AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಾಂತರ ರೂ. ಬೆಲೆ ಬಾಳುವ ಜಮೀನಿಗಾಗಿ ಜಗಳ: ಬೆಂಕಿಗಾಹುತಿಯಾದ ಕಾರು, ಬೈಕ್​ಗಳು

ಅದು ಬೆಂಗಳೂರು ಹೊರವಲಯದಲ್ಲಿರುವ ಜಮೀನು. ಕೋಟ್ಯಾಂತರ ರೂ ಬೆಲೆ ಬಾಳುತ್ತದೆ. ಅದೇ ಜಮೀನು ವಿಚಾರವಾಗಿ ಅದೊಂದು ಗ್ರಾಮದ ಗ್ರಾಮಸ್ಥರು ಹಾಗೂ ಆರ್ಟ್ ಆಫ್ ಲಿವಿಂಗ್​ನ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದೆ. ಅದು ವಿಕೋಪಕ್ಕೆ ತಿರುಗಿ ಬೈಕ್​ಗಳು ಸುಟ್ಟು ಹೋಗಿದ್ರೆ, ಕಾರುಗಳು ಜಖಂ ಆಗಿವೆ. ಏನಿದು ಅಂತೀರಾ? ಇಲ್ಲಿದೆ ನೋಡಿ.

ಕೋಟ್ಯಾಂತರ ರೂ. ಬೆಲೆ ಬಾಳುವ ಜಮೀನಿಗಾಗಿ ಜಗಳ: ಬೆಂಕಿಗಾಹುತಿಯಾದ ಕಾರು,  ಬೈಕ್​ಗಳು
ಜಮೀನಿಗಾಗಿ ಗಲಾಟೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:May 02, 2023 | 1:10 PM

Share

ರಾಮನಗರ: ಸುಟ್ಟು ಕರಕಲಾಗಿರುವ ಬೈಕ್​ಗಳು, ಜಖಂ ಆಗಿರುವ ಕಾರುಗಳು. ನೆಲಕ್ಕೆ ಉರಳಿರುವ ಕಂಪೌಂಡ್. ಇಂತಹ ದೃಶ್ಯ ಕಂಡು ಬಂದಿದ್ದು, ಬೆಂಗಳೂರು ದಕ್ಷಿಣ(Bengaluru South) ತಾಲೂಕಿನ ವಡೇರಹಳ್ಳಿ ಗ್ರಾಮದ ಬಳಿ. ಹೌದು‌ ಜಮೀನು ವಿಚಾರವಾಗಿ ಆರ್ಟ್ ಆಫ್ ಲಿವಿಂಗ್​ನ ಸಿಬ್ಬಂದಿಗಳು ಹಾಗೂ ವಡೇರಹಳ್ಳಿ‌ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ‌ ನಡೆದು, ಅದು‌ ವಿಕೋಪಕ್ಕೆ ತಿರುಗಿದೆ. ಅಂದಹಾಗೆ ವಡೇರಹಳ್ಳಿ ಗ್ರಾಮದ ಸರ್ವೆ ನಂಬರ್ 137 ರಲ್ಲಿ ಒಟ್ಟು 36 ಎಕರೆ ಜಮೀನು ಇದ್ದು, ಆ ಪೈಕಿ ಕೆಲವರ ಜಮೀನಿಗೆ ಆರ್ಟ್ ಆಫ್ ಲಿವಿಂಗ್​ನ ಕಡೆಯವರು ರಾತ್ರೋರಾತ್ರಿ ಕಪೌಂಡ್ ಹಾಕಲು ಮುಂದಾಗಿದ್ದಾರೆ. ಆದರೆ ಆ ಜಾಗದಲ್ಲಿ ವಡೇರಹಳ್ಳಿ ಗ್ರಾಮದ ಕೆಲವರು ವ್ಯವಸಾಯ ಮಾಡುತ್ತಿದ್ದು, ನಮ್ಮ ಜಮೀನಿಗೆ ಬಂದು ಕಪೌಂಡ್ ಹಾಕುತ್ತಿದ್ದಾರೆ ಎಂದು ಗ್ರಾಮದ ನಂಜುಂಡಯ್ಯ ಎಂಬಾತನು ಪ್ರಶ್ನೆ ಮಾಡಲು ಹೋದಾಗ ಆಶ್ರಮದ ಕಡೆಯವರು ಹಲ್ಲೆ ಮಾಡಿದ್ದಾರಂತೆ.

ಹೀಗಾಗಿ ಈ ವಿಚಾರ ಗ್ರಾಮಸ್ಥರಿಗೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಒಟ್ಟಾಗಿ ಬಂದು, ಆಶ್ರಮದ ಸಿಬ್ಬಂದಿ ನಡುವೆ ಗಲಾಟೆ ನಡೆಸಿದ್ದಾರೆ. ಈ ವೇಳೆ ಆರ್ಟ್ ಆಫ್ ಲಿವಿಂಗ್​ಗೆ ಸೇರಿದ ಮಧುವನ ಎಂಬ ಫಾರ್ಮ್ ಹೌಸ್​ನಲ್ಲಿ ಎಂಟು ಬೈಕ್​ಗಳು ಬೆಂಕಿಗಾಹುತಿ ಆಗಿದೆ‌. ಅಲ್ಲದೆ ಐದು ಬೈಕ್ ಗಳು, ನಾಲ್ಕು ಕಾರುಗಳು ಜಖಂ ಆಗಿವೆ. ಅಲ್ಲದೆ ಸೆಕ್ಯುರಿಟಿ ರೂಮ್ ನ ಗಾಜುಗಳು ಪುಡಿಪುಡಿಯಾಗಿವೆ. ಇನ್ನು ಕಪೌಂಡ್ ಸಹ ನೆಲಕ್ಕೆ ಉರಳಿದೆ. ಈ ಕುರಿತು ಆಶ್ರಮದ ಸಿಬ್ಬಂದಿಗಳು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ಕಗ್ಗಲಿಪುರ ‌ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದ್ದಾರೆ.

ಇದನ್ನೂ ಓದಿ:ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ, ವಕೀಲೆಯೊಬ್ಬರ ಮೇಲೆ ಹಲ್ಲೆ

ಅಂದಹಾಗೆ ಗಲಾಟೆಯಲ್ಲಿ ಗ್ರಾಮಸ್ಥರು ನಮ್ಮ ಜಾಗಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ರವಿಶಂಕರ್ ಗುರೂಜಿ ಆಶ್ರಮದ ಕಡೆಯವರು ದೂರುತ್ತಿದ್ದರೇ, ಬೇಕು ಅಂತಲೇ ಆಶ್ರಮದವರೆ ಬೈಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ. ಇನ್ನು ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಘಟನೆ ನಂತರ ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ‌ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ‌ನೀಡಲು ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಹಿಂದೇಟೂ ಹಾಕಿದ್ದಾರೆ‌. ಒಟ್ಟಾರೆ ಜಮೀನು ವಿಚಾರವಾಗಿ ಗ್ರಾಮಸ್ಥರು ಹಾಗೂ ಆರ್ಟ್ ಆಫ್ ಲಿವಿಂಗ್ ನ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದೆ. ದೂರು ಪ್ರತಿದೂರು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9 ರಾಮನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Tue, 2 May 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು