ಕುಡಿತ ತಪ್ಪಿಸಲು ಸಾಧ್ಯವಿಲ್ಲ, ಸೂಕ್ತ ಪ್ರದೇಶಗಳಲ್ಲಿ ಬಾರ್​ಗಳನ್ನು ತೆರೆಯಲಾಗುವುದು ಎಂದ ಡಿಕೆ ಶಿವಕುಮಾರ್

ಇಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಗ್ರಾಮದಲ್ಲಿ ಮಾತನಾಡಿದ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ‘ ಹಳ್ಳಿಗಳಲ್ಲಿ ಬಾರ್​ಗಳನ್ನು ತೆಗೆಯಲಾಗುವುದಿಲ್ಲ, ಬದಲಾಗಿ ಈ ಕುರಿತು ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ತೆರೆಯಲಾಗುವುದು ಎಂದಿದ್ದಾರೆ.

ಕುಡಿತ ತಪ್ಪಿಸಲು ಸಾಧ್ಯವಿಲ್ಲ, ಸೂಕ್ತ ಪ್ರದೇಶಗಳಲ್ಲಿ ಬಾರ್​ಗಳನ್ನು ತೆರೆಯಲಾಗುವುದು ಎಂದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 06, 2023 | 3:45 PM

ರಾಮನಗರ,ಅ.06: ‘ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ, ಜೊತೆಗೆ ಹಳ್ಳಿಯಲ್ಲಿ ನಾವು ಬಾರ್ ತೆಗೆಯುವುದಿಲ್ಲ. ಈ ಕುರಿತು ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್(Bar)​ಗಳನ್ನು ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು.​ ರಾಮನಗರ ಜಿಲ್ಲೆಯ ಮಾಗಡಿ(Magadi) ತಾಲೂಕಿನ ಕುದೂರು ಗ್ರಾಮದಲ್ಲಿ ಮಾತನಾಡಿದ ಅವರು ‘ಕುಡಿಯುವುದನ್ನು ಯಾರೂ ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದರು.

ಇನ್ನೊಂದೆಡೆ ಚಿತ್ರದುರ್ಗದಲ್ಲಿ ಇಂದು (ಅ.06) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ‘ ನಮ್ಮ ಸರ್ಕಾರ ಮದ್ಯದ ಅಂಗಡಿ ತೆಗೆಯಲ್ಲ, ಬಿಜೆಪಿ ಆಡಳಿತದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದರು.

ಇದನ್ನೂ ಓದಿ:ಪಂಚಾಯಿತಿಗೊಂದು ಬಾರ್ ವಿವಾದದ ಬಗ್ಗೆ ಸಿಎಂ, ಡಿಸಿಎಂ ಸ್ಪಷ್ಟನೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ

ಪಾಪದ ಹಣದಲ್ಲಿ ಸರ್ಕಾರ ನಡೆಸುವ ಅಗತ್ಯವಿಲ್ಲ ಎಂದಿದ್ದ ಸ್ವಪಕ್ಷದ ಶಾಸಕ

ಹೌದು, ನೂತನ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಕುರಿತು ಇತ್ತೀಚೆಗೆ ಮಾತನಾಡಿದ್ದ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್, ‘ಪಾಪದ ಹಣದಲ್ಲಿ ಸರ್ಕಾರ ನಡೆಸುವ ಅಗತ್ಯವಿಲ್ಲ. ಮದ್ಯದ ಅಂಗಡಿಗಳನ್ನು ಯಾವ ಪುರುಷಾರ್ಥಕ್ಕೆ ಹೆಚ್ಚಿಸುತ್ತಿದ್ದಾರೆ? ಸರ್ಕಾರ ನಡೆಸಲು ಆರ್ಥಿಕ ಸಮಸ್ಯೆಗಳಿದ್ದರೆ ಬೇರೆ ಮಾರ್ಗ ಹುಡುಕಲಿ. ಶ್ರೀಮಂತರಿಗೆ ಯಾಕೆ ಉಚಿತ ಯೋಜನೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಜೊತೆಗೆ  ‘ನನ್ನಂತಹವರಿಗೆ ಉಚಿತ ವಿದ್ಯುತ್ ನೀಡುವ ಅಗತ್ಯವೇನಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ತಜ್ಞರು, ಮ್ಯಾನೇಜ್ ಮಾಡುವ ನಂಬಿಕೆ ಇದೆ. ಈ ವಿಚಾರವನ್ನು ಶಾಸಕರ ಸಭೆ, ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಒಂದು ವೇಳೆ ಸರ್ಕಾರ ಈ ನಿರ್ಣಯದಿಂದ ಹಿಂದೆ ಸರಿಯದಿದ್ದರೆ ನಾನೇ ಹೋರಾಟ ನಡೆಸುವೆ ಎಂದು ಸ್ವ-ಪಕ್ಷದ ಶಾಸಕ ಬಿ.ಆರ್.ಪಾಟೀಲ್  ಎಚ್ಚರಿಕೆ ನೀಡಿದ್ದರು. ಇವುಗಳ ಬೆನ್ನಲ್ಲೆ ಇದೀಗ ಡಿಕೆ ಶಿವಕುಮಾರ್​ ಸೂಕ್ತ ಪ್ರದೇಶಗಳಲ್ಲಿ ಬಾರ್​ಗಳನ್ನು ತೆರೆಯುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us