AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara Crime: ತಂದೆಯ ಬರ್ಬರ ಹತ್ಯೆ, ಅಪ್ಪನಿಗೂ ಗೊತ್ತಿತ್ತು ಪುತ್ರಿಯೇ ತನ್ನನ್ನು ಸಾಯಿಸಬಹುದು ಅಂತಾ, ಹತ್ಯೆ ಮಾಡಿದ ಮಗಳು ಎಲ್ಲಿ ಹೋದಳು?

ಮಂಗಳವಾರ ರಾತ್ರಿ ಹುಚ್ಚೀರಯ್ಯರನ್ನು ಗುದ್ದಲಿಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆ ಆದ ದಿನದಿಂದ ಮಗಳು ಪುಷ್ಪಲತಾ ಮೊಬೈಲ್ ಜತೆ ಪರಾರಿಯಾಗಿದ್ದಾಳೆ.

Ramanagara Crime: ತಂದೆಯ ಬರ್ಬರ ಹತ್ಯೆ, ಅಪ್ಪನಿಗೂ ಗೊತ್ತಿತ್ತು ಪುತ್ರಿಯೇ ತನ್ನನ್ನು ಸಾಯಿಸಬಹುದು ಅಂತಾ, ಹತ್ಯೆ ಮಾಡಿದ ಮಗಳು ಎಲ್ಲಿ ಹೋದಳು?
ತಂದೆಯ ಬರ್ಬರ ಹತ್ಯೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jul 21, 2023 | 9:58 AM

Share

ರಾಮನಗರ, ಜುಲೈ 21: ಆ ವೃದ್ಧನಿಗೆ (Father) ತನ್ನ ಮಗಳನ್ನು ಕಂಡರೆ ಭಯ ಆಗ್ತಾ ಇತ್ತು. ಅದಕ್ಕಾಗಿಯೇ ಮಗಳ ಮನೆಯ ಪಕ್ಕದಲ್ಲೇ ಬೇರೆ ಮನೆ ಮಾಡಿಕೊಂಡು ಜೀವಿಸ್ತಿದ್ದ, ಮಗಳು (Daughter) ಮೆಂಟಲ್ ಥರ ಆಡ್ತಾಳೆ, ಬಿಟ್ರೆ ಕೊಲೆನೇ ಮಾಡ್ತಾಳೆ ಅಂತ‌ ಹೆದರಿ ಗೇಟ್ ಲಾಕ್ ಮಾಡಿಕೊಂಡಿರ್ತಿದ್ದ ಅಪ್ಪ, ಕೊನೆಗೆ, ಎಲ್ಲರಿಗೂ ಯಾವುದರ ಭಯವಿತ್ತೋ ಅದೇ ನಡೆದುಹೋಗಿದೆ. ಹೌದು..ಚನ್ನಪಟ್ಟಣ ತಾಲೂಕಿನ ರಾಮನರಸಿಂಹರಾಜ ಪುರ ಗ್ರಾಮದ ನಿವೃತ್ತ ಕೃಷಿ ಅಧಿಕಾರಿ ಹೆಚ್​​. ಹುಚ್ಚೀರಯ್ಯ (Huchcheeraiah) ಮಗಳಿಂದಲೇ ಹತ್ಯೆಯಾಗಿರುವ ಆರೋಪ ಬಂದಿದೆ. ಎಲ್ಲರಂತೆ ತಮ್ಮ ಮಗಳನ್ನ ಅದ್ದೂರಿಯಾಗಿ ಮದುವೆ ಮಾಡಿದ್ದ ಹುಚ್ಚೀರಯ್ಯ (68) ನಾಯಿದೊಳ್ಳೆ ಗ್ರಾಮದ (Nayidole village of Channapatna taluk) ತಮ್ಮ ತೋಟದ ಮನೆಯಲ್ಲಿ ನಿವೃತ್ತಿ ಬದುಕು ನಡೆಸುತ್ತಿದ್ದರು.

ಮೊದಲಿನಿಂದಲೂ ಮಗಳ ಮೆಂಟಲ್ ಸ್ಥಿತಿ ಸರಿಯಿಲ್ಲ ಅನ್ನೋ ಕಾರಣಕ್ಕೆ ಬಹಳ ಭಯದಲ್ಲೇ ಬದುಕುತ್ತಿದ್ದ ಹುಚ್ಚೀರಯ್ಯ, ಇದ್ದ ಮನೆ ಮಗಳಿಗೆ ಬಿಟ್ಟು ಬೇರೆ ಮನೆ ಮಾಡಿಕೊಂಡು ಇವಳ ತಂಟೇನೆ ಬೇಡ ಅಂತಿದ್ರು,‌ ಆದರೆ ಯಾವುದರ ಭಯ ಹುಚ್ಚೀರಯ್ಯ ಹಾಗೂ ಊರಿನವರಿಗಿತ್ತೋ ಅದೇ ನಡೆದು ಹೋಗಿದೆ. ‌ಮಂಗಳವಾರ ರಾತ್ರಿ ಹುಚ್ಚೀರಯ್ಯರನ್ನು ಗುದ್ದಲಿಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆ ಆದ ದಿನದಿಂದ ಮಗಳು ಪುಷ್ಪಲತಾ (30) ಮೊಬೈಲ್ ಜತೆ ಪರಾರಿಯಾಗಿದ್ದಾಳೆ.

ಕಳೆದ ಮಂಗಳವಾರ ರಾತ್ರಿ ಊಟಕ್ಕೆ ಕೂತಿದ್ದ ಹುಚ್ಚೀರಯ್ಯ ಜೊತೆ ಎಂದಿನಂತೆ ಮಗಳು ಪುಷ್ಪ ಜಗಳ ಪ್ರಾರಂಭ ಮಾಡಿದ್ದಾಳಂತೆ. ಹಣದ ವಿಚಾರಕ್ಕೆ ಜಗಳ ನಡೆದು ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಮಗಳು ಪುಷ್ಪ ಗುದ್ದಲಿಯಿಂದ ತಂದೆಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ ಈ ವಿಷಯವನ್ನ ಯಾರಿಗೂ ತಿಳಿಸದ ಮಗಳು ಪುಷ್ಪ ಸ್ಥಳದಿಂದ ಎಸ್ಕೇಪ್ ಆಗಿದ್ದಾಳೆ. ಎಂದಿನಂತೆ ಬುಧವಾರ ರಾತ್ರಿ ಸಂಬಂಧಿಕರು ತೂಟದ ಮನೆಗೆ ಊಟ ತೆಗೆದುಕೊಂಡು ಹೋದಾಗ ಹುಚ್ಚೀರಯ್ಯ ಕೊಲೆಯಾಗಿರೊದು ಬೆಳಕಿಗೆ ಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹುಚ್ಚೀರಯ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಬಳಿಕ ವಾರಸುದಾರರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರಾಮನಗರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ, ನಿವೃತ್ತ ಕೃಷಿ ಅಧಿಕಾರಿ ಹುಚ್ಚೀರಯ್ಯ ಹಾಗೂ ಮಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿದ್ದು ಹಲ್ಲೆ ಕೂಡ ಮಾಡಿದ್ದಳು. ಗಲಾಟೆ ವಿಕೋಪಕ್ಕೆ ತಿರುಗಿ ಮೊನ್ನೆ ಮಗಳೇ ತಂದೆಯನ್ನ ಹತ್ಯೆ ಮಾಡಿದ್ದಾಳೆ. ಸದ್ಯ ತಲೆಮರೆಸಿಕೊಂಡಿರುವ ಮಗಳ ಪತ್ತೆಗೆ ಎರಡು ತಂಡ ರಚನೆ ಮಾಡಿ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ

ಇದ್ದಿಬ್ಬರು ಮಕ್ಕಳಲ್ಲಿ ಒಬ್ಬ ಹಿರಿಯ ಮಗಳು ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ರೆ, ಕೊನೆ ಮಗಳಾದ್ರೂ ಮುದಿವಯಸ್ಸಲ್ಲಿ ಆಸರೆ ಆಗ್ತಾಳೆ ಅಂತ ಅಂದುಕೊಂಡಿದ್ದ ತಂದೆಗೆ ಆಕೆಯೇ ಬರ್ಬರ ಸಾವು ದಯಪಾಲಿಸಿರುವುದು ಅಪರೂಪದ ಸಂಗತಿಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ರಾಮನಗರ ಪೊಲೀಸರು ಆರೋಪಿ ಪುತ್ರಿ ಪುಷ್ಪಳ ಪತ್ತೆಗೆ ಬಲೆ ಬೀಸಿದ್ದಾರೆ.

ರಾಮನಗರ ಜಿಲ್ಲಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?