಳಿ ಗ್ರಾಮದ ಕೆಲವರು ವ್ಯವಸಾಯ ಮಾಡುತ್ತಿದ್ದು, ನಮ್ಮ ಜಮೀನಿಗೆ ಬಂದು ಕಪೌಂಡ್ ಹಾಕುತ್ತಿದ್ದಾರೆ ಎಂದು ಗ್ರಾಮದ ನಂಜುಂಡಯ್ಯ ಎಂಬಾತನು ಪ್ರಶ್ನೆ ಮಾಡಲು ಹೋದಾಗ ಆಶ್ರಮದ ಕಡೆಯವರು ಹಲ್ಲೆ ಮಾಡಿದ್ದಾರಂತೆ.

ಹೀಗಾಗಿ ಈ ವಿಚಾರ ಗ್ರಾಮಸ್ಥರಿಗೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಒಟ್ಟಾಗಿ ಬಂದು, ಆಶ್ರಮದ ಸಿಬ್ಬಂದಿ ನಡುವೆ ಗಲಾಟೆ ನಡೆಸಿದ್ದಾರೆ. ಈ ವೇಳೆ ಆರ್ಟ್ ಆಫ್ ಲಿವಿಂಗ್​ಗೆ ಸೇರಿದ ಮಧುವನ ಎಂಬ ಫಾರ್ಮ್ ಹೌಸ್​ನಲ್ಲಿ ಎಂಟು ಬೈಕ್​ಗಳು ಬೆಂಕಿಗಾಹುತಿ ಆಗಿದೆ‌. ಅಲ್ಲದೆ ಐದು ಬೈಕ್ ಗಳು, ನಾಲ್ಕು ಕಾರುಗಳು ಜಖಂ ಆಗಿವೆ. ಅಲ್ಲದೆ ಸೆಕ್ಯುರಿಟಿ ರೂಮ್ ನ ಗಾಜುಗಳು ಪುಡಿಪುಡಿಯಾಗಿವೆ. ಇನ್ನು ಕಪೌಂಡ್ ಸಹ ನೆಲಕ್ಕೆ ಉರಳಿದೆ. ಈ ಕುರಿತು ಆಶ್ರಮದ ಸಿಬ್ಬಂದಿಗಳು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ಕಗ್ಗಲಿಪುರ ‌ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದ್ದಾರೆ.

ಇದನ್ನೂ ಓದಿ:ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ, ವಕೀಲೆಯೊಬ್ಬರ ಮೇಲೆ ಹಲ್ಲೆ

ಅಂದಹಾಗೆ ಗಲಾಟೆಯಲ್ಲಿ ಗ್ರಾಮಸ್ಥರು ನಮ್ಮ ಜಾಗಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ರವಿಶಂಕರ್ ಗುರೂಜಿ ಆಶ್ರಮದ ಕಡೆಯವರು ದೂರುತ್ತಿದ್ದರೇ, ಬೇಕು ಅಂತಲೇ ಆಶ್ರಮದವರೆ ಬೈಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ. ಇನ್ನು ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಘಟನೆ ನಂತರ ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ‌ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ‌ನೀಡಲು ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಹಿಂದೇಟೂ ಹಾಕಿದ್ದಾರೆ‌. ಒಟ್ಟಾರೆ ಜಮೀನು ವಿಚಾರವಾಗಿ ಗ್ರಾಮಸ್ಥರು ಹಾಗೂ ಆರ್ಟ್ ಆಫ್ ಲಿವಿಂಗ್ ನ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದೆ. ದೂರು ಪ್ರತಿದೂರು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9 ರಾಮನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Tue, 2 May 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ