AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣವನ್ನು ಗಂಭೀರವಾಗಿ ತೆಗೆದುಕೊಂಡ ಡಿಕೆ ಶಿವಕುಮಾರ್, ಮತ್ತೆ 3 ದಿನ ಕ್ಷೇತ್ರ ಪ್ರವಾಸ

ಲೋಕಸಭಾ ಚುನಾವಣೆಯಲ್ಲಾದ ಸೋಲನ್ನು ಮರೆಯಲು ಚನ್ನಪಟ್ಟಣ ಚುನಾವಣೆಯನ್ನು ಫುಲ್ ಸೀರಿಯಸ್ ಆಗಿ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್(DK Shivakumar), ‌ಚನ್ನಪಟ್ಟಣ ಪ್ರವಾಸವನ್ನ ಮುಂದುವರಿಸಿದ್ದಾರೆ. ಈಗಾಗಲೇ ಮೂರು ಬಾರಿ ಕಾರ್ಯಕ್ರಮ‌ ಯಶಸ್ವಿಗೊಳಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್​, ಜುಲೈ‌ 1‌ ರಿಂದ ಮೂರು ದಿನಗಳ ಕಾಲ ಮತ್ತೆ ಬೊಂಬೆನಾಡಿಗೆ ಭೇಟಿ ನೀಡಲಿದ್ದಾರೆ.

ಚನ್ನಪಟ್ಟಣವನ್ನು ಗಂಭೀರವಾಗಿ ತೆಗೆದುಕೊಂಡ ಡಿಕೆ ಶಿವಕುಮಾರ್, ಮತ್ತೆ 3 ದಿನ ಕ್ಷೇತ್ರ ಪ್ರವಾಸ
ಜುಲೈ 1 ರಿಂದ ಮತ್ತೆ ಚನ್ನಪಟ್ಟಣ ಪ್ರವಾಸ ಕೈಗೊಂಡ ಡಿಕೆ ಶಿವಕುಮಾರ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jun 28, 2024 | 10:39 PM

Share

ರಾಮನಗರ, ಜೂ.28: ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ರಾಜೀನಾಮೆ ಬಳಿಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ(Channapatnam by election) ನಡೆಯಲಿದ್ದು, ಹೇಗಾದರೂ ಅದನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್​ ಹರಸಾಹಸ ಪಡುತ್ತಿದೆ. ಅದರಂತೆ ಲೋಕಸಭಾ ಚುನಾವಣೆಯಲ್ಲಾದ ಸೋಲನ್ನು ಮರೆಯಲು ಚನ್ನಪಟ್ಟಣ ಚುನಾವಣೆಯನ್ನು ಫುಲ್ ಸೀರಿಯಸ್ ಆಗಿ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್(DK Shivakumar), ‌ಚನ್ನಪಟ್ಟಣ ಪ್ರವಾಸವನ್ನ ಮುಂದುವರಿಸಿದ್ದಾರೆ.

ಎರಡು ವಾರದ ಅಂತರದಲ್ಲಿ ಸತತ ಆರನೇ ಪ್ರವಾಸ

ಹೌದು, ಲೋಕಸಭಾ ಸೋಲಿನಿಂದ ಕೆರಳಿರುವ ಕನಕಪುರದ ಬಂಡೆ ಡಿಕೆ ಸಿವಕುಮಾರ್​, ಎರಡು ವಾರದ ಅಂತರದಲ್ಲಿ ಸತತ ಆರನೇ ಪ್ರವಾಸ ಕೈಗೊಂಡಿದ್ದಾರೆ. ಜುಲೈ‌ 1‌ ರಿಂದ ಮೂರು ದಿನಗಳ ಕಾಲ ಮತ್ತೆ ಬೊಂಬೆನಾಡಿಗೆ ಭೇಟಿ ನೀಡಲಿದ್ದಾರೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರವನ್ನ ವಶಕ್ಕೆ ಪಡೆಯಲು ಜಬರ್ ದಸ್ತ್ ಕಸರತ್ತು ನಡೆಸಿದ್ದಾರೆ.

ಇದನ್ನೂ ಓದಿ:ಚನ್ನಪಟ್ಟಣ ಬೈ ಎಲೆಕ್ಷನ್: ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ ಫೈಟ್‌, ದಿಲ್ಲಿಯಿಂದ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಚನ್ನಪಟ್ಟಣ ಪ್ರವಾಸದ ವಿವರ ಹೀಗಿದೆ

  • ಜುಲೈ 1 ತಾರೀಕಿಗೆ ಭೂಹಳ್ಳಿ, ವಿರಾಪಿಕ್ಷಿಪುರ ಗ್ರಾಮಕ್ಕೆ ಭೇಟಿ
  • ಜುಲೈ-2‌ ರಂದು ಮಳೂರು, ಹೊಂಗನೂರಿಗೆ ಭೇಟಿ
  • ಜುಲೈ-3‌ರಂದು ಚನ್ನಪಟ್ಟಣ ಟೌನ್ ನಲ್ಲಿ ಎರಡು ಕಡೆ ಕಾರ್ಯಕ್ರಮ
  • ರಾಜ್ಯ ಸರಕಾರದ ನೂತನ ಕಾರ್ಯಕ್ರಮ ಜನಸ್ಪಂದನ ಸಭೆ

ಈಗಾಗಲೇ ಮೂರು ಬಾರಿ ಕಾರ್ಯಕ್ರಮ‌ ಯಶಸ್ವಿಗೊಳಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್​, ಮನೆ ಬಾಗಿಲಿಗೆ ಸರ್ಕಾರ,‌ ಸೇವೆಗೆ ಇರಲಿ ಸಹಕಾರ ಎಂಬ ಟೈಟಲ್ ಅಡಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಮೂಲಕ ಹೇಗಾದರೂ ಮಾಡಿ ಮತದಾರ ಪ್ರಭುಗಳನ್ನು ಒಲಿಸಿಕೊಳ್ಳಲು ಸ್ವತಃ ಡಿಸಿಎಂ ಹರಸಾಹಸ ಪಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?