ರಾಮನಗರ ಜಿಲ್ಲಾ‌ ಕಾರಗೃಹ ಸ್ಥಳಾಂತರ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿದ ಡಿಸಿಎಂ ಡಿಕೆ ಶಿವಕುಮಾರ್

ರಾಮನಗರ ಜಿಲ್ಲಾ‌ ಕಾರಗೃಹ ಸ್ಥಳಾಂತರ ಮಾಡಲು ಜೈಲಿನ‌ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ಗೆ ಸೂಚನೆ ನೀಡಿದ್ದು, ರಾಮನಗರ-ಚನ್ನಪಟ್ಟಣ ಮಧ್ಯೆ ನೂತನ ಕಾರಗೃಹ ನಿರ್ಮಾಣಕ್ಕೆ ಸೂಚಿಸಿದ್ದಾರೆ.

ರಾಮನಗರ ಜಿಲ್ಲಾ‌ ಕಾರಗೃಹ ಸ್ಥಳಾಂತರ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿದ ಡಿಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 16, 2024 | 7:03 PM

ರಾಮನಗರ, ಮಾ.16: ರಾಮನಗರ ಜಿಲ್ಲಾ‌ ಕಾರಗೃಹ ಸ್ಥಳಾಂತರ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿರುವ ಜಿಲ್ಲಾ ಕಾರಗೃಹಕ್ಕೆ ಸೇರಿದ ಜಾಗವನ್ನ ಇತರ ಅಭಿವೃದ್ಧಿ ಕಾರ್ಯಕ್ಕೆ ಬಳಸಲು ಮತ್ತು ರಾಮನಗರ-ಚನ್ನಪಟ್ಟಣ ಮಧ್ಯೆ ನೂತನ ಕಾರಗೃಹ ನಿರ್ಮಾಣಕ್ಕೆ ಸೂಚಿಸಿದ್ದಾರೆ.

300‌ಕ್ಕೂ ಅಧಿಕ ಖೈದಿಗಳಿರುವ ರಾಮನಗರ ಜೈಲು

ಕೂಡಲೇ‌ ಕಾರಗೃಹ ಬೇರೆಡೆ‌ ಶಿಫ್ಟ್ ಮಾಡುವ ಉದ್ದೇಶದ ಹಿನ್ನಲೆ ಜಾಗಕ್ಕಾಗಿ ಹುಡುಕಾಟ ನಡೆಸಿದ್ದಾರೆ. 4 ರಿಂದ 5 ಎಕರೆ ಜಾಗ ಸಿಕ್ಕ ಬಳಿಕ ರಾಮನಗರ ಕಾರಗೃಹ ಶಿಫ್ಟ್ ಆಗಲಿದೆ. ಇನ್ನು 2007‌ರಲ್ಲಿ ನಿರ್ಮಾಣವಾಗಿರುವ ರಾಮನಗರ ಬಂಧಿಖಾನೆಯಲ್ಲಿ ಬರೊಬ್ಬರಿ 300‌ಕ್ಕೂ ಅಧಿಕ ಖೈದಿಗಳಿದ್ದಾರೆ. ಈ ಖೈದಿಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಜೈಲಿನ‌ ಅಧಿಕಾರಿಗಳು ಕೂಡ ಜೈಲು ಶಿಫ್ಟ್​ ಮಾಡುವಂತೆ ಮನವಿ ಸಲ್ಲಿಸಿದ್ದರು. ಅದರಂತೆ ಇದೀಗ ಡಿಸಿಎಂ ಕೂಡ ಇದಕ್ಕೆ ಅಸ್ತು ಎಂದಿದ್ದು, ಸಾಮಾನ್ಯ ಜೈಲಿನಿಂದ ಸೆಂಟ್ರಲ್ ಜೈಲ್ ಮಾಡಲು ಜಾಗಕ್ಕಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ:ನೀರಿನ ಮೌಲ್ಯ ತಿಳಿಸಲು ʼನೀರು ಉಳಿಸಿ ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ತಳ್ಳೋ ಗಾಡಿಯಲ್ಲಿ ಆಕಸ್ಮಿಕ ಬೆಂಕಿ, ಆರಿಸೋಕೆ ಹೋಗಿ ಮೈಕೈ ಸುಟ್ಟುಕೊಂಡ ಸವಾರ

ಬೆಂಗಳೂರು: ಫುಟ್​ಪಾತ್​ನಲ್ಲಿ ನಿಂತಿದ್ದ ತಳ್ಳುವ ಗಾಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಆರಿಸುವುದಕ್ಕೆ ಹೋಗಿ ಸವಾರ ಮೈಕೈ ಸುಟ್ಟುಕೊಂಡಿರುವ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡ ಶೇಕ್ ನವೀದ್ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳ್ಳಹಳ್ಳಿ ಜಂಕ್ಷನ್ ಕಡೆಯಿಂದ ಹೆಗಡೆ ನಗರ ಕಡೆ ಬೈಕ್​ನಲ್ಲಿ ಹೋಗ್ತಿದ್ದ ನವೀದ್,
ಈ ವೇಳೆ ಫುಟ್ ಪಾತ್​ನಲ್ಲಿದ್ದ ತಳ್ಳೋಗಾಡಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಅದನ್ನು ಆರಿಸೋಕೆ ಮುಂದಾಗಿದ್ದ ವೇಳೆ ಅವಘಡ ಸಂಭವಿಸಿದೆ. ಈ ಕುರಿತು ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Sat, 16 March 24

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us