AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಷಡ್ಯಂತ್ರ ಮಾಡ್ತಿದ್ದಾರೆ; ಆದ್ರೆ ನಾನು ಹೆದರುವುದಿಲ್ಲ: ಹುಟ್ಟೂರಿನಲ್ಲಿ ಗುಡುಗಿದ ಡಿಕೆ ಶಿವಕುಮಾರ್

DK Shivakumar: ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತಾ ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಈ ಷಡ್ಯಂತ್ರಕ್ಕೆ ಹೆದರೋದಿಲ್ಲ ಎಂದು ಹುಟ್ಟೂರಿನಲ್ಲಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಷಡ್ಯಂತ್ರ ಮಾಡ್ತಿದ್ದಾರೆ; ಆದ್ರೆ ನಾನು ಹೆದರುವುದಿಲ್ಲ: ಹುಟ್ಟೂರಿನಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
TV9 Web
| Edited By: |

Updated on: Jan 09, 2022 | 9:41 PM

Share

ರಾಮನಗರ: ನನ್ನನ್ನು ಮತ್ತೆ ಜೈಲಿಗೆ ಹಾಕಿಸಬೇಕೆಂದು ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಷಡ್ಯಂತ್ರಕ್ಕೆ ಹೆದರುವುದಿಲ್ಲ. ಇಡೀ ಊರಿನಲ್ಲಿ ಇಂಥ ಸಂಭ್ರಮ ನಾನು ನೋಡಿರಲಿಲ್ಲ. ನಿಮ್ಮಲ್ಲೆರಿಗೂ ನನ್ನ ಧನ್ಯವಾದಗಳು. ನಾನು ಜೈಲಿಗೆ ಹೋದಾಗ ನಿಮ್ಮ ಅಭಿಮಾನ ಬೆಂಬಲ ಮರೆಯೋಕೆ ಆಗಲ್ಲ. ಡಿ.ಕೆ. ಶಿವಕುಮಾರ್ ದೊಡ್ಡಆಲಹಳ್ಳಿಯ ಕನಕಪುರದವನು ಅಂತಾರೆ ಎಂದು ಸ್ವಗ್ರಾಮ ದೊಡ್ಡಆಲಹಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ತಿಹಾರ ಜೈಲಿಗೆ ಹೋಗಿದ್ದಕ್ಕೆ ಈ ಗಡ್ಡ ಬಿಟ್ಟಿದ್ದೇನೆ. ನೀವೆ ಇದಕ್ಕೆ ಮುಕ್ತಿ ಕೊಡಬೇಕು. ನಾನು ನಿಮ್ಮ ಮಗ. ನೀವೇ ಡಿ.ಕೆ. ಶಿವಕುಮಾರ್. ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತಾ ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಈ ಷಡ್ಯಂತ್ರಕ್ಕೆ ಹೆದರೋದಿಲ್ಲ ಎಂದು ಹುಟ್ಟೂರಿನಲ್ಲಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಬಸವರಾಜ ಬೊಮ್ಮಾಯಿಯವರೇ ಎಲ್ಲರ ಲಿಸ್ಟ್ ಕಳುಹಿಸ್ತೀನಿ ಜೈಲಿಗೆ ಕಳುಹಿಸಿ. ನಿಮಗೆ ಹಾಲು ಕುಡಿದಷ್ಟು ಸಂತೋಷವಾಗುತ್ತೆ. ತಮಿಳುನಾಡಿನವರದ್ದು ರಾಜಕೀಯ ದ್ವೇಷ. ನನ್ನ ಹೋರಾಟಕ್ಕೆ ಎರಡು ಪಕ್ಷದವರು ಷಡ್ಯಂತ್ರ ಮಾಡ್ತಿದ್ದಾರೆ. ಜೆಡಿಎಸ್, ಬಿಜೆಪಿಯವರು ನಾಡಿನದ್ರೋಹಿಗಳೋ ಅನ್ನೋದನ್ನ ನೀವೆ ತೀರ್ಮಾನ ಮಾಡಿ. ನಾನು ನಾಡಿನ ಬದುಕಿಗೋಸ್ಕರ, ನೀರಿಗೋಸ್ಕರ ಹೋರಾಟ ಮಾಡ್ತಿದ್ದೇನೆ. ನನ್ನೆಲ್ಲ ತಾಯಂದಿರ ಪಾದಗಳಿಗೆ ನಮಸ್ಕಾರ ಹೇಳಿ ನನ್ನ ಭಾಷಣ ಮುಗಿಸುತ್ತೇನೆ ಎಂದು ಡಿಕೆಶಿ ಮಾತನಾಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ದುನಿಯಾ ವಿಜಯ್ ಭಾಗಿ; ​ನೀರಿಗಾಗಿ ಹೋರಾಟಕ್ಕೆ ‘ಸಲಗ’ ಬೆಂಬಲ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ ಬಸವರಾಜ ಬೊಮ್ಮಾಯಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್