AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 10, 2023 | 5:38 PM

ರಾಮನಗರ, ನ.10: ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್(DK Shivakumar)​ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ‘ರಾಮನಗರ(Ramanagara)ವನ್ನು ಬೆಂಗಳೂರು ಬದಲು ಡೆಲ್ಲಿಯೆಂದು ಹೆಸರಿಡಿ, ಯಾರು ಬೇಡ ಅಂದವರು, ಆಗ ಇನ್ನೂ ವಿಶ್ವಮಟ್ಟದಲ್ಲಿ ಹೆಸರಾಗುತ್ತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಟಾಂಗ್ ಕೊಟ್ಟಿದ್ದಾರೆ.

ಇಂದು(ನ.10) ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಇದನ್ನೂ ಓದಿ:ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಪ್ರಯತ್ನ ಎಂದಿದ್ದ ಡಿಸಿಎಂ

ಬಿಡದಿ ಭಾಗದಲ್ಲಿ ಲಕ್ಷಾಂತರ ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಹೌದು, ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ​ಹೇಳಿದ್ದರು. ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ‘ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Fri, 10 November 23

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ