AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ; ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಖಾಲಿ ಇರುವ ಶಾಸಕ ಸ್ಥಾನಕ್ಕೆ ಎಲ್ಲಿಲ್ಲದ ಪೈಪೋಟಿ ಶುರುವಾಗಿದ್ದು, ಬೊಂಬೆನಾಡು ಚನ್ನಪಟ್ಟಣ ಉಪ ಚುನಾವಣೆ ಈ ಬಾರಿ ಹೈವೋಲ್ಟೇಜ್ ಪಡೆದುಕೊಂಡಿದೆ.‌ ಇದೀಗ ಕಾಂಗ್ರೆಸ್​ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ; ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ
ಡಿಕೆ ಶಿವಕುಮಾರ್
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 15, 2024 | 5:25 PM

Share

ಬೆಂಗಳೂರು ಗ್ರಾಮಾಂತರ, ಆ.15: ಚನ್ನಪಟ್ಟಣ ಬೈ ಎಲೆಕ್ಷನ್(Channapatna by-election)​ಗೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.

ಈ ದೇವಸ್ಥಾನಕ್ಕೆ ಬರಬೇಕೆಂದು ಬಹಳಷ್ಟು ದಿನದಿಂದ ಅಂದುಕೊಂಡಿದ್ದೆ. ಇದು ಇತಿಹಾಸವಿರುವ ಜಾಗ, ಹಾಗಾಗಿ ಬಂದು ಪೂಜೆ ಮಾಡಿದ್ದು, ಆ ಸೌಭಾಗ್ಯ ಸಿಕ್ಕಿದೆ. ಇದೇ ವೇಳೆ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರದ ಚರ್ಚೆ ವಿಚಾರ, ‘ಯಾವ ಸಚಿವರು ಏನೂ ಮಾತನಾಡಲ್ಲ, ಏನೂ ಇಲ್ಲ. ಅನುಕೂಲ ಇರುವವರಿಗೂ ಕೊಡುತ್ತಿದ್ದಾರೆ. ಅದಕ್ಕೆ ಅವರು ಬೇಡ ಎಂದು ಹೇಳುತ್ತಿದ್ದಾರೆ. ಅದರ ಬಗ್ಗೆ ಮುಂದೆ ಯೋಚನೆ ಮಾಡ್ತೇವೆ , ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯದ ಉಪ ಮುಖ್ಯಮಂತ್ರಿಯ ಧ್ಯಾನವೆಲ್ಲ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಮೇಲಿರುವಂತಿದೆ!

ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ

ಚನ್ನಪಟ್ಟಣದಲ್ಲಿ ಇಂದು ಧ್ವಜಾರೋಹಣ ವಿಚಾರವಾಗಿ ಮಾತನಾಡಿ, ‘ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ , ಅಧಿಕಾರಿಗಳನ್ನ ಕೇಳಿದ್ದೆ, ಅವರು ಬಂದಿಲ್ಲ ಅಂದರು, ನಮ್ಮ ಡ್ಯೂಟಿ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Thu, 15 August 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು