AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್​ಡಿ ಕುಮಾರಸ್ವಾಮಿ: ಡಿಕೆ ಶಿವಕುಮಾರ್ ವಾಗ್ದಾಳಿ

DK Shivakumar vs HD Kumaraswamy: ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ ಹಾಗೂ ಇತರ ಸಂಘರ್ಷಗಳಿಗೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ಮುಂದುವರಿದಿದೆ. ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಕುಮಾರಸ್ವಾಮಿ ಎಂದಿ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್​ಡಿ ಕುಮಾರಸ್ವಾಮಿ: ಡಿಕೆ ಶಿವಕುಮಾರ್ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ & ಡಿಕೆ ಶಿವಕುಮಾರ್
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Ganapathi Sharma

Updated on:Feb 21, 2024 | 11:55 AM

ಕನಕಪುರ, ಫೆಬ್ರವರಿ 21: ರಾಮನಗರದಲ್ಲಿ (Ramanagara) ಗಲಾಟೆ ಮಾಡಿಸುತ್ತಿರುವುದೇ ಜೆಡಿಎಸ್ (JDS) ಪಕ್ಷ ಮತ್ತು ಅದರ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಗಂಭೀರ ಆರೋಪ ಮಾಡಿದ್ದಾರೆ. ವಕೀಲರ ಪ್ರತಿಭಟನೆ, ದಲಿತರ ಪ್ರತಿಭಟನೆ ಹಾಗೂ ಇತರ ಸಂಘರ್ಷಗಳ ಬಗ್ಗೆ ಕನಕಪುರದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅಲ್ಲಿ (ರಾಮನಗರದಲ್ಲಿ) ನಡೆಯುತ್ತಿರುವ ಎಲ್ಲ ಗಲಾಟೆಗಳಿಗೆ ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು ಹೇಳಿದ್ದಾರೆ.

ಈ ಮೂಲಕ, ರಾಮನಗರದಲ್ಲಿ ಡಿಕೆ ಸಹೋದರರಿಂದ ಅಶಾಂತಿ ಸೃಷ್ಟಿ ಎಂಬ ಜೆಡಿಎಸ್ ನಾಯಕರ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.

ರಾಮನಗರ ಪಿಎಸ್ಐ ಸಸ್ಪೆಂಡ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ನಾನೂ ಕೂಡ ಹೇಳಿದ್ದೆ. ಶಾಸಕರೂ ಕಾನೂನು ಪ್ರಕಾರ ಕೈಗೊಳ್ಳಿ ಎಂದಿದ್ದರು. ಈ ಬಗ್ಗೆ ತನಿಖೆ ಮಾಡಿ ತಪ್ಪಿದ್ರೆ ಕ್ರಮ ತಗೊಳ್ಳಿ ಎಂದು ನಾವು ಅಧಿಕಾರಿಗಳಿಗೆ ಹೇಳಿದ್ದೆವು. ಇಲ್ಲಿ ಯಾರಿಗೂ ಅನ್ಯಾಯ ಆಗಬಾರದು ಅಂತ ಹೇಳಿದ್ದೆ. ಈ ವಿಚಾರದಲ್ಲಿ ಬಿಜೆಪಿ – ಜೆಡಿಎಸ್​​ನವರು ರಾಜಕೀಯ ಮಾಡ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ, ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿಯವರು ಅಶಾಂತಿ ಸೃಷ್ಟಿಸುವುದು ಮಾಮೂಲಿ. ಕೋಮು ವಿಚಾರಗಳನ್ನು ತೆಗೆದುಕೊಂಡು ರಾಜಕೀಯ ಮಾಡುತ್ತಾರೆ. ಬಿಜೆಪಿಯವರಿಗೆ ಅಲ್ಪಸಂಖ್ಯಾತರನ್ನು ಕಂಡರೆ ಆಗುವುದಿಲ್ಲ. ಸ್ಥಳೀಯ ಶಾಸಕ, ಅಧಿಕಾರಿ ಅಲ್ಪಸಂಖ್ಯಾತ ಸಮುದಾಯದವರು ಆಗಿರುವುದರಿಂದ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲೇ ಹೇಳಿದ್ದರಲ್ಲವೇ, ಮೈನಾರಿಟಿ ಅಧಿಕಾರಿ ಬೇಡ ಎಂಬುದಾಗಿ ಎಂದು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಮನಗರ ವಕೀಲರ ಪ್ರತಿಭಟನೆ: ವಿವಾದದ ಕಿಡಿ ಹೊತ್ತಿಕೊಂಡಿದ್ದೆಲ್ಲಿಂದ? ಇಲ್ಲಿದೆ ಪೂರ್ಣ ವಿವರ

ರಾಮನಗರದಲ್ಲಿ ವಕೀಲರ ಪ್ರತಿಭಟನೆ ಹಾಗೂ ಒಟ್ಟಾರೆ ಬೆಳವಣಿಗೆ ಸಂಬಂಧ, ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನು ಬುಧವಾರ ಬೆಳಗ್ಗೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಮನಗರದ 40 ವಕೀಲರ ವಿರುದ್ಧ ತನ್ವೀರ್ ಹುಸೇನ್​ ಎಫ್​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ನಂತರ ರಾಜಕೀಯ ಆಯಾಮ ಪಡೆದುಕೊಂಡಿತ್ತು.

ಬಿಜೆಪಿಯವರು ನಮ್ಮನ್ನು ಕಟ್ಟಿಹಾಕಲಿ ನೋಡೋಣ: ಡಿಕೆಶಿ ಸವಾಲು

ಲೋಕಸಭಾ ಚುನಾವಣೆಗೆ ತಯಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವು ಕಳೆದ ಚುನಾವಣೆ ಮುಗಿದ ಮರುದಿನದಿಂದಲೇ ಕೆಲಸ ಆರಂಭಿಸಿದ್ದೇವೆ. ನಮ್ಮನ್ನು ಕಟ್ಟಿ ಹಾಕುತ್ತೇವೆ ಎನ್ನುತ್ತಿದ್ದಾರಲ್ಲ, ಕಟ್ಟಿಹಾಕಲಿ ನೋಡೋಣ ಎಂದು ಸವಾಲು ಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:54 am, Wed, 21 February 24

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ