AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಹಬ್ಬದಂದು ಕಾಣುವ ವಿಶೇಷ ಕಪ್ಪು ಕಬ್ಬನ್ನ ಎಲ್ಲಿ, ಹೇಗೆ ಬೆಳೆಯುತ್ತಾರೆ ಗೊತ್ತಾ…?

ಮಕರ ಸಂಕ್ರಾಂತಿಯಂದು ಚನ್ನಪಟ್ಟಣ ತಾಲೂಕಿನ ಪಟ್ಲು ಗ್ರಾಮದಲ್ಲಿ ವಿಶೇಷವಾಗಿ ಈ ಕಪ್ಪು ಕಬ್ಬನ್ನ ಬೆಳೆಯಲಾಗುತ್ತದೆ. ಇಲ್ಲಿಂದಲೇ ರಾಜ್ಯದ ಅನೇಕ ಭಾಗಗಳಿಗೆ ಸಂಕ್ರಾಂತಿ ಕಪ್ಪು ಕಬ್ಬು ರಫ್ತಾಗುತ್ತದೆ.

ಸಂಕ್ರಾಂತಿ ಹಬ್ಬದಂದು ಕಾಣುವ ವಿಶೇಷ ಕಪ್ಪು ಕಬ್ಬನ್ನ ಎಲ್ಲಿ, ಹೇಗೆ ಬೆಳೆಯುತ್ತಾರೆ ಗೊತ್ತಾ...?
ಕಪ್ಪು ಕಬ್ಬು
TV9 Web
| Edited By: |

Updated on: Jan 15, 2023 | 9:33 AM

Share

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪಟ್ಲು ಎಂಬ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬಕ್ಕೆಂದೇ ವಿಶೇಷವಾಗಿ ಕಪ್ಪು ಕಬ್ಬನ್ನು ಬೆಳೆಯುತ್ತಾರೆ. ಸಂಕ್ರಾಂತಿ ಹಬ್ಬಕ್ಕೂ ಎರಡು ದಿನಗಳ ಮುನ್ನಾ ಕಬ್ಬನ್ನ ಕಟಾವು ಮಾಡಿ ಮಾರಾಟ ಮಾಡಲಾಗುತ್ತದೆ. ಈ ಗ್ರಾಮದಲ್ಲಿ ಬೆಳೆಯಲಾದ ಸಂಕ್ರಾಂತಿ ಕಬ್ಬನ್ನು ಬಹುತೇಕ ರಾಮನಗರ, ಬೆಂಗಳೂರು, ಮೈಸೂರು ಸೇರಿದಂತೆ ಹೊರ ರಾಜ್ಯಗಳಿಗೂ ಮಾರಾಟವಾಗುತ್ತದೆ. ನಾಡಿನಾದ್ಯಂತ ಈ ಹಬ್ಬವನ್ನ ತುಂಬಾ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತದೆ. ಹೀಗಾಗಿ ಸಂಕ್ರಾಂತಿ ಹಬ್ಬಕ್ಕೆಂದೆ ಪಟ್ಲು ಗ್ರಾಮದಲ್ಲಿ ಕಪ್ಪು ಕಬ್ಬನ್ನ ಬೆಳೆಯುತ್ತಾರೆ.

ಕಪ್ಪು ಕಬ್ಬನ್ನ ಬೆಳೆಯುವ ರೀತಿಯೇ ಬೇರೆ

ಇನ್ನು ಪಟ್ಲು ಗ್ರಾಮದಲ್ಲಿ ಸುಮಾರು 40 ವರ್ಷಗಳಿಂದ ಈ ಕಪ್ಪು ಕಬ್ಬನ್ನ ಬೆಳೆಯಲಾಗುತ್ತಿದೆ. ಅಂದಹಾಗೆ ಕಪ್ಪು ಕಬ್ಬನ್ನ ಬೆಳೆಯುವುದು ಬೇರೆ ತಳಿಯ ಕಬ್ಬನ್ನು ಬೆಳೆಯುವ ರೀತಿಯಲ್ಲಿ ಅಲ್ಲ. ಇದನ್ನು ವಿವಿಧ ರೀತಿಯಲ್ಲಿ ಪೋಷಣೆ ಮಾಡಬೇಕು. ಮಗುವಿನ ರೀತಿಯಲ್ಲಿ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. ಸಂಕ್ರಾಂತಿ ಹಬ್ಬದ ನಂತರ ಬಿತ್ತನೆ ಮಾಡಿ ಮುಂದಿನ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಕಬ್ಬನ್ನ ಕಟಾವು ಮಾಡುತ್ತಾರೆ. ದಲ್ಲಾಳಿಗಳು ಜಮೀನಿಗೆ ಬಂದು ಕಬ್ಬನ್ನ ತೆಗೆದುಕೊಂಡು ಹೋಗುತ್ತಾರೆ. ಹೀಗಾಗಿ ಪಟ್ಲು ಗ್ರಾಮದ ನೂರಾರು ಹೆಕ್ಟರ್ ಪ್ರದೇಶದಲ್ಲಿ ಕಪ್ಪು ಕಬ್ಬನ್ನೇ ಬೆಳೆಯುತ್ತಾರೆ. ಆದರೆ ಈ ಬಾರಿ ಕಬ್ಬಿಗೆ ಉತ್ತಮ ಬೇಡಿಕೆ ಇಲ್ಲದಂತೆ ಆಗಿದೆ. ಮೊದಲೆಲ್ಲಾ ಕಡಿಮೆ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದ ಕಪ್ಪು ಕಬ್ಬು ಈಗ ಹೆಚ್ಚಾಗಿ ಬೆಳೆಯಲಾಗುತ್ತಿದ್ದು ಈ ಬಾರಿ ಬೆಲೆಯೂ ಕಡಿಮೆ, ಬೇಡಿಕೆ ಕೂಡ ಕಡಿಮೆಯಾಗಿದ್ದು ರೈತನನ್ನ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಇದನ್ನೂ ಓದಿ:Makar Sankranti 2023: ಸಂಕ್ರಾಂತಿಯ ಮಕರ ಸ್ನಾನದ ಮಹತ್ವವೇನು? ಅಂದು ಮಾಡುವ ದಾನ ಶ್ರೇಷ್ಠ ಎಂಬ ನಂಬಿಕೆಯಿದೆ

ಒಟ್ಟಾರೆ ಇಂದು ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಜನರು ಆಚರಿಸುತ್ತಿದ್ದು, ಇಂತಹ ಹಬ್ಬಕ್ಕೆಂದೆ ಪಟ್ಲು ಗ್ರಾಮದಲ್ಲಿ ಕಪ್ಪು ಕಬ್ಬನ್ನ ಬೆಳೆಯುತ್ತಿರುವುದು ವಿಶೇಷ. ನೀವು ಸಹಾ ಎಳ್ಳು-ಬೆಲ್ಲದ ಜೊತೆಗೆ ಸಿಹಿಯಾದ ಕಬ್ಬನ್ನ ತಿಂದು ಸಂಭ್ರಮದಿಂದ ಹಬ್ಬವನ್ನ ಆಚರಿಸಿ ಎನ್ನುವುದು ನಮ್ಮ ಆಶಯ.

ವರದಿ:ಪ್ರಶಾಂತ್ ಹುಲಿಕೆರೆ ಟಿವಿ9 ರಾಮನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ