AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಸಿಎಂ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಬಾರ್ ಕೌನ್ಸಿಲ್ ಅಧ್ಯಕ್ಷ

ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್​ಐ 40 ವಕೀಲರ ವಿರುದ್ಧ ಎಫ್​ಐಆರ್ ದಾಖಲಿಸಿರುವ ಬಗ್ಗೆ ಇಂದು ಅಧಿವೇಶನದಲ್ಲಿ ಸರ್ಕಾರವನ್ನು ವಿಪಕ್ಷ ಬಿಜೆಪಿ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡರು. ಆದರೂ ಸರ್ಕಾರ ಪ್ರತಿಭಟನೆಗೆ ಮಣಿಯಲಿಲ್ಲ. ಈ ಬಗ್ಗೆ ಆಕ್ರೋಶ ಹೊರಹಾಕಿದ ಬಾರ್ ಕೌನ್ಸಿಲ್ ಅಧ್ಯಕ್ಷ ವಿಶಾಲ್ ರಘು, ಗೃಹಸಚಿವರ ಮೇಲೆ ಬಹಳ ವಿಶ್ವಾಸವಿತ್ತು, ಡಿಕೆ ಶಿವಕುಮಾರ್ ಭಯಕ್ಕೆ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ತಾನು ಸಿಎಂ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಬಾರ್ ಕೌನ್ಸಿಲ್ ಅಧ್ಯಕ್ಷ
ಡಿಕೆ ಶಿವಕುಮಾರ್
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Rakesh Nayak Manchi

Updated on: Feb 20, 2024 | 9:01 PM

ರಾಮನಗರ, ಫೆ.20: ತಾನು ಮುಖ್ಯಮಂತ್ರಿ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ ಎಂದು ಬಾರ್ ಕೌನ್ಸಿಲ್ (Bar Council) ಅಧ್ಯಕ್ಷ ವಿಶಾಲ್ ರಘು ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಆಕ್ರೋಶ ಹೊರಹಾಕಿದರು. ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್​ಐ 40 ವಕೀಲರ ವಿರುದ್ಧ ಎಫ್​ಐಆರ್ ದಾಖಲಿಸಿರುವ ಬಗ್ಗೆ ಇಂದು ಅಧಿವೇಶನದಲ್ಲಿ ಸರ್ಕಾರವನ್ನು ವಿಪಕ್ಷ ಬಿಜೆಪಿ (BJP) ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡರು. ಆದರೂ ಸರ್ಕಾರ ಪ್ರತಿಭಟನೆಗೆ ಮಣಿಯಲಿಲ್ಲ.

ವಿಧಾನಸಭೆಯಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆಯಾಗಿದರೂ ಯಾವುದೇ ನಿರ್ಣಯಕ್ಕೆ ಸರ್ಕಾರ ಬಾರದ ಹಿನ್ನೆಲೆ ಆಕ್ರೋಶ ಹೊರಹಾಕಿದ ವಿಶಾಲ್ ರಘು, ರೀ ಉಪಮುಖ್ಯಮಂತ್ರಿಗಳೇ.., ನಾಳೆ‌ ನಿಮ್ಮ ಮಗನೂ ವಕಾಲತ್ತಿಗೆ ಬರುತ್ತಾರೆ. ಅವರು ನಮ್ಮ ಫ್ಯಾಮಲಿಗೆ ಬರುತ್ತಾರೆ. ವಕೀಲರ ಬಗ್ಗೆ ಇಷ್ಟು ಅಸಡ್ಡೆ ತೋರುತ್ತೀರಾ? ಒಬ್ಬ ಪಿಎಸ್​ಐ ಅಮಾನತು ಮಾಡಲು ಆಗುತ್ತಿಲ್ಲವೇ? ಇದರ ಪರಿಣಾಮ ಬೀರಲಿದೆ. ಗೃಹಸಚಿವರ ಮೇಲೆ ಬಹಳ ವಿಶ್ವಾಸವಿತ್ತು, ಡಿಕೆ ಶಿವಕುಮಾರ್ ಭಯಕ್ಕೆ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ವಕೀಲರ ವಿರುದ್ಧ ಎಫ್​ಐಆರ್; ಪಿಎಸ್​ಐ ಅಮಾನತಿಗೆ ಸದನದಲ್ಲಿ ವಿಪಕ್ಷ ಬಿಗಿಪಟ್ಟು; ಪರಮೇಶ್ವರ್ ಹೇಳಿದ್ದೇನು?

ತಾನು ಮುಖ್ಯಮಂತ್ರಿ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಬಾಯಿಯನ್ನೂ ಮುಚ್ಚಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ ವಿಶಾಲ್ ರಘು, ಪಿಎಸ್​ಐ ಮೇಲೆ ಯಾಕಿಷ್ಟು ಪ್ರೀತಿ? ಯಾಕಂದರೆ ಅವನು ಶಾಸಕರ ಕೆಲಸಗಳನ್ನೆಲ್ಲಾ ನೋಡಿಕೊಳ್ಳುತ್ತಿದ್ದ ಎಂದರು.

ವಕೀಲರಿಂದ ಬೆಂಗಳೂರು ಚಲೋ

ರಾಮನಗರ ಜಿಲ್ಲಾಧಿಕಾರಿ, ಎಸ್​ಪಿ ವಿರುದ್ಧವೂ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ ವಿಶಾಲ್ ರಘು, ಪ್ರಕರಣವನ್ನು ನಾವು ಇಷ್ಟಕ್ಕೆ ನಿಲ್ಲಿಸುವುದಿಲ್ಲ, ನಾಡಿದ್ದು ಬೆಂಗಳೂರು ಚಲೋ ಮಾಡುತ್ತೇವೆ ಎಂದು ಹೇಳಿದರು. ಸದನದಲ್ಲಿ ಇಂದು ಏನೋ ಫಲಿತಾಂಶ ಬರಲಿದೆ ಎಂಬ ವಿಶ್ವಾಸವಿತ್ತು. ಆದರೆ ಸರ್ಕಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂದುಕೊಂಡಿರಲಿಲ್ಲ. ಏನ್ರೀ ತನಿಖೆ ಹಂತದಲ್ಲಿದೆ? ನಾವು ಕೊಲೆ ಅಥವಾ ರೇಪ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ರಾಮನಗರದವರು ಅಂತಾ ನಾವು ಹೇಳಿದರೆ, ಅವರು ಬೆಂಗಳೂರಿನವರು ಎಂದು ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ರಾಮನಗರ ಜಿಲ್ಲೆ ಜನ ಬುದ್ಧಿ ಕಲಿಸುತ್ತಾರೆ ಎಂದು ವಿಶಾಲ್ ರಘು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು