ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 10, 2023 | 5:38 PM

ರಾಮನಗರ, ನ.10: ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್(DK Shivakumar)​ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ‘ರಾಮನಗರ(Ramanagara)ವನ್ನು ಬೆಂಗಳೂರು ಬದಲು ಡೆಲ್ಲಿಯೆಂದು ಹೆಸರಿಡಿ, ಯಾರು ಬೇಡ ಅಂದವರು, ಆಗ ಇನ್ನೂ ವಿಶ್ವಮಟ್ಟದಲ್ಲಿ ಹೆಸರಾಗುತ್ತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಟಾಂಗ್ ಕೊಟ್ಟಿದ್ದಾರೆ.

ಇಂದು(ನ.10) ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ‘ಸ್ವಲ್ಪ ಮಳೆ‌ ಆದಾಗ ನೋಡಿದ್ದೀರಲ್ಲ, ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆಂದು. ಸಹಕಾರನಗರದಲ್ಲಿ ನೀರು ನುಗ್ಗಿದ್ದಕ್ಕೆ ಅಂಗಡಿ ಮಾಲೀಕರು, ಸ್ಥಳೀಯರು ಸೇರಿ ಸಚಿವರಿಗೆ ಏರು ಧ್ವನಿಯಲ್ಲೇ ಮಾತಾಡಲಿಲ್ಲವಾ, ಆಗ ನಾನೇನು ಮಾಡುವುದಕ್ಕೆ ಆಗುತ್ತೆ ಎಂದು ಸಚಿವರು ಉತ್ತರ ಕೊಟ್ಟಿದ್ದಾರೆ. ಹೆಸರು ಬದಲಾವಣೆ‌ ಮಾಡುವುದರಿಂದ ಏನೂ ಬದಲಾಗಲ್ಲ ಎಂದರು.

ಇದನ್ನೂ ಓದಿ:ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಪ್ರಯತ್ನ ಎಂದಿದ್ದ ಡಿಸಿಎಂ

ಬಿಡದಿ ಭಾಗದಲ್ಲಿ ಲಕ್ಷಾಂತರ ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಹೌದು, ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ​ಹೇಳಿದ್ದರು. ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ‘ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Fri, 10 November 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us