ಅಧಿಕಾರಿಗಳು, ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆ ಶಿವಕುಮಾರ್

ಇಂದು(ಸೆ.28) ಕನಕಪುರದ ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ‘ಅಧಿಕಾರಿಗಳು, ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ ಎಂದರು.

ಅಧಿಕಾರಿಗಳು, ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​
Follow us
|

Updated on: Sep 28, 2024 | 7:38 PM

ರಾಮನಗರ, ಸೆ.28: ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(DK Shivakumar) ಹೇಳಿದ್ದಾರೆ. ಕನಕಪುರದ ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು ಎಂದರು.

ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ ಎಂದು  ಹೇಳಿದರು.

ಕನಕಪುರ ಭಾಗದಲ್ಲಿ 2-3 ಲಕ್ಷಕ್ಕೆ ಜಮೀನು ಕೇಳುವವರು ಇರಲಿಲ್ಲ

ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡ್ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ. ಈ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಎಂಟು ಎಕರೆಯಲ್ಲಿ ಸಿಎಸ್ಆರ್ ನಿಧಿಯಿಂದ ದೊಡ್ಡ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇನೆ. ಜೊತೆಗೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರನ್ನು ಸಬಲರನ್ನಾಗಿ ಮಾಡಿದೆ” ಎಂದರು.

ಇದನ್ನೂ ಓದಿ:ಬೆಳ್ಳಂದೂರು ಟೆಕ್ಕಿಗಳಿಗೆ ಡಿಕೆ ಶಿವಕುಮಾರ್ ಗುಡ್​ ನ್ಯೂಸ್​​: ಟ್ರಾಫಿಕ್ ಸಮಸ್ಯೆ​ ನಿವಾರಣೆಗೆ ಜಮೀನು ಖರೀದಿ

ಇಲಾಖಾವಾರು ಕೌಂಟರ್​ಗಳನ್ನು ತೆರೆಯಿರಿ

ಮುಂದಿನ ಜನಸ್ಪಂದನ ಸಭೆಯಲ್ಲಿ ಅರ್ಜಿ ಬರೆಯಲು 5 ಕೌಂಟರ್​ಗಳು ಹಾಗೂ ಇಲಾಖಾವಾರು ಅರ್ಜಿ ಸ್ವೀಕರಿಸಲು ಕೌಂಟರ್ ಗಳನ್ನು ತೆರೆಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ರೇಷ್ಮೆ ಕೃಷಿಯನ್ನು ಕೈ ಬಿಡಬೇಡಿ

ವಾಣಿಜ್ಯ ಬೆಳೆಗಳಿಗೆ ಉತ್ತಮ ಬೇಡಿಕೆಯಿದೆ. ರೇಷ್ಮೆಗೆ ಉತ್ತಮ ಬೆಲೆ ಬಂದಿದೆ. ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು ರೇಷ್ಮೆಯನ್ನು ಉತ್ಪಾದನೆ ಮಾಡುವ ತಾಲೂಕು ನಮ್ಮದು. ಯಾವುದೇ ಕಾರಣಕ್ಕೂ ರೇಷ್ಮೆ ಬೆಳೆಯನ್ನು ಕೈಬಿಡಬೇಡಿ ಎಂದು ಕೃಷಿಕರಿಗೆ ಕಿವಿ ಮಾತು ಹೇಳಿದರು. ನಂತರ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದ ಅವರು, ಹಲವಾರು ಸಮಸ್ಯೆಗಳನ್ನು ಹೊತ್ತು ಬಂದಿದ್ದ ಸುಮಾರು 700ಕ್ಕೂ ಹೆಚ್ಚು ಅರ್ಜಿಗಳಲ್ಲಿ ಒಂದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಓಡಾಡಲು ಯಾವುದೇ ಕಾರಣಕ್ಕೂ ಬಸ್ ತೊಂದರೆ ಆಗಬಾರದು; ಡಿಸಿಎಂ ಖಡಕ್ ಸೂಚನೆ

ಸೋಮವಾರದ ಹೊತ್ತಿಗೆ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಯಾಗಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಇದೇ ವೇಳೆ ಬಸ್​ಗಳು ಸರಿಯಾದ ಸಮಯಕ್ಕೆ ಬರದ ಕಾರಣಕ್ಕೆ ನಾವು ವಾರಕ್ಕೆ ಮೂರು ದಿನ ಕ್ಲಾಸಿಗೆ ಸರಿಯಾಗಿ ಬರಲು ಆಗುತ್ತಿಲ್ಲ. ನಮಗೆ ಹರಿಹರದಿಂದ ಸಾತಾನೂರುವರೆಗೆ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಬೇಕು ಎಂದು ಸಾತನೂರು ಗ್ರಾಮಾಂತರ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಸಲ್ಲಿಸಿದ ಮನವಿಗೆ ಡಿಸಿಎಂ ಸ್ಪಂದಿಸಿದ್ದು, ಈ ವಿದ್ಯಾರ್ಥಿಗಳು ಪ್ರಯಾಣ ಮಾಡುವ ಹಲಗೂರಿನಿಂದ ಕನಕಪುರಕ್ಕೆ ಬರುವ ಬಸ್​ಗಳು ಪ್ರತಿ ಹಳ್ಳಿಗಳಲ್ಲಿ ನಿಲ್ಲಿಸಬೇಕು ಹಾಗೂ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ತೊಂದರೆ ಕೊಡಬೇಡಿ ಎಂದು ಕೆಎಸ್ ಆರ್ ಟಿಸಿ ಡಿಟಿಓ ರಾಘವೇಂದ್ರ ಅವರನ್ನು ಕರೆದು ಸೂಚಿಸಿದರು.

ಇದನ್ನೂ ಓದಿ:ಬೆಳ್ಳಂದೂರು ಟೆಕ್ಕಿಗಳಿಗೆ ಡಿಕೆ ಶಿವಕುಮಾರ್ ಗುಡ್​ ನ್ಯೂಸ್​​: ಟ್ರಾಫಿಕ್ ಸಮಸ್ಯೆ​ ನಿವಾರಣೆಗೆ ಜಮೀನು ಖರೀದಿ

ಈ ಸಮಸ್ಯೆ ಮಾತ್ರ ಮರೆಯಬೇಡಿ

ಇದೇ ವೇಳೆ ಸಾತನೂರು ಪಟ್ಟಣದ ಸುಮಾರು 90 ವರ್ಷದ ಕೆಂಚೇಗೌಡ ಅವರು ‘ನನಗೆ ಪಿಂಚಣಿ ಬರುವುದು ನಿಂತು ಹೋಗಿ ಒಂದೂವರೆ ವರ್ಷಗಳಾಗಿವೆ. ನೀವೇ ಪರಿಹಾರ ನೀಡಿ ಎಂದು ಕೇಳೀದ್ದು, “ಇವರ ಸಮಸ್ಯೆಯನ್ನೂ ಯಾವುದೇ ಕಾರಣಕ್ಕೂ ಮರೆಯಬೇಡಿ, ಕೂಡಲೇ ಬಗೆಹರಿಸಿ” ಎಂದು ಹೇಳಿದರು.

ಜನಸ್ಪಂದನ ಕಾರ್ಯಕ್ರಮದ ನಡುವೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ‘ಮನೆ ಹಾಗೂ ನಿವೇಶನ ಸಮಸ್ಯೆಗಳ ಬಗ್ಗೆ ಹೆಚ್ಚು ಅರ್ಜಿಗಳು ಬಂದಿವೆ. ಕೆಂಬಾಳು ಬಳಿ 45 ಎಕರೆ ವಿಸ್ತೀರ್ಣದಲ್ಲಿ ಹೊಸ ಸಾತನೂರು ನಿರ್ಮಾಣ ಮಾಡಲಾಗುತ್ತಿದೆ. ಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ. ಇಲ್ಲಿ ಸಿಎಸ್ ಆರ್ ಅಡಿ ಶಾಲೆ ನಿರ್ಮಾಣಕ್ಕಾಗಿ 8 ಎಕರೆ ಭೂಮಿ ಹಾಗೂ ಮೀಸಲಿಟ್ಟಿದ್ದು, 10 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಈ ಕಾರಣಕ್ಕೆ ಎಲ್ಲರು ಅಲ್ಲಿ ನಿವೇಶನ ನೀಡಲಿ ಎಂದು ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ ಎಂದರು.

ಕನಕಪುರ ಅಭಿವೃದ್ಧಿಯ ಬಗ್ಗೆ ಛಾಯಾಚಿತ್ರ ಪ್ರದರ್ಶನ

ಕನಕಪುರದ ಬಗ್ಗೆ ಪ್ರಗತಿಯ ಬಗ್ಗೆ ಛಾಯಾಚಿತ್ರ ಪ್ರದರ್ಶನದ ಬಗ್ಗೆ ಮಾತನಾಡಿ, ‘ಈಗಿನ ಯುವ ಜನಾಂಗಕ್ಕೆ ಹಳೆಯ ಕ್ಷೇತ್ರ ಹೇಗಿತ್ತು ಎಂದು ತಿಳಿದಿಲ್ಲ. ನಾನು ಶಾಸಕ ಹಾಗೂ ಮಂತ್ರಿಯಾಗುವ ಮುಂಚಿತವಾಗಿ ಕನಕಪುರ ಸೇರಿದಂತೆ ಸುತ್ತಲಿನ, ಕಬ್ಬಾಳಮ್ಮ ಕ್ಷೇತ್ರ, ದೊಡ್ಡಆಲಹಳ್ಳಿ ರಸ್ತೆಗಳು, ತಾಲ್ಲೂಕು ಕಚೇರಿ ಹಾಗೂ ಇತರೇ ಅಭಿವೃದ್ಧಿ ವಿಚಾರಗಳ ಬಗ್ಗೆ  ಛಾಯಾಚಿತ್ರಗಳ ಡಾಕ್ಯುಮೆಂಟ್​ನ್ನು ತಯಾರಿಸಿ ಪ್ರದರ್ಶಿಸಲಾಗುವುದು ಹಾಗೂ ಅಭಿವೃದ್ಧಿಯ ಬಗ್ಗೆ ಹೊಸ ಪೀಳಿಗೆಗೆ ತಿಳಿಸಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ