AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ; ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಖಾಲಿ ಇರುವ ಶಾಸಕ ಸ್ಥಾನಕ್ಕೆ ಎಲ್ಲಿಲ್ಲದ ಪೈಪೋಟಿ ಶುರುವಾಗಿದ್ದು, ಬೊಂಬೆನಾಡು ಚನ್ನಪಟ್ಟಣ ಉಪ ಚುನಾವಣೆ ಈ ಬಾರಿ ಹೈವೋಲ್ಟೇಜ್ ಪಡೆದುಕೊಂಡಿದೆ.‌ ಇದೀಗ ಕಾಂಗ್ರೆಸ್​ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ; ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ
ಡಿಕೆ ಶಿವಕುಮಾರ್
ಬಿ ಮೂರ್ತಿ, ನೆಲಮಂಗಲ
| Edited By: |

Updated on:Aug 15, 2024 | 5:25 PM

Share

ಬೆಂಗಳೂರು ಗ್ರಾಮಾಂತರ, ಆ.15: ಚನ್ನಪಟ್ಟಣ ಬೈ ಎಲೆಕ್ಷನ್(Channapatna by-election)​ಗೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.

ಈ ದೇವಸ್ಥಾನಕ್ಕೆ ಬರಬೇಕೆಂದು ಬಹಳಷ್ಟು ದಿನದಿಂದ ಅಂದುಕೊಂಡಿದ್ದೆ. ಇದು ಇತಿಹಾಸವಿರುವ ಜಾಗ, ಹಾಗಾಗಿ ಬಂದು ಪೂಜೆ ಮಾಡಿದ್ದು, ಆ ಸೌಭಾಗ್ಯ ಸಿಕ್ಕಿದೆ. ಇದೇ ವೇಳೆ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರದ ಚರ್ಚೆ ವಿಚಾರ, ‘ಯಾವ ಸಚಿವರು ಏನೂ ಮಾತನಾಡಲ್ಲ, ಏನೂ ಇಲ್ಲ. ಅನುಕೂಲ ಇರುವವರಿಗೂ ಕೊಡುತ್ತಿದ್ದಾರೆ. ಅದಕ್ಕೆ ಅವರು ಬೇಡ ಎಂದು ಹೇಳುತ್ತಿದ್ದಾರೆ. ಅದರ ಬಗ್ಗೆ ಮುಂದೆ ಯೋಚನೆ ಮಾಡ್ತೇವೆ , ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯದ ಉಪ ಮುಖ್ಯಮಂತ್ರಿಯ ಧ್ಯಾನವೆಲ್ಲ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಮೇಲಿರುವಂತಿದೆ!

ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ

ಚನ್ನಪಟ್ಟಣದಲ್ಲಿ ಇಂದು ಧ್ವಜಾರೋಹಣ ವಿಚಾರವಾಗಿ ಮಾತನಾಡಿ, ‘ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ , ಅಧಿಕಾರಿಗಳನ್ನ ಕೇಳಿದ್ದೆ, ಅವರು ಬಂದಿಲ್ಲ ಅಂದರು, ನಮ್ಮ ಡ್ಯೂಟಿ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Thu, 15 August 24

Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?