AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಸಿಎಂ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಬಾರ್ ಕೌನ್ಸಿಲ್ ಅಧ್ಯಕ್ಷ

ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್​ಐ 40 ವಕೀಲರ ವಿರುದ್ಧ ಎಫ್​ಐಆರ್ ದಾಖಲಿಸಿರುವ ಬಗ್ಗೆ ಇಂದು ಅಧಿವೇಶನದಲ್ಲಿ ಸರ್ಕಾರವನ್ನು ವಿಪಕ್ಷ ಬಿಜೆಪಿ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡರು. ಆದರೂ ಸರ್ಕಾರ ಪ್ರತಿಭಟನೆಗೆ ಮಣಿಯಲಿಲ್ಲ. ಈ ಬಗ್ಗೆ ಆಕ್ರೋಶ ಹೊರಹಾಕಿದ ಬಾರ್ ಕೌನ್ಸಿಲ್ ಅಧ್ಯಕ್ಷ ವಿಶಾಲ್ ರಘು, ಗೃಹಸಚಿವರ ಮೇಲೆ ಬಹಳ ವಿಶ್ವಾಸವಿತ್ತು, ಡಿಕೆ ಶಿವಕುಮಾರ್ ಭಯಕ್ಕೆ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ತಾನು ಸಿಎಂ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಬಾರ್ ಕೌನ್ಸಿಲ್ ಅಧ್ಯಕ್ಷ
ಡಿಕೆ ಶಿವಕುಮಾರ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Feb 20, 2024 | 9:01 PM

Share

ರಾಮನಗರ, ಫೆ.20: ತಾನು ಮುಖ್ಯಮಂತ್ರಿ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ ಎಂದು ಬಾರ್ ಕೌನ್ಸಿಲ್ (Bar Council) ಅಧ್ಯಕ್ಷ ವಿಶಾಲ್ ರಘು ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಆಕ್ರೋಶ ಹೊರಹಾಕಿದರು. ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್​ಐ 40 ವಕೀಲರ ವಿರುದ್ಧ ಎಫ್​ಐಆರ್ ದಾಖಲಿಸಿರುವ ಬಗ್ಗೆ ಇಂದು ಅಧಿವೇಶನದಲ್ಲಿ ಸರ್ಕಾರವನ್ನು ವಿಪಕ್ಷ ಬಿಜೆಪಿ (BJP) ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡರು. ಆದರೂ ಸರ್ಕಾರ ಪ್ರತಿಭಟನೆಗೆ ಮಣಿಯಲಿಲ್ಲ.

ವಿಧಾನಸಭೆಯಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆಯಾಗಿದರೂ ಯಾವುದೇ ನಿರ್ಣಯಕ್ಕೆ ಸರ್ಕಾರ ಬಾರದ ಹಿನ್ನೆಲೆ ಆಕ್ರೋಶ ಹೊರಹಾಕಿದ ವಿಶಾಲ್ ರಘು, ರೀ ಉಪಮುಖ್ಯಮಂತ್ರಿಗಳೇ.., ನಾಳೆ‌ ನಿಮ್ಮ ಮಗನೂ ವಕಾಲತ್ತಿಗೆ ಬರುತ್ತಾರೆ. ಅವರು ನಮ್ಮ ಫ್ಯಾಮಲಿಗೆ ಬರುತ್ತಾರೆ. ವಕೀಲರ ಬಗ್ಗೆ ಇಷ್ಟು ಅಸಡ್ಡೆ ತೋರುತ್ತೀರಾ? ಒಬ್ಬ ಪಿಎಸ್​ಐ ಅಮಾನತು ಮಾಡಲು ಆಗುತ್ತಿಲ್ಲವೇ? ಇದರ ಪರಿಣಾಮ ಬೀರಲಿದೆ. ಗೃಹಸಚಿವರ ಮೇಲೆ ಬಹಳ ವಿಶ್ವಾಸವಿತ್ತು, ಡಿಕೆ ಶಿವಕುಮಾರ್ ಭಯಕ್ಕೆ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ವಕೀಲರ ವಿರುದ್ಧ ಎಫ್​ಐಆರ್; ಪಿಎಸ್​ಐ ಅಮಾನತಿಗೆ ಸದನದಲ್ಲಿ ವಿಪಕ್ಷ ಬಿಗಿಪಟ್ಟು; ಪರಮೇಶ್ವರ್ ಹೇಳಿದ್ದೇನು?

ತಾನು ಮುಖ್ಯಮಂತ್ರಿ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಬಾಯಿಯನ್ನೂ ಮುಚ್ಚಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ ವಿಶಾಲ್ ರಘು, ಪಿಎಸ್​ಐ ಮೇಲೆ ಯಾಕಿಷ್ಟು ಪ್ರೀತಿ? ಯಾಕಂದರೆ ಅವನು ಶಾಸಕರ ಕೆಲಸಗಳನ್ನೆಲ್ಲಾ ನೋಡಿಕೊಳ್ಳುತ್ತಿದ್ದ ಎಂದರು.

ವಕೀಲರಿಂದ ಬೆಂಗಳೂರು ಚಲೋ

ರಾಮನಗರ ಜಿಲ್ಲಾಧಿಕಾರಿ, ಎಸ್​ಪಿ ವಿರುದ್ಧವೂ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ ವಿಶಾಲ್ ರಘು, ಪ್ರಕರಣವನ್ನು ನಾವು ಇಷ್ಟಕ್ಕೆ ನಿಲ್ಲಿಸುವುದಿಲ್ಲ, ನಾಡಿದ್ದು ಬೆಂಗಳೂರು ಚಲೋ ಮಾಡುತ್ತೇವೆ ಎಂದು ಹೇಳಿದರು. ಸದನದಲ್ಲಿ ಇಂದು ಏನೋ ಫಲಿತಾಂಶ ಬರಲಿದೆ ಎಂಬ ವಿಶ್ವಾಸವಿತ್ತು. ಆದರೆ ಸರ್ಕಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂದುಕೊಂಡಿರಲಿಲ್ಲ. ಏನ್ರೀ ತನಿಖೆ ಹಂತದಲ್ಲಿದೆ? ನಾವು ಕೊಲೆ ಅಥವಾ ರೇಪ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ರಾಮನಗರದವರು ಅಂತಾ ನಾವು ಹೇಳಿದರೆ, ಅವರು ಬೆಂಗಳೂರಿನವರು ಎಂದು ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ರಾಮನಗರ ಜಿಲ್ಲೆ ಜನ ಬುದ್ಧಿ ಕಲಿಸುತ್ತಾರೆ ಎಂದು ವಿಶಾಲ್ ರಘು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!