ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ; ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಖಾಲಿ ಇರುವ ಶಾಸಕ ಸ್ಥಾನಕ್ಕೆ ಎಲ್ಲಿಲ್ಲದ ಪೈಪೋಟಿ ಶುರುವಾಗಿದ್ದು, ಬೊಂಬೆನಾಡು ಚನ್ನಪಟ್ಟಣ ಉಪ ಚುನಾವಣೆ ಈ ಬಾರಿ ಹೈವೋಲ್ಟೇಜ್ ಪಡೆದುಕೊಂಡಿದೆ.‌ ಇದೀಗ ಕಾಂಗ್ರೆಸ್​ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ; ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ
ಡಿಕೆ ಶಿವಕುಮಾರ್
Edited By:

Updated on: Aug 15, 2024 | 5:25 PM

ಬೆಂಗಳೂರು ಗ್ರಾಮಾಂತರ, ಆ.15: ಚನ್ನಪಟ್ಟಣ ಬೈ ಎಲೆಕ್ಷನ್(Channapatna by-election)​ಗೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.

ಈ ದೇವಸ್ಥಾನಕ್ಕೆ ಬರಬೇಕೆಂದು ಬಹಳಷ್ಟು ದಿನದಿಂದ ಅಂದುಕೊಂಡಿದ್ದೆ. ಇದು ಇತಿಹಾಸವಿರುವ ಜಾಗ, ಹಾಗಾಗಿ ಬಂದು ಪೂಜೆ ಮಾಡಿದ್ದು, ಆ ಸೌಭಾಗ್ಯ ಸಿಕ್ಕಿದೆ. ಇದೇ ವೇಳೆ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರದ ಚರ್ಚೆ ವಿಚಾರ, ‘ಯಾವ ಸಚಿವರು ಏನೂ ಮಾತನಾಡಲ್ಲ, ಏನೂ ಇಲ್ಲ. ಅನುಕೂಲ ಇರುವವರಿಗೂ ಕೊಡುತ್ತಿದ್ದಾರೆ. ಅದಕ್ಕೆ ಅವರು ಬೇಡ ಎಂದು ಹೇಳುತ್ತಿದ್ದಾರೆ. ಅದರ ಬಗ್ಗೆ ಮುಂದೆ ಯೋಚನೆ ಮಾಡ್ತೇವೆ , ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯದ ಉಪ ಮುಖ್ಯಮಂತ್ರಿಯ ಧ್ಯಾನವೆಲ್ಲ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಮೇಲಿರುವಂತಿದೆ!

ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ

ಚನ್ನಪಟ್ಟಣದಲ್ಲಿ ಇಂದು ಧ್ವಜಾರೋಹಣ ವಿಚಾರವಾಗಿ ಮಾತನಾಡಿ, ‘ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ , ಅಧಿಕಾರಿಗಳನ್ನ ಕೇಳಿದ್ದೆ, ಅವರು ಬಂದಿಲ್ಲ ಅಂದರು, ನಮ್ಮ ಡ್ಯೂಟಿ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Thu, 15 August 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us