AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 10, 2023 | 5:38 PM

ರಾಮನಗರ, ನ.10: ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್(DK Shivakumar)​ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ‘ರಾಮನಗರ(Ramanagara)ವನ್ನು ಬೆಂಗಳೂರು ಬದಲು ಡೆಲ್ಲಿಯೆಂದು ಹೆಸರಿಡಿ, ಯಾರು ಬೇಡ ಅಂದವರು, ಆಗ ಇನ್ನೂ ವಿಶ್ವಮಟ್ಟದಲ್ಲಿ ಹೆಸರಾಗುತ್ತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಟಾಂಗ್ ಕೊಟ್ಟಿದ್ದಾರೆ.

ಇಂದು(ನ.10) ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಇದನ್ನೂ ಓದಿ:ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಪ್ರಯತ್ನ ಎಂದಿದ್ದ ಡಿಸಿಎಂ

ಬಿಡದಿ ಭಾಗದಲ್ಲಿ ಲಕ್ಷಾಂತರ ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಹೌದು, ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ​ಹೇಳಿದ್ದರು. ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ‘ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Fri, 10 November 23

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?