AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ: ವಿವಾದಕ್ಕೀಡಾದ ಕಾಂಗ್ರೆಸ್​ ಶಾಸಕರೊಬ್ಬರ ಪರೋಕ್ಷ ಹೇಳಿಕೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯವಾಗಿ ಹಲವು ಲೆಕ್ಕಾಚಾರಗಳು ನಡೆಯುತ್ತಿವೆ. ವೋಟ್ ಹಾಕಿದ ಬೂತ್ ಗಳಲ್ಲಿ ಅಭಿವೃದ್ಧಿ,ಲೀಡ್ ಬಾರದ ಕಡೆ ಅಭಿವೃದ್ಧಿ ಇಲ್ಲ ಎನ್ನುವ ಅರ್ಥದಲ್ಲಿ ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದು, ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ: ವಿವಾದಕ್ಕೀಡಾದ ಕಾಂಗ್ರೆಸ್​ ಶಾಸಕರೊಬ್ಬರ ಪರೋಕ್ಷ ಹೇಳಿಕೆ
ಶಾಸಕ ಹೆಚ್.ಸಿ ಬಾಲಕೃಷ್ಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Oct 12, 2023 | 7:19 AM

Share

ರಾಮನಗರ (ಅಕ್ಟೋಬರ್.12): ಜೆಡಿಎಸ್- ಬಿಜೆಪಿ ಮೈತ್ರಿ ಬೆನ್ನಲೇ ಕಾಂಗ್ರೆಸ್ ಸಹ ಲೋಕಸಭಾ ಚುನಾವಣೆಗೆ (Loksabha Elections 2024) ಭರ್ಜರಿ ತಯಾರಿ ನಡೆಸಿದೆ. ಇದರ ಮಧ್ಯೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಅವರು ಇದೀಗ ಹೇಳಿಕೆಯೊಂದನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಹೌದು.. ಕಾಂಗ್ರೆಸ್ ಗೆ ವೋಟ್ ಹಾಕೋ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ. ವೋಟ್ ಹಾಕದೇ ಇರುವವರ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ವೋಟ್ ಹಾಕಿದ ಬೂತ್ ಗಳಲ್ಲಿ ಅಭಿವೃದ್ಧಿ,ಲೀಡ್ ಬಾರದ ಕಡೆ ಅಭಿವೃದ್ಧಿ ಇಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದು, ವಿವಾದ ಸೃಷ್ಟಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ಐದು ವರ್ಷ ನಮ್ಮ ಸರ್ಕಾರ ಇರುತ್ತೆ. ಬೂತ್ ಲೆಕ್ಕಾಚಾರದ ಮೇಲೆ ಎಲೆಕ್ಷನ್ ಆಗುತ್ತೆ. ಯಾವ್ ಬೂತ್ ನಲ್ಲಿ ಹೆಚ್ಚು ನಮಗೆ ವೋಟ್ ಬರುತ್ತೋ ಅಲ್ಲಿ ಕೆಲಸ ಮಾಡುತ್ತೇವೆ. ವೋಟ್ ಹಾಕದಿದ್ರೆ ಅಂತಹ ಬೂತ್ ಗಳ ಬಗ್ಗೆ ಆಲೋಚನೆ ಮಾಡ್ತೀವಿ. ಹಾಗಾಗಿ ಇದನ್ನ ಜನ ಯೋಚನೆ ಮಾಡಬೇಕು ಎಂದು ಪರೋಕ್ಷವಾಗಿ ಕಾಂಗ್ರೆಸ್ ಗೆ ಮತಹಾಕದಿದ್ರೆ ಅಭಿವೃದ್ಧಿ ಮಾಡಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪತಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಬಿಜೆಪಿ ಮಾಜಿ ಶಾಸಕಿ

ಇನ್ನೂ ಶಾಸಕ ಬಾಲಕೃಷ್ಣರ ಈ ಸ್ಟೇಟ್ ಮೆಂಟ್ ಗೆ ಸಾರ್ವಜನಿಕವಾಗಿ ಸಾಕಷ್ಟು ಆಕ್ರೋಶ ವ್ಯಕ್ತವಾಗ್ತಿದ್ದು, ಮಾಗಡಿ ಜೆಡಿಎಸ್ ನ ಮಾಜಿ ಶಾಸಕ ಎ. ಮಂಜುನಾಥ್ ಕಿಡಿಕಾರಿದ್ದಾರೆ. ವೋಟ್ ಹಾಕಿದ್ರೆ ಮಾತ್ರ ಅಭಿವೃದ್ಧಿ, ವೋಟ್ ಹಾಕದ ಬೂತ್ ಗಳಲ್ಲಿ ಅಭಿವೃದ್ಧಿ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಅಲ್ವಾ ಏನ್ರಿ ನೀವು ರಾಜಕಾರಣಿ, ಶಾಸಕರಾಗಿ ಮಾತನಾಡುವ ಮಾತೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಶಾಸಕರ ಈ ಬೇಜಾವಾಬ್ದಾರಿ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ದ್ವೇಷದ ರಾಜಕಾರಣಕ್ಕೆ ಶಾಸಕರು ಮುಂದಾದ್ರಾ ಎಂಬ ಪ್ರಶ್ನೆಯೂ ಎದ್ದಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್