AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 10, 2023 | 5:38 PM

Share

ರಾಮನಗರ, ನ.10: ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್(DK Shivakumar)​ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ‘ರಾಮನಗರ(Ramanagara)ವನ್ನು ಬೆಂಗಳೂರು ಬದಲು ಡೆಲ್ಲಿಯೆಂದು ಹೆಸರಿಡಿ, ಯಾರು ಬೇಡ ಅಂದವರು, ಆಗ ಇನ್ನೂ ವಿಶ್ವಮಟ್ಟದಲ್ಲಿ ಹೆಸರಾಗುತ್ತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಟಾಂಗ್ ಕೊಟ್ಟಿದ್ದಾರೆ.

ಇಂದು(ನ.10) ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಇದನ್ನೂ ಓದಿ:ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಪ್ರಯತ್ನ ಎಂದಿದ್ದ ಡಿಸಿಎಂ

ಬಿಡದಿ ಭಾಗದಲ್ಲಿ ಲಕ್ಷಾಂತರ ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಹೌದು, ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ​ಹೇಳಿದ್ದರು. ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ‘ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Fri, 10 November 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ