AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಷಡ್ಯಂತ್ರ ಮಾಡ್ತಿದ್ದಾರೆ; ಆದ್ರೆ ನಾನು ಹೆದರುವುದಿಲ್ಲ: ಹುಟ್ಟೂರಿನಲ್ಲಿ ಗುಡುಗಿದ ಡಿಕೆ ಶಿವಕುಮಾರ್

DK Shivakumar: ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತಾ ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಈ ಷಡ್ಯಂತ್ರಕ್ಕೆ ಹೆದರೋದಿಲ್ಲ ಎಂದು ಹುಟ್ಟೂರಿನಲ್ಲಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಷಡ್ಯಂತ್ರ ಮಾಡ್ತಿದ್ದಾರೆ; ಆದ್ರೆ ನಾನು ಹೆದರುವುದಿಲ್ಲ: ಹುಟ್ಟೂರಿನಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
TV9 Web
| Edited By: |

Updated on: Jan 09, 2022 | 9:41 PM

Share

ರಾಮನಗರ: ನನ್ನನ್ನು ಮತ್ತೆ ಜೈಲಿಗೆ ಹಾಕಿಸಬೇಕೆಂದು ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಷಡ್ಯಂತ್ರಕ್ಕೆ ಹೆದರುವುದಿಲ್ಲ. ಇಡೀ ಊರಿನಲ್ಲಿ ಇಂಥ ಸಂಭ್ರಮ ನಾನು ನೋಡಿರಲಿಲ್ಲ. ನಿಮ್ಮಲ್ಲೆರಿಗೂ ನನ್ನ ಧನ್ಯವಾದಗಳು. ನಾನು ಜೈಲಿಗೆ ಹೋದಾಗ ನಿಮ್ಮ ಅಭಿಮಾನ ಬೆಂಬಲ ಮರೆಯೋಕೆ ಆಗಲ್ಲ. ಡಿ.ಕೆ. ಶಿವಕುಮಾರ್ ದೊಡ್ಡಆಲಹಳ್ಳಿಯ ಕನಕಪುರದವನು ಅಂತಾರೆ ಎಂದು ಸ್ವಗ್ರಾಮ ದೊಡ್ಡಆಲಹಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ತಿಹಾರ ಜೈಲಿಗೆ ಹೋಗಿದ್ದಕ್ಕೆ ಈ ಗಡ್ಡ ಬಿಟ್ಟಿದ್ದೇನೆ. ನೀವೆ ಇದಕ್ಕೆ ಮುಕ್ತಿ ಕೊಡಬೇಕು. ನಾನು ನಿಮ್ಮ ಮಗ. ನೀವೇ ಡಿ.ಕೆ. ಶಿವಕುಮಾರ್. ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತಾ ಷಡ್ಯಂತ್ರ ಮಾಡ್ತಿದ್ದಾರೆ. ಆದ್ರೆ ನಾನು ಈ ಷಡ್ಯಂತ್ರಕ್ಕೆ ಹೆದರೋದಿಲ್ಲ ಎಂದು ಹುಟ್ಟೂರಿನಲ್ಲಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಬಸವರಾಜ ಬೊಮ್ಮಾಯಿಯವರೇ ಎಲ್ಲರ ಲಿಸ್ಟ್ ಕಳುಹಿಸ್ತೀನಿ ಜೈಲಿಗೆ ಕಳುಹಿಸಿ. ನಿಮಗೆ ಹಾಲು ಕುಡಿದಷ್ಟು ಸಂತೋಷವಾಗುತ್ತೆ. ತಮಿಳುನಾಡಿನವರದ್ದು ರಾಜಕೀಯ ದ್ವೇಷ. ನನ್ನ ಹೋರಾಟಕ್ಕೆ ಎರಡು ಪಕ್ಷದವರು ಷಡ್ಯಂತ್ರ ಮಾಡ್ತಿದ್ದಾರೆ. ಜೆಡಿಎಸ್, ಬಿಜೆಪಿಯವರು ನಾಡಿನದ್ರೋಹಿಗಳೋ ಅನ್ನೋದನ್ನ ನೀವೆ ತೀರ್ಮಾನ ಮಾಡಿ. ನಾನು ನಾಡಿನ ಬದುಕಿಗೋಸ್ಕರ, ನೀರಿಗೋಸ್ಕರ ಹೋರಾಟ ಮಾಡ್ತಿದ್ದೇನೆ. ನನ್ನೆಲ್ಲ ತಾಯಂದಿರ ಪಾದಗಳಿಗೆ ನಮಸ್ಕಾರ ಹೇಳಿ ನನ್ನ ಭಾಷಣ ಮುಗಿಸುತ್ತೇನೆ ಎಂದು ಡಿಕೆಶಿ ಮಾತನಾಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ದುನಿಯಾ ವಿಜಯ್ ಭಾಗಿ; ​ನೀರಿಗಾಗಿ ಹೋರಾಟಕ್ಕೆ ‘ಸಲಗ’ ಬೆಂಬಲ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ ಬಸವರಾಜ ಬೊಮ್ಮಾಯಿ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ